ಶ್ರೀಶಾಂತ್ 
ಸಿನಿಮಾ ಸುದ್ದಿ

ತ್ರಿಭಾಷಾ ಚಿತ್ರದಲ್ಲಿ ಶ್ರೀಶಾಂತ್ ನಾಯಕ

ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿರುವ ಮಾಜಿ ಕ್ರಿಕೆಟಿಗ ಕೇರಳದ ವೇಗಿ ಎಸ್‌. ಶ್ರೀಶಾಂತ್‌ ಅವರು ತ್ರಿಭಾಷಾ ಚಿತ್ರವೊಂದರಲ್ಲಿ ನಾಯಕ....

ಕೊಚ್ಚಿ:  ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿರುವ ಮಾಜಿ ಕ್ರಿಕೆಟಿಗ ಎಸ್‌. ಶ್ರೀಶಾಂತ್‌ ಅವರು ತ್ರಿಭಾಷಾ ಚಿತ್ರವೊಂದರಲ್ಲಿ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ.

ತೆಲುಗು, ತಮಿಳು ಹಾಗೂ ಮಲಯಾಳಂ ಮೂರು ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆಕಾಣಲಿರುವ ದಕ್ಷಿಣ ಭಾರತ ಬಿಗ್ ಬಜೆಟ್ ಶ್ರೀಶಾಂತ್ ಅಭಿನಯಿಸುತ್ತಿದ್ದು, ಈ ಚಿತ್ರವನ್ನು ಸನಾ ಯಾದಿರೆಡ್ಡಿ ಈ ಚಿತ್ರದ ನಿರ್ಮಿಸುತ್ತಿದ್ದಾರೆ.

ಶ್ರೀಶಾಂತ್‌ ಹಾಗೂ ಐಪಿಎಲ್‌ಗೆ ಸಂಬಂಧಿಸಿದ ಮಸಾಲೆಭರಿತ ಕಥೆ ಈ ಸಿನಿಮಾದಲ್ಲಿದ್ದು, ಇದು ಕ್ರಿಕೆಟ್‌ ಹಿನ್ನೆಲೆಯನ್ನು ಒಳಗೊಂಡಿರುವ ಪ್ರೇಮಕಥೆ ಎಂದು ನಿರ್ಮಾಪಕರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಆರು ತಿಂಗಳಿನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ. ಈ ಸಿನಿಮಾವನ್ನು 14 ಭಾಷೆಗೆ ಡಬ್‌ ಮಾಡಲಿದ್ದೇವೆ ಎಂದು ಯಾದಿರೆಡ್ಡಿ ತಿಳಿಸಿದ್ದಾರೆ.

ಶ್ರೀಶಾಂತ್‌ ಉತ್ತಮ ಕ್ರಿಕೆಟಿಗ ಮಾತ್ರ ಅಲ್ಲ. ಅವರು ನೃತ್ಯ ಮತ್ತು ನಟನೆಯಲ್ಲೂ ಪಳಗಿದ್ದಾರೆ ಎಂದು ಯಾದಿರೆಡ್ಡಿ ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಶಾಂತ್, ಈಗಾಗಲೇ ಪೂಜಾ ಭಟ್‌ ನಿರ್ಮಾಣದ ಬಾಲಿವುಡ್‌ ಸಿನಿಮಾ ಒಂದರಲ್ಲಿ ನಟಿಸಿದ ಅನುಭವ ಇದೆ. ಯಾದಿರೆಡ್ಡಿ ಅತ್ಯುತ್ತಮ ನಿರ್ಮಾಪಕರು. ಅವರೊಂದಿಗೆ ಕೆಲಸ ಮಾಡುವ ಅದೃಷ್ಟ ನನಗೆ ಸಿಕ್ಕಿದೆ. ಇದರಿಂದ ನಟನೆಯಲ್ಲಿ ದಕ್ಷಿಣ ಭಾರತದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT