ರಜನಿಕಾಂತ್ 
ಸಿನಿಮಾ ಸುದ್ದಿ

ಹುಟ್ಟು ಹಬ್ಬ ರದ್ದುಗೊಳಿಸಿದ ರಜನಿ, ನೆರೆ ಸಂತ್ರಸ್ತರಿಗೆ 10 ಕೋಟಿ ದೇಣಿಗೆ

ಜಲಪ್ರಳಯದ ಹಿನ್ನೆಲೆಯಲ್ಲಿ ಕೊಲಿವುಡ್ ಸೂಪರ್ ಸ್ಟಾರ್ ರಜನಿತಕಾಂತ್ ಅವರು ತಮ್ಮ 65ನೇ ಹುಟ್ಟು ಹಬ್ಬ ಆಚರಿಸಿಕೊಳ್ಳದಿರಲು...

ಚೆನ್ನೈ: ಜಲಪ್ರಳಯದ ಹಿನ್ನೆಲೆಯಲ್ಲಿ ಕೊಲಿವುಡ್ ಸೂಪರ್ ಸ್ಟಾರ್ ರಜನಿತಕಾಂತ್ ಅವರು ತಮ್ಮ 65ನೇ ಹುಟ್ಟು ಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಅದರ ಬದಲು ಚೆನ್ನೈನೆರೆ ಸಂತ್ರಸ್ತರಿಗೆ ನೆರವಾಗಲು 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ.

ಇಂದು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರನ್ನು ಭೇಟಿ ಮಾಡಿದ ತಮಿಳು ಸೂಪರ್ ಸ್ಟಾರ್, ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ಚೆಕ್ ನೀಡಿದರು.

ಡಿಸೆಂಬರ್ 12ಕ್ಕೆ 65ನೇ ವಸಂತಕ್ಕೆ ಕಾಲಿಡುತ್ತಿರುವ ರಜನಿಕಾಂತ್ ಅವರು ಈ ಮುಂಚೆ ನೆರೆ ಸಂತ್ರಸ್ತರಿಗೆ 10 ಲಕ್ಷ ರುಪಾಯಿ ದೇಣಿಗೆ ನೀಡಿದ್ದರು. ಇದೀಗ ತಮ್ಮ ಹುಟ್ಟು ಹಬ್ಬದ ಅಂಗವಾಗಿ ಮತ್ತೆ 10 ಕೋಟಿ ರುಪಾಯಿ ನೀಡಿದ್ದಾರೆ.

ಶತಮಾನದ ಮಹಾಮಳೆಯಿಂದಾಗಿ ತಮಿಳು ನಾಡು ಈಗಷ್ಟೇ ಸಹಜ ಸ್ಥಿತಿಗೆ ಮರಳುತ್ತಿರುವ ಈ ಸಂದರ್ಭದಲ್ಲಿ ತಮ್ಮ ಹುಟ್ಟುಹಬ್ಬವನ್ನು ವೈಭವಪೂರಿತವಾಗಿ ಆಚರಿಸದಿರುವಂತೆ ರಜನಿಕಾಂತ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಪರಿಹಾರ ಕಾರ್ಯಕ್ಕೆ ಕೈಜೋಡಿಸುವಂತೆ ಕೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT