ನಟ ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ರವಿವರ್ಮ ಕನಸಿನ ಯೋಜನೆಗೆ ಹಾಲಿವುಡ್ ಲೇಪನ?

ತಮ್ಮ ಚೊಚ್ಚಲ ನಿರ್ದೇಶನದ ಸಿನೆಮಾಗೆ ಸಹೋದರ ನಟರನ್ನು ಒಂದೆ ಸಿನೆಮಾದಲ್ಲಿ ನಟಿಸುವಂತೆ ಒಪ್ಪಿಸಿರುವ ರವಿವರ್ಮ ಅವರ ಧೈರ್ಯಕ್ಕೆ, ನಿರ್ಮಾಪಕರಾದ ಜಯಣ್ಣ ಭೋಗೇಂದ್ರ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಲಿದ್ದಾರಂತೆ.

ಬೆಂಗಳೂರು: ತಮ್ಮ ಚೊಚ್ಚಲ ನಿರ್ದೇಶನದ ಸಿನೆಮಾಗೆ ಸಹೋದರ ನಟರನ್ನು ಒಂದೆ ಸಿನೆಮಾದಲ್ಲಿ ನಟಿಸುವಂತೆ ಒಪ್ಪಿಸಿರುವ ರವಿವರ್ಮ ಅವರ ಧೈರ್ಯಕ್ಕೆ, ನಿರ್ಮಾಪಕರಾದ ಜಯಣ್ಣ ಭೋಗೇಂದ್ರ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಲಿದ್ದಾರಂತೆ. ಎಸ್ ಎಸ್ ರಾಜಮೌಳಿ ಅವರ ಬಹು ಕೋಟಿ-ಬೃಹತ್ ಬಜೆಟ್ ತೆಲುಗು ಸಿನೆಮಾ 'ಬಾಹುಬಲಿ'ಯ ಯಶಸ್ಸು ಕೂಡ ಈ ಕನ್ನಡ ನಿರ್ಮಾಪಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ್ದು, ಎಲ್ಲವೂ ಸರಿ ಬಂದರೆ ಈ ಸಿನೆಮಾ ಕನ್ನಡದ ಅತಿ ದೊಡ್ಡ ಬಜೆಟ್ ಸಿನೆಮಾ ಆಗಲಿದೆ ಎನ್ನಲಾಗುತ್ತಿದೆ.

ಈಗಾಗಲೇ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ತಮ್ಮ ಒಪ್ಪಗೆ ಸೂಚಿಸಿದ್ದು, ಈಗ ನಿರ್ದೇಶಕ ಹಾಲಿವುಡ್ಡಿನ ತಂತ್ರಜ್ಞರು ಮತ್ತು ನಟರ ಜೊತೆ ಮಾತುಕತೆ ನಡೆಸಿದ್ದಾರಂತೆ. ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ಮುಹೂರ್ತ ನಡೆಯಲಿದ್ದರೂ, ಈ ಸಿನೆಮಾ ಈಗಾಗಲೇ ಪ್ರೇಕ್ಷಕರ ಕಾತರವನ್ನು ಹೆಚ್ಚಿಸುತ್ತ ಬಂದಿದೆಯಂತೆ.

ಮೂಲಗಳ ಪ್ರಕಾರ ಈ ಸಿನೆಮಾದ ಬಜೆಟ್ ೪೦ ಕೋಟಿ ದಾಟಲಿದೆ. ಸಿನೆಮಾದ ಗ್ರಾಫಿಕ್ಸ್ ಗಾಗಿ ಹಾಲಿವುಡ್ ತಂತ್ರಜ್ಞರನ್ನು ಸೆಳೆಯಲಾಗುತ್ತಿದೆ ಎನ್ನುತ್ತವೆ ಮೂಲಗಳು. ದಕ್ಷಿಣ ಭಾರತದ ಇನ್ನೂ ಹಲವಾರು ಜನಪ್ರಿಯ ನಟರ ಜೊತೆ ಮಾತುಕತೆ ಪ್ರಗತಿಯಲ್ಲಿದ್ದು ಎಲ್ಲವೂ ಸುಸೂತ್ರವಾಗಿ ಜರುಗಿದರೆ ಮುಂದಿನ ವರ್ಷ ಚಿತ್ರೀಕರಣ ಪ್ರಾರಂಭವಾಗಿ ೨೦೦ ದಿನಗಳಲ್ಲಿ ಮುಕ್ತಾಯವಾಗಲಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT