ಉತ್ತಮ ವಿಲನ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಉತ್ತಮವಾಗಿಲ್ಲ "ಉತ್ತಮ ವಿಲನ್" ಆರಂಭ

ನಟ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಉತ್ತಮ ವಿಲನ್ ಚಿತ್ರ ಶುಕ್ರವಾರ ದೇಶಾದ್ಯಂತ ತೆರೆಕಾಣಬೇಕಿತ್ತು. ಆದರೆ ಮೊದಲ ದಿನದ ಎಲ್ಲ ಪ್ರದರ್ಶನಗಳು ರದ್ದಾಗಿವೆ...

ಬೆಂಗಳೂರು: ನಟ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಉತ್ತಮ ವಿಲನ್ ಚಿತ್ರ ಶುಕ್ರವಾರ ದೇಶಾದ್ಯಂತ ತೆರೆಕಾಣಬೇಕಿತ್ತು. ಆದರೆ ನಿರ್ಮಾಪಕ ಮತ್ತು ವಿತರಕರ ನಡುವಿನ ಗೊಂದಲದಿಂದಾಗಿ ಮೊದಲ ದಿನದ ಎಲ್ಲ ಪ್ರದರ್ಶನಗಳು ರದ್ದಾಗಿವೆ.

ಪ್ರತಿಭಾನ್ವಿತ ನಟ ಮತ್ತು ನಿರ್ದೇಶಕ ರಮೇಶ್ ಅರವಿಂದ್ ನಿರ್ದೇಶನದ ಉತ್ತಮ ವಿಲನ್ ಚಿತ್ರ ಇಂದು ದೇಶಾದ್ಯಂತ ತೆರೆಕಾಣ ಬೇಕಿತ್ತು. ಆದರೆ ಚಿತ್ರ ನಿರ್ಮಾಪಕರು ಮತ್ತು ವಿತರಕರ ನಡುವಿನ ಆರ್ಥಿಕ ಸಮಸ್ಯೆಯಿಂದಾಗಿ ಮೊದಲ ದಿನದ ಶೋ ರದ್ದುಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳು ತಿಳಿಸಿರುವಂತೆ ನಿರ್ಮಾಪಕರು ಮತ್ತು ವಿತರಕರ ನಡುವೆ ಭುಗಿಲೆದ್ದಿರುವ ಈ ವಿವಾದ ಬಗೆಹರಿದಲ್ಲಿ ಮಾತ್ರ ಉತ್ತಮ ವಿಲನ್ ಬಿಡುಗಡೆ ನಿರಾತಂಕವಾಗಿ ಆಗಲಿದೆ. ಇಲ್ಲದಿದ್ದಲ್ಲಿ ಉತ್ತಮ ವಿಲನ್ ಬಿಡುಗಡೆಗೆ ಅಡ್ಡಿಯುಂಟಾಗಲಿದೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ ರಿಲೀಸ್ ಗೆ ಸಿದ್ಧವಾಗಿದ್ದ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಉತ್ತಮ ವಿಲನ್ ಚಿತ್ರ ವೀಕ್ಷಣೆಗಾಗಿ  ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸಾವಿರಾರು ಅಭಿಮಾನಿಗಳು ಟಿಕೆಟ್ ಬುಕ್ ಮಾಡಿದ್ದರು. ಆದರೆ ಇಂದು ಚಿತ್ರ ಪ್ರದರ್ಶನ ನಡೆಯದ ಹಿನ್ನಲೆಯಲ್ಲಿ ಚಿತ್ರಮಂದಿರದ ಬಳಿ ನೆರೆದಿರುವ ಸಾವಿರಾರು ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಚೆನ್ನೈ, ಹೈದರಾಬಾದ್ ಸೇರಿದಂತೆ ಬೆಂಗಳೂರಿನ ಊರ್ವಶಿ ಥಿಯೇಟರ್ ನಲ್ಲಿ ಅಭಿಮಾನಿಗಳು ನಿರ್ಮಾಪಕ ಮತ್ತು ವಿತರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಮೊದಲ ದಿನದ ಶೋ ರದ್ದಾಗಿರುವುದರಿಂದ ಮಾಲೀಕರು ಟಿಕೆಟ್ ಹಣವನ್ನು ವಾಪಸ್ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನ ಊರ್ವಶಿ ಥಿಯೇಟರ್ ಸೇರಿದಂತೆ ನಗರದ ಹಲವು ಚಿತ್ರಮಂದಿರಗಳಲ್ಲಿ ಉತ್ತಮ ವಿಲನ್ ಚಿತ್ರ ವೀಕ್ಷಣೆಗಾಗಿ ಟಿಕೆಟ್ ಕಾಯ್ದಿರಿಸಿದ್ದರು. ಆದರೆ ಶೋ ರದ್ದಾದ ಹಿನ್ನಲೆಯಲ್ಲಿ ಅವರು ವಾಪಸಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ