ನಟಿ ಪ್ರಿಯಾಮಣಿ ಮತ್ತು ಮುಸ್ತಾಫ ರಾಜ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಉದ್ಯಮಿ ಮುಸ್ತಾಫ ರಾಜ್ ಜತೆ ನಟಿ ಪ್ರಿಯಾಮಣಿ ಮದುವೆ?

ನಟಿ ಪ್ರಿಯಾಮಣಿ ಅವರು ತಮ್ಮ ಗೆಳೆಯ ಮುಸ್ತಾಫ ರಾಜ್ ಅವರೊಂದಿಗೆ ಶೀಘ್ರದಲ್ಲಿಯೇ ಹಸೆಮಣೆ ಏರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ...

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟಿ ಪ್ರಿಯಾಮಣಿ ಅವರ ಪ್ರೇಮ ಪ್ರಕರಣ ಕುರಿತಂತೆ ಹಲವು ದಿನಗಳಿಂದ ಊಹಾಪೋಹಗಳು ಸುಳಿದಾಡುತ್ತಿತ್ತು. ಆದರೆ ಇದೀಗ ನಟಿ ಪ್ರಿಯಾಮಣಿ ಅವರು ತಮ್ಮ ಗೆಳೆಯ ಮುಸ್ತಾಫ ರಾಜ್ ಅವರೊಂದಿಗೆ ಶೀಘ್ರದಲ್ಲಿಯೇ ಹಸೆಮಣೆ ಏರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಖಾಸಗಿ ಅಂತರ್ಜಾಲ ವೆಬ್ ತಾಣವೊಂದು ಇಂತಹ ಸುದ್ದಿಯೊಂದನ್ನು ಹರಿಬಿಟ್ಟಿದ್ದು, ನಟಿ ಪ್ರಿಯಾಮಣಿ ತಮ್ಮ ಬಹುಕಾಲದ ಗೆಳೆಯ ಮತ್ತು ಉದ್ಯಮಿ ಮುಸ್ತಾಫಾ ರಾಜ್ ರೊಂದಿಗೆ ಮದುವೆಯಾಗುತ್ತಿದ್ದಾರೆ ಎಂದು ವರದಿ ಮಾಡಿದೆ. ಅಲ್ಲದೆ ಈ ವಿಚಾರವನ್ನು ಸ್ವತಃ ಪ್ರಿಯಾಮಣಿ ಅವರೇ ಹೇಳಿಕೊಂಡಿದ್ದಾರೆ ಎಂದು ಹೇಳಿದೆ. 
ಅಂತರ್ಜಾಲ ವೆಬ್ ತಾಣಕ್ಕೆ ಪ್ರತಿಕ್ರಿಯಿಸಿರುವ ನಟಿ ಪ್ರಿಯಾಮಣಿ ಅವರು, ‘ಹೌದು, ನಾವು ಪ್ರೀತಿಸುತ್ತಿರುವುದು ನಿಜ. ಶೀಘ್ರದಲ್ಲಿ ಮದುವೆ ಕೂಡ ಆಗುತ್ತಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ ಎಂದು ವರದಿ ಬಿತ್ತರಿಸಲಾಗಿದೆ.
ಅಂತರ್ಜಾಲ ವೆಬ್ ತಾಣ ವರದಿ ಮಾಡಿರುವಂತೆ, ‘ಮುಸ್ತಾಫ ತುಂಬಾ ನಾಚಿಕೆ ಸ್ವಭಾವದ ವ್ಯಕ್ತಿಯಾಗಿದ್ದಾರೆ. ಹೀಗಾಗಿ, ಇದುವರೆಗೆ ನಾನು ಈ ಬಗ್ಗೆ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈಗ ಅವರ ಒಪ್ಪಿಗೆ ಪಡೆದು ವಿಷಯ ಬಹಿರಂಗಪಡಿಸುತ್ತಿದ್ದೇನೆ’ ಎಂದು ಪ್ರಿಯಾಮಣಿ ಹೇಳಿದ್ದಾರಂತೆ. ಇನ್ನು ಇವರ ಪ್ರೀತಿಗೆ ಪೋಷಕರ ಕಡೆಯಿಂದಲೂ ಒಪ್ಪಿಗೆ ಸಿಕ್ಕಿದ್ದು, ಸದ್ಯದಲ್ಲೇ ಮದುವೆ ನಿಶ್ಚಯಗೊಂಡರೂ ಅಚ್ಚರಿ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ಈ ಮಾತನ್ನು ಒಪ್ಪಿಕೊಳ್ಳಲು ಪ್ರಿಯಾ ಪೋಷಕರು ತಯಾರಿಲ್ಲ. ಮಾಧ್ಯಮಗಳ ಜತೆ ಮಾತನಾಡಿದ ಪ್ರಿಯಾಮಣಿ ಅವರ ತಾಯಿ, ‘ಅದರ ಬಗ್ಗೆ ನಮಗೇನು ಗೊತ್ತಿಲ್ಲ. ಅವರನ್ನೇ ಕೇಳಿ..’ ಎಂದು ಉತ್ತರಿಸಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮದುವೆ ಮತ್ತು ಗೆಳೆತನದ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದರೂ ನಟಿ ಪ್ರಿಯಾಮಣಿ ಮಾತ್ರ ಈ ಬಗ್ಗೆ ಯಾವುದೇ ರೀತಿಯ ಸ್ಪಷ್ಟನೆ ನೀಡದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಿರುತೆರೆ ರಿಯಾಲಿಟಿ ಶೋ ಮತ್ತು ಕೆಲವು ಚಿತ್ರಗಳ ಶೂಟಿಂಗ್​ನಲ್ಲಿ ಪ್ರಿಯಾಮಣಿ ಅವರು ತೊಡಗಿಸಿಕೊಂಡಿದ್ದು, ಅವರ ದೂರವಾಣಿ ಸಂಪರ್ಕ ಸಾಧ್ಯವಾಗುತ್ತಿಲ್ಲ. ಈ ಹಿಂದೆಯೇ ಇವರಿಬ್ಬರು ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾಕಷ್ಟು ಸುದ್ದಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT