ನಟ ಶ್ರೀಮುರಳಿ 
ಸಿನಿಮಾ ಸುದ್ದಿ

ಬಾಕ್ಸಾಫೀಸಿನಲ್ಲಿ ಓಟ ಮುಂದುವರೆಸಿದ ರಥಾವರ; ಜಯಣ್ಣ-ಭೋಗೇಂದ್ರ ನಿರ್ಮಾಣದಲ್ಲಿ ಹೊಸ ಚಿತ್ರ

ಭಾರಿ ಯಶಸ್ಸಿನ 'ಉಗ್ರಂ' ನಂತರ 'ರಥಾವರ' ಕೂಡ ನಟ ಶ್ರೀಮುರಳಿ ಅವರನ್ನು ಕೈಹಿಡಿದಿರುವುದು ಗಾಂಧಿನಗರದಲ್ಲಿ ನಟನಿಗೆ ಉತ್ತುಂಗ ಸ್ಥಾನ ದೊರೆತಂತಾಗಿದೆ.

ಬೆಂಗಳೂರು: ಭಾರಿ ಯಶಸ್ಸಿನ 'ಉಗ್ರಂ' ನಂತರ 'ರಥಾವರ' ಕೂಡ ನಟ ಶ್ರೀಮುರಳಿ ಅವರನ್ನು ಕೈಹಿಡಿದಿರುವುದು ಗಾಂಧಿನಗರದಲ್ಲಿ ನಟನಿಗೆ ಉತ್ತುಂಗ ಸ್ಥಾನ ದೊರೆತಂತಾಗಿದೆ. ಇದಕ್ಕೆ ಹರ್ಷ ವ್ಯಕ್ತಪಡಿಸಿರುವ ವಿತರಕ ಜಯಣ್ಣ "ರಥಾವರ ಬಾಕ್ಸಾಫೀಸ್ ನಲ್ಲಿ ಉತ್ತಮ ಗಳಿಕೆ ಕಾಣುತ್ತಿದ್ದು ಎರಡು ವಾರಗಳಲ್ಲಿ ೧೦ ಕೋಟಿ ಗಳಿಸಿದೆ" ಎಂದಿದ್ದಾರೆ.

ಈಗ ಸದ್ಯಕ್ಕೆ ಶ್ರೀಮುರಳಿ ಅವರಿಗೆ ಹಲವಾರು ಅವಕಾಶಗಳು ಒದಗಿ ಬಂದಿದ್ದರೂ, ಎಚ್ಚರಿಕೆ ನಡೆ ಇಟ್ಟಿರುವ ನಟ ಮುಂದಿನ ಚಿತ್ರವನ್ನು ಜಯಣ್ಣ-ಭೋಗೇಂದ್ರ ಅವರ ನಿರ್ಮಾಣ ಸಂಸ್ಥೆಯಡಿ ಒಪ್ಪಿಕೊಂಡಿದ್ದು, ವಿವರಗಳು ಮುರಳಿ ಅವರ ಹುಟ್ಟು ಹಬ್ಬವಾದ ಡಿಸೆಂಬರ್ ೧೭ ರಂದು ಹೊರಬೀಳಲಿವೆ ಎನ್ನಲಾಗಿದೆ.

ಈ ಯೋಜನೆಯ ವಿಶೇಷವೆಂದರೆ, ಉಗ್ರಂ ಸಿನೆಮಾ ನೀಡಿದ ಪ್ರಶಾಂತ್ ನೀಲ್ ಜೊತೆಗೆ ಕೆಲಸ ಮಾಡುತ್ತಿದ್ದ ನಾರ್ಥನ್ ಈ ಸಿನೆಮಾ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕ ಟೋಪಿ ತೊಡಲಿದ್ದಾರೆ. ನಾರ್ಥನ್, ಯಶ್ ಅವರ 'ಮಾಸ್ಟರ್ ಪೀಸ್' ನಲ್ಲಿ ಗೀತರಚನೆ ಕೂಡ ಮಾಡಿದ್ದಾರೆ.

ನೂತನ ಚಿತ್ರದ ಒಂದು ಸಾಲಿನ ಕಥೆ ಸಿದ್ಧವಾಗಿದ್ದು "ಮುಂದಿನ ಎರಡು ತಿಂಗಳುಗಳಲ್ಲಿ ಕಥೆ ಸಿದ್ಧವಾಗುತ್ತದೆ. ಜೊತೆ ಜೊತೆಗೇ ಇತರ ತಾರಾಗಣದ ಆಯ್ಕೆಯೂ ನಡೆಯುತ್ತದೆ" ಎಂದು ತಿಳಿಸುತ್ತಾರೆ ಜಯಣ್ಣ.

ಸದ್ಯಕ್ಕೆ 'ರಥಾವರ' ಪ್ರಚಾರ ಕಾರ್ಯ ಕೈಗೊಂಡಿರುವ ಶ್ರೀಮುರಳಿ ತುಮಕೂರು ಚಿತ್ರದುರ್ಗ ಇತ್ಯಾದಿ ಪ್ರದೇಶಗಳಲ್ಲಿ ಪ್ರವಾಸ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT