ಕೃಷಿ ಥಪಂಡ 
ಸಿನಿಮಾ ಸುದ್ದಿ

'ಅಮರ ಚಿತ್ರ ಕಥಾ'ಗೆ ಕೊಡಗಿನ ಚೆಲುವೆ ಸೇರ್ಪಡೆ

ಡೈಸಿ ಬೋಪಣ್ಣ, ನಿಧಿ ಸುಬ್ಬಯ್ಯ, ಹರ್ಷಿಕ ಪೂಣಚ್ಚ ಇವರುಗಳ ನಂತರ ಕೊಡಗಿನಿಂದ ಸ್ಯಾಂಡಲ್ವುಡ್ ಗೆ ಹೊಸ ಎಂಟ್ರಿ ಕೃಷಿ ಥಪಂಡ.

ಬೆಂಗಳೂರು: ಡೈಸಿ ಬೋಪಣ್ಣ, ನಿಧಿ ಸುಬ್ಬಯ್ಯ, ಹರ್ಷಿಕ ಪೂಣಚ್ಚ ಇವರುಗಳ ನಂತರ ಕೊಡಗಿನಿಂದ ಸ್ಯಾಂಡಲ್ವುಡ್ ಗೆ ಹೊಸ ಎಂಟ್ರಿ ಕೃಷಿ ಥಪಂಡ. ರಾಜವರ್ಧನ್ ಅವರ ಹೊಸ ಚಿತ್ರ 'ಅಮರ ಚಿತ್ರ ಕಥಾ'ಗೆ ಈ ಕೊಡಗಿನ ಚೆಲುವೆ ಆಯ್ಕೆಯಾಗಿದ್ದಾರೆ. ಕೃಷಿ ಅವರು ತಮ್ಮ ವೃತ್ತಿ ಜೀವನ ಆರಂಭಿಸಿದ್ದು ತಮಿಳು ಚಿತ್ರದಿಂದ. ಇದು ಅವರ ನಾಲ್ಕನೇ ಚಿತ್ರ. "ನನ್ನ ತಮಿಳು ಚಿತ್ರದ ಚಿತ್ರೀಕರಣ ಮುಗಿದಿದೆ. ಇನ್ನೊಂದು ತಿಂಗಳಲ್ಲಿ ಬಿಡುಗಡೆ ಕಾಣುವ ಸಾಧ್ಯತೆ ಇದೆ. ಕನ್ನಡದಲ್ಲಿ 'ಕಹಿ' ಎಂಬ ಚಿತ್ರದಲ್ಲೂ ನಟಿಸಿದ್ದೇನೆ. ಅದು ಜೂನ್ ಕೊನೆಯ ಭಾಗಕ್ಕೆ ಬಿಡುಗಡೆ ಕಾಣುವ ಸಾಧ್ಯತೆ ಇದೆ. ಸದ್ಯಕ್ಕೆ 'ಅಕಿರಾ' ಸಿನೆಮಾದ ಚಿತ್ರೀಕರಣದಲ್ಲಿದ್ದೇನೆ. ಈ ಸಮಯದಲ್ಲೇ 'ಅಮರ ಚಿತ್ರ ಕಥಾ'ಗೆ ಅವಕಾಶ ಸಿಕ್ಕಿದೆ. ಆ ಚಿತ್ರದ ಚಿತ್ರೀಕರಣ ಏಪ್ರಿಲ್ ೨೪ ರಿಂದ ಪ್ರಾರಂಭವಾಗಲಿದೆ" ಎನ್ನುತ್ತಾರೆ ಕೃಷಿ.

ಶಾಸ್ತ್ರೀಯ ನೃತ್ಯಗಾರ್ತಿಯಾಗಿರುವ ಕೃಷಿ ತನ್ನ ಸಾಮರ್ಥ್ಯದ ಮೇಲೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. "ಬಹು ರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದೆ. ಒಂಭತ್ತು ತಿಂಗಳ ಹಿಂದ ಸೌಂದರ್ಯ ಸ್ಪರ್ಧೆಯೊಂದರಲ್ಲಿ ಭಾಗವಹಿಸುವಂತೆ ನನ್ನ ಗೆಳೆಯರು ಸೂಚಿಸಿದರು. ಮಿಸ್ ಕರ್ನಾಟಕ ಆದೆ. ತಮಿಳು ಚಿತ್ರದ ಆಡಿಶನ್ ನಲ್ಲಿ ಭಾಗವಹಿಸಿ ಆಯ್ಕೆಯಾದೆ. ಹೀಗೆ ಅವಕಾಶಗಳು ಹುಡುಕಿಕೊಂಡು ಬಂದವು" ಎನ್ನುತ್ತಾರೆ ಕೃಷಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT