ಕಮಲ ಹಾಸನ್ 
ಸಿನಿಮಾ ಸುದ್ದಿ

'ಉತ್ತಮ ವಿಲನ್' ತೊಂದರೆಯೇನಿಲ್ಲ; ವಿ ಎಚ್ ಪಿ ಅರ್ಜಿ ವಜಾ ಮಾಡಿದ ಕೋರ್ಟ್

ವಿಶ್ವ ಹಿಂದೂ ಪರಿಷದ್ ಆರೋಪಿಸಿದಂತೆ ಯಾವುದೇ ತಪ್ಪು ಕಂಡುಬಂದಿಲ್ಲ ಎಂದಿರುವ ಮದ್ರಾಸ್ ಹೈಕೋರ್ಟ್,

ಚೆನ್ನೈ: ವಿಶ್ವ ಹಿಂದೂ ಪರಿಷದ್ ಆರೋಪಿಸಿದಂತೆ ಯಾವುದೇ ತಪ್ಪು ಕಂಡುಬಂದಿಲ್ಲ ಎಂದಿರುವ ಮದ್ರಾಸ್ ಹೈಕೋರ್ಟ್, ಇನ್ನೂ ಬಿಡುಗಡೆಯಾಗಬೇಕಿರುವ ಕಮಲ್ ಹಾಸನ್ ನಟನೆಯ 'ಉತ್ತಮ ವಿಲನ್' ಸಿನೆಮಾದಲ್ಲಿ ದೇವರು ವಿಷ್ಣುವಿನ ಬಗ್ಗೆ ಬಳಸಿರುವ ಕೆಲವು ನಿಂದನಾತ್ಮಕ ಪದಗಳನ್ನು ತೆಗೆದುಹಾಕಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ಕಮಲಹಾಸನ್ ನಟನೆಯ ಈ ಸಿನೆಮಾದ ಹಾಡೊಂದರಲ್ಲಿ "ಉದಿರಥಿನ್ ಕಥೈ' (ರಕ್ತದ ಕಥೆ) ವಿಷ್ಣುವಿನ ಅವತಾರಗಳ ಬಗ್ಗೆ ನಿಂದನಾತ್ಮಕವಾಗಿ ಚಿತ್ರಿಸಲಾಗಿದೆ ಎಂದು ದೂರಿ ವಿ ಎಚ್ ಪಿ ಸಂಘಟನೆಯ ಕಾರ್ಯದರ್ಶಿ ಎಸ್ ರಾಜಾ ಕೋರ್ಟ್ ಮೊರೆ ಹೋಗಿದ್ದರು. ನಿರ್ಮಾಪಕರು ಸಿನೆಮಾವನ್ನು ಬಿಡುಗಡೆ ಮಾಡದಂತೆ ಮಧ್ಯಂತರ ತಡೆಯನ್ನು ಕೂಡ ಕೋರಿದ್ದರು. ವಿಷ್ಣುವನ್ನು ಟೀಕೆ ಮಾಡಲು ಪ್ರಯತ್ನಿಸಲಾಗಿದೆ ಇದು ವಿಷ್ಣುವಿಗೆ ಅವಮಾನ ಮಾಡುವುದಷ್ಟೇ ಅಲ್ಲ ಅಸಂಖ್ಯಾತ ಹಿಂದುಗಳ ನಂಬಿಕೆ ಮತ್ತು ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತದೆ ಎಂದು ಅವರು ದೂರಿದ್ದರು.

ಸೆನ್ಸಾರ್ ಮಂಡಲಿ, ತಮಿಳುನಾಡು ಗೃಹ ಕಾರ್ಯದರ್ಶಿ, ಚೆನ್ನೈ ಪೊಲೀಸ್ ಆಯುಕ್ತ ಇವರುಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೂಡ ಅರ್ಜಿದಾರ ದೂರಿದ್ದರು. ಇದನ್ನೆಲ್ಲಾ ಪರಿಗಣಿಸಿದ ನ್ಯಾಯಾಧೀಶ ಟಿ ರಾಜ, ಆ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT