ಶ್ರೀಶಾಂತ್ 
ಸಿನಿಮಾ ಸುದ್ದಿ

ತ್ರಿಭಾಷಾ ಚಿತ್ರದಲ್ಲಿ ಶ್ರೀಶಾಂತ್ ನಾಯಕ

ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿರುವ ಮಾಜಿ ಕ್ರಿಕೆಟಿಗ ಕೇರಳದ ವೇಗಿ ಎಸ್‌. ಶ್ರೀಶಾಂತ್‌ ಅವರು ತ್ರಿಭಾಷಾ ಚಿತ್ರವೊಂದರಲ್ಲಿ ನಾಯಕ....

ಕೊಚ್ಚಿ:  ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿರುವ ಮಾಜಿ ಕ್ರಿಕೆಟಿಗ ಎಸ್‌. ಶ್ರೀಶಾಂತ್‌ ಅವರು ತ್ರಿಭಾಷಾ ಚಿತ್ರವೊಂದರಲ್ಲಿ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ.

ತೆಲುಗು, ತಮಿಳು ಹಾಗೂ ಮಲಯಾಳಂ ಮೂರು ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆಕಾಣಲಿರುವ ದಕ್ಷಿಣ ಭಾರತ ಬಿಗ್ ಬಜೆಟ್ ಶ್ರೀಶಾಂತ್ ಅಭಿನಯಿಸುತ್ತಿದ್ದು, ಈ ಚಿತ್ರವನ್ನು ಸನಾ ಯಾದಿರೆಡ್ಡಿ ಈ ಚಿತ್ರದ ನಿರ್ಮಿಸುತ್ತಿದ್ದಾರೆ.

ಶ್ರೀಶಾಂತ್‌ ಹಾಗೂ ಐಪಿಎಲ್‌ಗೆ ಸಂಬಂಧಿಸಿದ ಮಸಾಲೆಭರಿತ ಕಥೆ ಈ ಸಿನಿಮಾದಲ್ಲಿದ್ದು, ಇದು ಕ್ರಿಕೆಟ್‌ ಹಿನ್ನೆಲೆಯನ್ನು ಒಳಗೊಂಡಿರುವ ಪ್ರೇಮಕಥೆ ಎಂದು ನಿರ್ಮಾಪಕರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಆರು ತಿಂಗಳಿನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ. ಈ ಸಿನಿಮಾವನ್ನು 14 ಭಾಷೆಗೆ ಡಬ್‌ ಮಾಡಲಿದ್ದೇವೆ ಎಂದು ಯಾದಿರೆಡ್ಡಿ ತಿಳಿಸಿದ್ದಾರೆ.

ಶ್ರೀಶಾಂತ್‌ ಉತ್ತಮ ಕ್ರಿಕೆಟಿಗ ಮಾತ್ರ ಅಲ್ಲ. ಅವರು ನೃತ್ಯ ಮತ್ತು ನಟನೆಯಲ್ಲೂ ಪಳಗಿದ್ದಾರೆ ಎಂದು ಯಾದಿರೆಡ್ಡಿ ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಶಾಂತ್, ಈಗಾಗಲೇ ಪೂಜಾ ಭಟ್‌ ನಿರ್ಮಾಣದ ಬಾಲಿವುಡ್‌ ಸಿನಿಮಾ ಒಂದರಲ್ಲಿ ನಟಿಸಿದ ಅನುಭವ ಇದೆ. ಯಾದಿರೆಡ್ಡಿ ಅತ್ಯುತ್ತಮ ನಿರ್ಮಾಪಕರು. ಅವರೊಂದಿಗೆ ಕೆಲಸ ಮಾಡುವ ಅದೃಷ್ಟ ನನಗೆ ಸಿಕ್ಕಿದೆ. ಇದರಿಂದ ನಟನೆಯಲ್ಲಿ ದಕ್ಷಿಣ ಭಾರತದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT