ಹುಚ್ಚ ವೆಂಕಟ್ 
ಸಿನಿಮಾ ಸುದ್ದಿ

'ಪರಪಂಚ'ದಲ್ಲಿ ಹುಚ್ಚ ವೆಂಕಟ್ ಗಾಯನ

ಯೋಗರಾಜ್ ಮೂವೀಸ್ ಹಾಗೂ ವೇದಂ ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗಿರುವ `ಪರಪಂಚ’ಚಿತ್ರಕ್ಕಾಗಿ...

ಯೋಗರಾಜ್ ಮೂವೀಸ್ ಹಾಗೂ ವೇದಂ ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗಿರುವ `ಪರಪಂಚ’ಚಿತ್ರಕ್ಕಾಗಿ ಯೋಗರಾಜ್‍ಭಟ್ ಅವರು ಬರೆದಿರುವ `ಬಾಯ್ ಬಸಳೆ ಸೊಪ್ಪು ಆಲುಗಡ್ಡೆ ಈರುಳ್ಳಿ ಮೈಸೂರು ಸ್ಯಾಂಡಲ್ ಸೋಪು ಕೊಬ್ರಿ ಎಣ್ಣೆ ಈ ರೇಷನ್ನು ಚೀಟಿನ ಜೇಬಲಿಟ್ಕೊಂಡು ಅಂಗಡಿಗೆ ಹೋಗು ಬದ್ಲು ಇಲ್ಲ್ ಬಂದ್ರಿ ಹೌದ್ ಹೌದ್‍ರಿ’ ಎಂಬ ಹಾಡನ್ನು ಹುಚ್ಚ ವೆಂಕಟ್ ಹಾಡಿದ್ದಾರೆ.

ಈ ಹಾಡಿನಲ್ಲಿ ಅವರೇ ಅಭಿನಯಿಸುತ್ತಿರುವುದು ವಿಶೇಷ. ಸದ್ಯದಲ್ಲೇ `ಪರಪಂಚ’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಹಲವು ವರ್ಷಗಳಿಂದ ಸಾಕಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಹಾಗೂ `ಗಾಂಧಿಸ್ಮೈಲ್’ ಚಿತ್ರದ ನಿರ್ದೇಶಕರೂ ಆಗಿರುವ ಕ್ರಿಶ್‍ಜೋಶಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ `ಪರಪಂಚ’ಕ್ಕೆ ವೆಜ್ ಆಂಡ್ ನಾನ್‍ವೆಜ್ ಎಂಬ ಅಡಿಬರಹವಿದೆ.

ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವೀರಸಮರ್ಥ್ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಸುರೇಶ್ ಸಂಕಲನ ಹಾಗೂ ಶಶಿಧರ್ ಅಡಪರ ಕಲಾ ನಿರ್ದೇಶನ `ಪರಪಂಚ’ಕ್ಕಿದೆ.  ದಿಗಂತ್, ರಾಗಿಣಿ. ದತ್ತಣ್ಣ, ಅನಂತನಾಗ್, ವಿ.ಮನೋಹರ್, ಅಶೋಕ್, ಯೋಗರಾಜ್‍ಭಟ್, ಪಂಚರಂಗಿ ಸುಧಾಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT