'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಸ್ಟಿಲ್ 
ಸಿನಿಮಾ ಸುದ್ದಿ

'ಮದುವೆಯ ಮಮತೆಯ ಕರೆಯೋಲೆ'ಗೆ ಮಲೇಶಿಯಾಕ್ಕೆ ತೆರಳಲಿರುವ ಕವಿರಾಜ್

ಗೀತರಚನಕಾರನಿಂದ ನಿರ್ದೇಶಕನಾಗಿ ಭಡ್ತಿ ಹೊಂದಿರುವ ಕವಿರಾಜ್ ತಮ್ಮ ಚೊಚ್ಚಲ ಸಿನೆಮಾ 'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಚಿತ್ರೀಕರಣವನ್ನು...

ಬೆಂಗಳೂರು: ಗೀತರಚನಕಾರನಿಂದ ನಿರ್ದೇಶಕನಾಗಿ ಭಡ್ತಿ ಹೊಂದಿರುವ ಕವಿರಾಜ್ ತಮ್ಮ ಚೊಚ್ಚಲ ಸಿನೆಮಾ 'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಚಿತ್ರೀಕರಣವನ್ನು ಭರದಿಂದ ಮುಂದುವರೆಸಿದ್ದಾರೆ. ಇತ್ತೀಚೆಗಷ್ಟೇ ಮತ್ತೊಂದು ಹಾಡಿನ ಚಿತ್ರೀಕರಣ ಸಂಪೂರ್ಣಗೊಳಿಸಿದ್ದಾರೆ.

ಅಮೂಲ್ಯ ಮತ್ತು ಸೂರಜ್ ಗೌಡ ಮುಖ್ಯಭೂಮಿಕೆಯಲ್ಲಿರುವ ಈ ಸಿನೆಮಾದ ಈ ಹಾಡು ಆಚಾರ್ಯ ಕಾಲೇಜು, ಒರಿಯಾನ್ ಮಾಲ್, ಜೆಪಿ ಪಾರ್ಕ್, ಜೆನ್ ಪಾರ್ಕ್ ಗಳಲ್ಲಿ ಚಿತ್ರೀಕರಣಗೊಂಡಿದೆ.

ಈಗ ಮುಂದಿನ ಹಂತದ ಚಿತ್ರೀಕರಣಕ್ಕೆ ಕವಿರಾಜ್ ಸೆಪ್ಟಂಬರ್ ನಲ್ಲಿ ಮಲೇಶಿಯಾಕ್ಕೆ ತೆರಳಲಿದ್ದಾರೆ. "ಬಹಳ ಚಿಂತಿಸಿದ ಮೇಲೆ ಮಲೇಶಿಯಾವನ್ನು ಆಯ್ಕೆ ಮಾಡಿದೆವು ಏಕೆಂದರೆ ಅಲ್ಲಿನ ನಗರಗಳಲ್ಲೇ ಬೀಚುಗಳು ಇರುವುದರಿಂದ" ಎನ್ನುತ್ತಾರೆ ಕವಿರಾಜ್.

'ಮದುವೆಯ ಮಮತೆಯ ಕರೆಯೋಲೆ' ಸಿನೆಮಾವನ್ನು ಡಿಸೆಂಬರ್ ನಲ್ಲಿ ಬಿಡುಗಡೆ ಮಾಡಲು ತಂಡ ಸಿದ್ಧತೆ ನಡೆಸುತ್ತಿದೆ. "ಎಲ್ಲ ಯೋಜನೆಯಂತೆಯೇ ಮುಂದುವರೆದಿದೆ. ಸಂಬಾಷಣೆಯ ಭಾಗ ಮತ್ತು ಹಾಡುಗಳನ್ನು ಅಕ್ಟೋಬರ್ ಒಳಗೆ ಮುಗಿಸುತ್ತೇವೆ. ಎಡಿಟಿಂಗ್ ಕಾರ್ಯ ಕೂಡ ಜಾರಿಯಲ್ಲಿದ್ದು, ಡಬ್ಬಿಂಗ್ ಕೂಡ ಪ್ರಗತಿಯಲ್ಲಿದೆ" ಎನ್ನುತ್ತಾರೆ ಅವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT