ಮಾನ್ವಿತಾ ಹರೀಶ್ 
ಸಿನಿಮಾ ಸುದ್ದಿ

'ಕೆಂಡಸಂಪಿಗೆ'ಯ ಗಿಣಿಮರಿ ಮಾನ್ವಿತಾಗೆ ಹೊಸಹುಟ್ಟು

ರೇಡಿಯೋ ಜಾಕಿ ವೃತ್ತಿಯಿಂದ ನಟನೆಗೆ ಜಿಗಿದಿರುವ ಮಾನ್ವಿತಾ ಹರೀಶ್ ಅವರಿಗೆ ಸಂತಸದ ಸಮಯ. ಸೂರಿ ನಿರ್ದೇಶನದ 'ಕೆಂಡಸಂಪಿಗೆ - ಪಾರ್ಟ್ ೨ ಗಿಣಿಮರಿ ಕೇಸ್'

ಬೆಂಗಳೂರು: ರೇಡಿಯೋ ಜಾಕಿ ವೃತ್ತಿಯಿಂದ ನಟನೆಗೆ ಜಿಗಿದಿರುವ ಮಾನ್ವಿತಾ ಹರೀಶ್ ಅವರಿಗೆ ಸಂತಸದ ಸಮಯ. ಸೂರಿ ನಿರ್ದೇಶನದ 'ಕೆಂಡಸಂಪಿಗೆ - ಪಾರ್ಟ್ ೨ ಗಿಣಿಮರಿ ಕೇಸ್' ನಲ್ಲಿ ನಾಯಕ ನಟಿಯಾಗಿರುವ ಇವರಿಗೆ ಚೊಚ್ಚಲ ಚಿತ್ರದಲ್ಲೇ ಜನಪ್ರಿಯ ನಿರ್ದೇಶಕರ ಜೊತೆ ಕೆಲಸ ಮಾಡಿದ ಮಧುರ ಅನುಭವ.

"ನನಗೆ ಯಾರೂ ಗಾಡ್ ಫಾದರ್ ಇಲ್ಲ. ರೇಡಿಯೋ ಜಾಕಿಯಾಗಿ ನನ್ನ ಸಂಪರ್ಕಗಳನ್ನು ಬೆಳೆಸಿಕೊಂಡೆ. ಅವರಲ್ಲಿ ಒಬ್ಬರು ನಿರ್ದೇಶಕ ಸೂರಿಯವರ ಬಳಿ ೧೮ ತಿಂಗಳ ಹಿಂದೆ ನನ್ನ ಹೆಸರನ್ನು ಸೂಚಿಸಿದ್ದರು. ಆಡಿಶನ್ ಕರೆದಾಗ ನಾನು ಆಯ್ಕೆಯಾದೆ" ಎನ್ನುತ್ತಾರೆ ನಟಿ. ತನ್ನ ನಟನಾ ಕೌಶಲ್ಯವಲ್ಲದೆ ಸೂರಿಯವರಿಗೆ ಬೇಕಾಗಿದ್ದ ಹಲವಾರು ಗುಣಗಳು ತನ್ನಲ್ಲಿವೆ ಎನ್ನುವ ಅವರು "ನಾನು ಅತಿ ಹೆಚ್ಚು ದೂರ ಡ್ರೈವ್ ಮಾಡಬಲ್ಲೆ. ಕನ್ನಡ ಚೆನ್ನಾಗಿ ಮಾತನಾಡಬಲ್ಲೆ. ಮಂಗಳೂರು, ಮಲೆನಾಡು, ಧಾರವಾಡ ಮತ್ತು ಬೆಂಗಳೂರು ಪ್ರದೇಶಗಳ ಕನ್ನಡ ಬಲ್ಲೆ. ನನ್ನ ಲುಕ್ಸ್ ಬಗ್ಗೆ ನಾನು ತೀರ್ಪು ನೀಡಲಾರೆ" ಎನ್ನುತ್ತಾರೆ ಮುದ್ದು ಮುಖದ ಮಾನ್ವಿತಾ.

ಸಿನೆಮಾ ಬಗ್ಗೆ ಮಾತನಾಡುವ ಮಾನ್ವಿತಾ "ಈ ಸಿನೆಮಾದಲ್ಲಿ ಸಾಕಷ್ಟು ಪ್ರಯಾಣ ಇದೆ. ವಿನೀತ ಸ್ವಭಾವದ, ಸೃಜನಶೀಲ ವ್ಯಕ್ತಿ ಸೂರಿ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಕನಸು ನನಸಾದಂತೆ" ಎನ್ನುತ್ತಾರೆ.

ಬೇರೆ ಬೇರೆ ಪಾತ್ರಗಳ ನಿರೀಕ್ಷೆಯಲ್ಲಿರುವ ಮಾನ್ವಿತಾ ಬೇರೆ ಭಾಷೆಗಳ ಸಿನೆಮಾಗಳಲ್ಲೂ ನಟಿಸುವಾಸೆ ಹೊಂದಿದ್ದಾರೆ. ಕೆಂಡಸಂಪಿಗೆ ಪಾರ್ಟ್ ೨ ಗಿಣಿಮರಿ ಕೇಸ್ ಸೆಪ್ಟಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗುವ ಸುದ್ದಿ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT