ಉತ್ತಮ ವಿಲನ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಉತ್ತಮವಾಗಿಲ್ಲ "ಉತ್ತಮ ವಿಲನ್" ಆರಂಭ

ನಟ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಉತ್ತಮ ವಿಲನ್ ಚಿತ್ರ ಶುಕ್ರವಾರ ದೇಶಾದ್ಯಂತ ತೆರೆಕಾಣಬೇಕಿತ್ತು. ಆದರೆ ಮೊದಲ ದಿನದ ಎಲ್ಲ ಪ್ರದರ್ಶನಗಳು ರದ್ದಾಗಿವೆ...

ಬೆಂಗಳೂರು: ನಟ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಉತ್ತಮ ವಿಲನ್ ಚಿತ್ರ ಶುಕ್ರವಾರ ದೇಶಾದ್ಯಂತ ತೆರೆಕಾಣಬೇಕಿತ್ತು. ಆದರೆ ನಿರ್ಮಾಪಕ ಮತ್ತು ವಿತರಕರ ನಡುವಿನ ಗೊಂದಲದಿಂದಾಗಿ ಮೊದಲ ದಿನದ ಎಲ್ಲ ಪ್ರದರ್ಶನಗಳು ರದ್ದಾಗಿವೆ.

ಪ್ರತಿಭಾನ್ವಿತ ನಟ ಮತ್ತು ನಿರ್ದೇಶಕ ರಮೇಶ್ ಅರವಿಂದ್ ನಿರ್ದೇಶನದ ಉತ್ತಮ ವಿಲನ್ ಚಿತ್ರ ಇಂದು ದೇಶಾದ್ಯಂತ ತೆರೆಕಾಣ ಬೇಕಿತ್ತು. ಆದರೆ ಚಿತ್ರ ನಿರ್ಮಾಪಕರು ಮತ್ತು ವಿತರಕರ ನಡುವಿನ ಆರ್ಥಿಕ ಸಮಸ್ಯೆಯಿಂದಾಗಿ ಮೊದಲ ದಿನದ ಶೋ ರದ್ದುಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳು ತಿಳಿಸಿರುವಂತೆ ನಿರ್ಮಾಪಕರು ಮತ್ತು ವಿತರಕರ ನಡುವೆ ಭುಗಿಲೆದ್ದಿರುವ ಈ ವಿವಾದ ಬಗೆಹರಿದಲ್ಲಿ ಮಾತ್ರ ಉತ್ತಮ ವಿಲನ್ ಬಿಡುಗಡೆ ನಿರಾತಂಕವಾಗಿ ಆಗಲಿದೆ. ಇಲ್ಲದಿದ್ದಲ್ಲಿ ಉತ್ತಮ ವಿಲನ್ ಬಿಡುಗಡೆಗೆ ಅಡ್ಡಿಯುಂಟಾಗಲಿದೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ ರಿಲೀಸ್ ಗೆ ಸಿದ್ಧವಾಗಿದ್ದ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಉತ್ತಮ ವಿಲನ್ ಚಿತ್ರ ವೀಕ್ಷಣೆಗಾಗಿ  ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸಾವಿರಾರು ಅಭಿಮಾನಿಗಳು ಟಿಕೆಟ್ ಬುಕ್ ಮಾಡಿದ್ದರು. ಆದರೆ ಇಂದು ಚಿತ್ರ ಪ್ರದರ್ಶನ ನಡೆಯದ ಹಿನ್ನಲೆಯಲ್ಲಿ ಚಿತ್ರಮಂದಿರದ ಬಳಿ ನೆರೆದಿರುವ ಸಾವಿರಾರು ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಚೆನ್ನೈ, ಹೈದರಾಬಾದ್ ಸೇರಿದಂತೆ ಬೆಂಗಳೂರಿನ ಊರ್ವಶಿ ಥಿಯೇಟರ್ ನಲ್ಲಿ ಅಭಿಮಾನಿಗಳು ನಿರ್ಮಾಪಕ ಮತ್ತು ವಿತರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಮೊದಲ ದಿನದ ಶೋ ರದ್ದಾಗಿರುವುದರಿಂದ ಮಾಲೀಕರು ಟಿಕೆಟ್ ಹಣವನ್ನು ವಾಪಸ್ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನ ಊರ್ವಶಿ ಥಿಯೇಟರ್ ಸೇರಿದಂತೆ ನಗರದ ಹಲವು ಚಿತ್ರಮಂದಿರಗಳಲ್ಲಿ ಉತ್ತಮ ವಿಲನ್ ಚಿತ್ರ ವೀಕ್ಷಣೆಗಾಗಿ ಟಿಕೆಟ್ ಕಾಯ್ದಿರಿಸಿದ್ದರು. ಆದರೆ ಶೋ ರದ್ದಾದ ಹಿನ್ನಲೆಯಲ್ಲಿ ಅವರು ವಾಪಸಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT