ಬಾಹುಬಲಿ 
ಸಿನಿಮಾ ಸುದ್ದಿ

ದಕ್ಷಿಣ ಕನ್ನಡದ ಪ್ರಖ್ಯಾತ ಕಲೆ ಯಕ್ಷಗಾನ ರೂಪಕದಲ್ಲಿ ಬಾಹುಬಲಿ!

ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಠಿಸಿದ ಎಸ್.ಎಸ್. ರಾಜಮೌಳಿ ನಿರ್ದೇಶನದ 'ಬಾಹುಬಲಿ' ಈಗ ಯಕ್ಷಗಾನ ರೂಪದಲ್ಲಿ ಬರಲು ಸಜ್ಜಾಗಿದ್ದಾನೆ...

ಮಂಗಳೂರು: ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಠಿಸಿದ ಎಸ್.ಎಸ್. ರಾಜಮೌಳಿ ನಿರ್ದೇಶನದ 'ಬಾಹುಬಲಿ' ಈಗ ಯಕ್ಷಗಾನ ರೂಪದಲ್ಲಿ ಬರಲು ಸಜ್ಜಾಗಿದ್ದಾನೆ. 
ಮಂಗಳೂರು ಮೂಲದ ಪ್ರಸಂಗಕರ್ತ ದೇವದಾಸ್ ಎಂಬುವರು ಅಕ್ಟೋಬರ್ ಮೊದಲ ವಾರದಲ್ಲಿ ಬೆಂಗಳೂರಿನ ಕಲಾಕ್ಷೇತ್ರದಲ್ಲಿ 'ಬಾಹುಬಲಿ'ಯನ್ನು ರಂಗಸ್ಥಳಕ್ಕೆ ತರಲಿದ್ದಾರೆ. 
'ಬಾಹುಬಲಿ' ಚಿತ್ರದ ಕಾಲ್ಪನಿಕ ಕಥೆಯನ್ನು ರಂಗಸ್ಥಳದ ಮೇಲೆ ತರಲು ದೇವದಾಸ್ ಸಿದ್ಧತೆ ನಡೆಸುತ್ತಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಈಗಾಗಲೇ 58 ಯಕ್ಷಗಾನ ಪ್ರಸಂಗಗಳನ್ನು ಬರೆದಿರುವ ದೇವದಾಸ್ 59ನೇ ಪ್ರಸಂಗವಾಗಿ 'ಬಾಹುಬಲಿ'ಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. 
ಬಾಹುಬಲಿ ಚಿತ್ರದಲ್ಲಿರುವಂತೆ ಯಕ್ಷಗಾನದಲ್ಲಿ ದೃಶ್ಯ ವೈಭವಕ್ಕೆ ಆಸ್ಪದವಿಲ್ಲ. ಇಲ್ಲಿ ಕಥಾ ವೈಭವವೇ ಮುಖ್ಯವಾಗಿರುತ್ತದೆ. ಬಾಹುಬಲಿ ಚಿತ್ರ ಅರ್ಧ ಮಾತ್ರ ಇದೆ. ಯಕ್ಷಗಾನದಲ್ಲಿ ಅದನ್ನು ತಮ್ಮದೇ ಕಾಲ್ಪನಿಕ ಕಥೆಯ ಮುಖಾಂತರ ಪೂರ್ತಿಗೊಳಿಸಿದ್ದಾರೆ. ಚಿತ್ರದಲ್ಲಿ ಹಾಸ್ಯ ಪಾತ್ರಗಳು ಇಲ್ಲ. ಆದರೆ ಯಕ್ಷಗಾನಕ್ಕೆ ಅಳವಡಿಸಿಕೊಳ್ಳುವಾಗ ಹಾಸ್ಯವನ್ನು ಸೇರಿಸಿಕೊಳ್ಳಲಾಗಿದೆ ಎನ್ನುತ್ತಾರೆ ದೇವದಾಸ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT