ಸಲ್ಮಾನ್ ಖಾನ್ 
ಸಿನಿಮಾ ಸುದ್ದಿ

ಜನರ ಪ್ರೀತಿಯೇ ನನಗೆ ರಾಷ್ಟ್ರೀಯ ಪ್ರಶಸ್ತಿ: ಸಲ್ಮಾನ್ ಖಾನ್

ಬಾಲಿವುಡ್ ನಲ್ಲಿ ದಾಖಲೆ ನಿರ್ಮಿಸಿರುವ ಭಜರಂಗಿ ಭಾಯಿ ಜಾನ್ ಚಿತ್ರದ ನಟನೆಗೆ ಜನರಿಂದ ವ್ಯಕ್ತವಾದ ಪ್ರೀತಿಯೇ ನನಗೆ ರಾಷ್ಟ್ರೀಯ ಪ್ರಶಸ್ತಿ ಎಂದು ನಟ ಸಲ್ಮಾನ್ ಖಾನ್ ಹೇಳಿದ್ದಾರೆ.

ಮುಂಬೈ: ಬಾಲಿವುಡ್ ನಲ್ಲಿ ದಾಖಲೆ ನಿರ್ಮಿಸಿರುವ ಭಜರಂಗಿ ಭಾಯಿ ಜಾನ್ ಚಿತ್ರದ ನಟನೆಗೆ ಜನರಿಂದ ವ್ಯಕ್ತವಾದ ಪ್ರೀತಿಯೇ ನನಗೆ ರಾಷ್ಟ್ರೀಯ ಪ್ರಶಸ್ತಿ ಎಂದು ನಟ ಸಲ್ಮಾನ್ ಖಾನ್ ಹೇಳಿದ್ದಾರೆ.
ಭಜರಂಗಿ ಭಾಯಿ ಜಾನ್ ಚಿತ್ರದ ಬಗ್ಗೆ ಮಾತನಾಡಿದ್ದ ಕರೀನಾ ಕಪೂರ್, ಸಲ್ಮಾನ್ ಖಾನ್ ಮನೋಜ್ಞ ನಟನೆಗೆ ಪ್ರತಿಷ್ಠಿತ ಪ್ರಶಸ್ತಿ ದೊರೆಯುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಲ್ಮಾನ್ ಖಾನ್ ಜನರ ಪ್ರೀತಿಯೇ ನನಗೆ ರಾಷ್ಟ್ರೀಯ ಪ್ರಶಸ್ತಿ, ಈ ಪ್ರಶಸ್ತಿಯನ್ನು ಪಡೆಯಲು ನನಗಿಂಟಲೂ ಸಾಕಷ್ಟು ಅರ್ಹರಿದ್ದಾರೆ ಎಂದಿದ್ದಾರೆ. ಭಜರಂಗಿ ಭಾಯಿ ಜಾನ್ ಚಿತ್ರವನ್ನು ಜನರು ಇಷ್ಟಪಟ್ಟಿದ್ದಾರೆ. ಅನೇಕರು ಮೂರು- ನಾಲ್ಕು ಬಾರಿ ಚಿತ್ರವನ್ನು ವೀಕ್ಷಿಸಿದ್ದಾರೆ, ಇದಕ್ಕಿಂತಲೂ ಮಿಗಿಲಾದ ರಾಷ್ಟ್ರೀಯ ಪ್ರಶಸ್ತಿ ಇಲ್ಲ ಎಂದು ಸಲ್ಮಾನ್ ಖಾನ್ ಸಂತಸ ವ್ಯಕ್ತಪಡಿಸಿದ್ದಾರೆ.

ಚಿತ್ರಕ್ಕೆ ಈ ರೀತಿ ಜನಪ್ರಿಯಗೊಳ್ಳುವ ನಿರೀಕ್ಷೆ ಇತ್ತು, ಭಾರತ- ಪಾಕಿಸ್ತಾನದ ಬಗ್ಗೆ ತೆರೆಕಂಡಿರುವ ಸಿನಿಮಾಗಳಲ್ಲಿ ಭಯೋತ್ಪಾದನೆ ಇಲ್ಲವೇ, ಸೇನೆಯ ಅಂಶಗಳಿರುತ್ತವೆ. ಉಭಯ ದೇಶಗಳ ಸಾಮಾನ್ಯ ಜನರ ಸ್ಥಿತಿಯನ್ನು ಈವರೆಗೂ ತೋರಿಸಿರಲಿಲ್ಲ, ಈ ಸಿನಿಮಾದಲ್ಲಿ ಆ ಅಂಶವನ್ನು ತೋರಿಸಿದ್ದೇವೆ ಎಂದಿದ್ದಾರೆ ಸಲ್ಮಾನ್ ಖಾನ್. ಎಲ್ಲರೂ ಇಷ್ಟಪಡುವ ಮಾನವೀಯತೆಯನ್ನು ಭಜರಂಗಿ ಭಾಯಿ ಜಾನ್ ಚಿತ್ರದಲ್ಲಿ ತೋರಿಸಲಾಗಿದೆ, ಆದ್ದರಿಂದ ಚಿತ್ರಕ್ಕೆ ಅತ್ಯುತ್ತಮ ಸ್ಪಂದನೆ ದೊರೆತಿದೆ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

IPL 2026: 82 ರನ್‌ಗಳಿಂದ SRH ಮಣಿಸಿದ Gujarat Titans; RCB ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗಿಲ್ ಪಡೆ!

ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

SCROLL FOR NEXT