ಶೇಷಾಚಲಂ ಎನ್ಕೌಂಟರ್ ನಡೆದ ಪ್ರದೇಶ 
ಸಿನಿಮಾ ಸುದ್ದಿ

ರಕ್ತಚಂದನ ಎನ್ಕೌಂಟರ್: ಈಗ ಸಿನೆಮಾ ಆಗಲಿದೆ

ಆಂಧ್ರದ ಶೇಷಾಚಲಂ ಅರಣ್ಯದಲ್ಲಿ ಇತ್ತೀಚೆಗೆ ಆಂಧ್ರ ಪೊಲೀಸರು ಎನ್ಕೌಂಟರ್ ನಲ್ಲಿ ಕೊಂದ ೨೦ ತಮಿಳು ನಾಡಿನ ಮರ ಕಡಿಯುವವರ ಕಥೆ ಈಗ

ಚೆನ್ನೈ: ಆಂಧ್ರದ ಶೇಷಾಚಲಂ ಅರಣ್ಯದಲ್ಲಿ ಇತ್ತೀಚೆಗೆ ಆಂಧ್ರ ಪೊಲೀಸರು ಎನ್ಕೌಂಟರ್ ನಲ್ಲಿ ಕೊಂದ ೨೦ ತಮಿಳು ನಾಡಿನ ಮರ ಕಡಿಯುವವರ ಕಥೆ ಈಗ ಬೆಳ್ಳಿತೆರೆಗೆ ಬರಲು ಸಿದ್ಧವಾಗುತ್ತಿದೆ. ತಮಿಳು ನಿರ್ದೇಶಕರಾದ ವಿ ಆರ್ ಕಾಳಿದಾಸ್ ಮತ್ತು ಅಗಸ್ಟಿನ್ ಜೊತೆಯಾಗಿ ಈ ಸಿನೆಮಾ ನಿರ್ದೇಶಿಸಲಿದ್ದಾರೆ.

'ತೂಕ್ಕುಮಾರ ಪೂಕಲ್' ಎಂದು ಹೆಸರಿಸಿರುವ ಈ ಸಿನೆಮಾಗೆ ಕಥೆ ಮತ್ತು ಸ್ಕ್ರೀನ್ ಪ್ಲೇ ಬರೆಯಲು 'ಅಪರಾಧಿ ಕಥೆ ಕಾದಂಬರಿ' ಪ್ರಾಕಾರದ ಜನಪ್ರಿಯ ಬರಹಗಾರ ರಾಜೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ನಿರ್ದೇಶಕರು ನೀಡಿರುವ ಹೇಳಿಕೆಯಲ್ಲಿ "ಮುಗ್ಧ ತಮಿಳು ಜನರನ್ನು ಕೊಂದ ಈ ಹೀನ ಕೃತ್ಯದ ಸತ್ಯವನ್ನು ಹೊರಗೆಡವಲು ಈ ಸೂಕ್ಷ್ಮ ಪ್ರಕರಣದ ಮೇಲೆ ಸಿನೆಮಾ ಮಾಡಲು ನಿರ್ಧರಿಸಿದ್ದೇವೆ" ಎಂದು ತಿಳಿಸಿದ್ದಾರೆ.

ಚಿತ್ರದ ತಂಡವನ್ನು ಇನ್ನು ತಿಳಿಸಬೇಕಿದೆ. ಕೊಯಂಬತ್ತೂರಿನಲ್ಲಿ ಈ ಶುಕ್ರವಾರದಿಂದ ಸಿನೆಮಾ ಚಿತ್ರೀಕರಣ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT