ನಟ ರವಿಶಂಕರ್ ಮತ್ತು ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಪುನೀತ್ ಮತ್ತು ರವಿಶಂಕರ್ ಜಿದ್ದಾಜಿದ್ದಿ

ಈ ಸಿನೆಮಾದ ಘೋಷಣೆಯಾದಾಗಲಿಂದಲು ಸಿನೆರಸಿಕರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ. ಕಾರಣ ಒಂದು ಇದು ಪುನೀತ್ ರಾಜಕುಮಾರ್ ಅವರ ೨೫ ನೆ ಚಿತ್ರ.

ಬೆಂಗಳೂರು: ಈ ಸಿನೆಮಾದ ಘೋಷಣೆಯಾದಾಗಲಿಂದಲು ಸಿನೆರಸಿಕರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ. ಕಾರಣ ಒಂದು ಇದು ಪುನೀತ್ ರಾಜಕುಮಾರ್ ಅವರ ೨೫ ನೆ ಚಿತ್ರ. ಮತ್ತು ಇದರ ನಿರ್ದೇಶಕ ಸೂರಿ. ಸಿನೆಮಾದ ಹೆಸರು 'ದೊಡ್ಮನೆ ಹುಡುಗ'. ಚಿತ್ರರಸಿಕರು ಸಿನೆಮಾದ ಬಿಡುಗಡೆಯ ದಿನಾಂಕ ತಿಳಿಯಲು ಉತ್ಸುಕರಾಗಿರುವುದಂತೂ ನಿಜ.

ಪ್ರೇಕ್ಷಕರಿಗೆ ಸಿಹಿಸುದ್ದಿಯೆಂದರೆ ಚಿತ್ರೀಕರಣ ಮುಗಿಯಲು ಇನ್ನು ೮ ದಿನಗಳಷ್ಟೇ ಬಾಕಿ ಉಳಿದಿರುವುದು. ಇದರ ನಂತರ ಕೆಲವು ಹಾಡುಗಳ ಚಿತ್ರೀಕರಣ ಇರುತ್ತದಂತೆ. "ನಾನು ಸದ್ಯಕ್ಕೆ ರವಿಶಂಕರ್ ಅವರ ಭಾಗವನ್ನು ಚಿತ್ರೀಕರಿಸಲು ಮೈಸೂರಿನಲ್ಲಿದ್ದೇನೆ. ಇದು ಒಂದು ವಾರ ನಡೆಯಲಿದ್ದು ನಂತರ ಹಾಡುಗಳ ಚಿತ್ರೀಕರಣ ಪ್ರಾರಂಭವಾಗುತ್ತದೆ" ಎನ್ನುತ್ತಾರೆ ಸೂರಿ.

ಇದೇ ಮೊದಲ ಬಾರಿಗೆ ಪುನೀತ್ ಎದುರು ಖಳನಟನಾಗಿ ರವಿಶಂಕರ್ ನಟಿಸುತ್ತಿರುವುದು.

ಹಾಗೆಯೇ ಇದೇ ಮೊದಲ ಬಾರಿಗೆ 'ದೊಡ್ಮನೆ ಹುಡುಗ'ನ ಮೂಲಕ ಅಂಬರೀಶ್ ಮತ್ತು ಪುನೀತ್ ಕೂಡ ಜೊತೆಗೆ ನಟಿಸುತ್ತಿದ್ದಾರೆ. ರಾಧಿಕಾ ಪಂಡಿತ್ ನಾಯನಟಿಯಾಗಿದ್ದು, ಹಿರಿಯ ನಟಿಯರಾದ ಭಾರತಿ ವಿಷ್ಣುವರ್ಧನ್ ಮತ್ತು ಸುಮಲತಾ ಕೂಡ ಕಾಣಿಸಿಕೊಳ್ಳಲಿದ್ದಾರೆ. ಕೃಷ್ಣ, ಸಂತೋಶ್, ಚಿಕ್ಕಣ್ಣ ಸಹನಟರು. ಸತ್ಯ ಹೆಗಡೆ ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಜೊತೆಜೊತೆಗೆ ಪುನೀತ್ 'ಚಕ್ರವ್ಯೂಹ'ದ ಚಿತ್ರೀಕರಣ ಕೂಡ ಮುಗಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಿವಾಜಿ ಜೊತೆಗೆ ಟಿಪ್ಪು ಹೋಲಿಕೆ: ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ, ಬಿಜೆಪಿ ಕಿಡಿ!

T-20 ವಿಶ್ವಕಪ್ 2026: ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 7 ವಿಕೆಟ್ ಭರ್ಜರಿ ಗೆಲುವು!

ಬ್ರಹ್ಮಪುತ್ರ ನದಿ ಕೆಳಗೆ ದೇಶದ ಮೊದಲ ರಸ್ತೆ-ರೈಲು ಸುರಂಗಕ್ಕೆ ಕೇಂದ್ರ ಸಂಪುಟ ಅನುಮೋದನೆ

ಹಂಪಿ ಉತ್ಸವ: ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್!

ಹಾಸನ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ, ಕೊಲೆ ಶಂಕೆ!

SCROLL FOR NEXT