ನಟ ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ರವಿವರ್ಮ ಕನಸಿನ ಯೋಜನೆಗೆ ಹಾಲಿವುಡ್ ಲೇಪನ?

ತಮ್ಮ ಚೊಚ್ಚಲ ನಿರ್ದೇಶನದ ಸಿನೆಮಾಗೆ ಸಹೋದರ ನಟರನ್ನು ಒಂದೆ ಸಿನೆಮಾದಲ್ಲಿ ನಟಿಸುವಂತೆ ಒಪ್ಪಿಸಿರುವ ರವಿವರ್ಮ ಅವರ ಧೈರ್ಯಕ್ಕೆ, ನಿರ್ಮಾಪಕರಾದ ಜಯಣ್ಣ ಭೋಗೇಂದ್ರ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಲಿದ್ದಾರಂತೆ.

ಬೆಂಗಳೂರು: ತಮ್ಮ ಚೊಚ್ಚಲ ನಿರ್ದೇಶನದ ಸಿನೆಮಾಗೆ ಸಹೋದರ ನಟರನ್ನು ಒಂದೆ ಸಿನೆಮಾದಲ್ಲಿ ನಟಿಸುವಂತೆ ಒಪ್ಪಿಸಿರುವ ರವಿವರ್ಮ ಅವರ ಧೈರ್ಯಕ್ಕೆ, ನಿರ್ಮಾಪಕರಾದ ಜಯಣ್ಣ ಭೋಗೇಂದ್ರ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಲಿದ್ದಾರಂತೆ. ಎಸ್ ಎಸ್ ರಾಜಮೌಳಿ ಅವರ ಬಹು ಕೋಟಿ-ಬೃಹತ್ ಬಜೆಟ್ ತೆಲುಗು ಸಿನೆಮಾ 'ಬಾಹುಬಲಿ'ಯ ಯಶಸ್ಸು ಕೂಡ ಈ ಕನ್ನಡ ನಿರ್ಮಾಪಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ್ದು, ಎಲ್ಲವೂ ಸರಿ ಬಂದರೆ ಈ ಸಿನೆಮಾ ಕನ್ನಡದ ಅತಿ ದೊಡ್ಡ ಬಜೆಟ್ ಸಿನೆಮಾ ಆಗಲಿದೆ ಎನ್ನಲಾಗುತ್ತಿದೆ.

ಈಗಾಗಲೇ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ತಮ್ಮ ಒಪ್ಪಗೆ ಸೂಚಿಸಿದ್ದು, ಈಗ ನಿರ್ದೇಶಕ ಹಾಲಿವುಡ್ಡಿನ ತಂತ್ರಜ್ಞರು ಮತ್ತು ನಟರ ಜೊತೆ ಮಾತುಕತೆ ನಡೆಸಿದ್ದಾರಂತೆ. ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ಮುಹೂರ್ತ ನಡೆಯಲಿದ್ದರೂ, ಈ ಸಿನೆಮಾ ಈಗಾಗಲೇ ಪ್ರೇಕ್ಷಕರ ಕಾತರವನ್ನು ಹೆಚ್ಚಿಸುತ್ತ ಬಂದಿದೆಯಂತೆ.

ಮೂಲಗಳ ಪ್ರಕಾರ ಈ ಸಿನೆಮಾದ ಬಜೆಟ್ ೪೦ ಕೋಟಿ ದಾಟಲಿದೆ. ಸಿನೆಮಾದ ಗ್ರಾಫಿಕ್ಸ್ ಗಾಗಿ ಹಾಲಿವುಡ್ ತಂತ್ರಜ್ಞರನ್ನು ಸೆಳೆಯಲಾಗುತ್ತಿದೆ ಎನ್ನುತ್ತವೆ ಮೂಲಗಳು. ದಕ್ಷಿಣ ಭಾರತದ ಇನ್ನೂ ಹಲವಾರು ಜನಪ್ರಿಯ ನಟರ ಜೊತೆ ಮಾತುಕತೆ ಪ್ರಗತಿಯಲ್ಲಿದ್ದು ಎಲ್ಲವೂ ಸುಸೂತ್ರವಾಗಿ ಜರುಗಿದರೆ ಮುಂದಿನ ವರ್ಷ ಚಿತ್ರೀಕರಣ ಪ್ರಾರಂಭವಾಗಿ ೨೦೦ ದಿನಗಳಲ್ಲಿ ಮುಕ್ತಾಯವಾಗಲಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT