ನಟ ಶ್ರೀಮುರಳಿ 
ಸಿನಿಮಾ ಸುದ್ದಿ

ಬಾಕ್ಸಾಫೀಸಿನಲ್ಲಿ ಓಟ ಮುಂದುವರೆಸಿದ ರಥಾವರ; ಜಯಣ್ಣ-ಭೋಗೇಂದ್ರ ನಿರ್ಮಾಣದಲ್ಲಿ ಹೊಸ ಚಿತ್ರ

ಭಾರಿ ಯಶಸ್ಸಿನ 'ಉಗ್ರಂ' ನಂತರ 'ರಥಾವರ' ಕೂಡ ನಟ ಶ್ರೀಮುರಳಿ ಅವರನ್ನು ಕೈಹಿಡಿದಿರುವುದು ಗಾಂಧಿನಗರದಲ್ಲಿ ನಟನಿಗೆ ಉತ್ತುಂಗ ಸ್ಥಾನ ದೊರೆತಂತಾಗಿದೆ.

ಬೆಂಗಳೂರು: ಭಾರಿ ಯಶಸ್ಸಿನ 'ಉಗ್ರಂ' ನಂತರ 'ರಥಾವರ' ಕೂಡ ನಟ ಶ್ರೀಮುರಳಿ ಅವರನ್ನು ಕೈಹಿಡಿದಿರುವುದು ಗಾಂಧಿನಗರದಲ್ಲಿ ನಟನಿಗೆ ಉತ್ತುಂಗ ಸ್ಥಾನ ದೊರೆತಂತಾಗಿದೆ. ಇದಕ್ಕೆ ಹರ್ಷ ವ್ಯಕ್ತಪಡಿಸಿರುವ ವಿತರಕ ಜಯಣ್ಣ "ರಥಾವರ ಬಾಕ್ಸಾಫೀಸ್ ನಲ್ಲಿ ಉತ್ತಮ ಗಳಿಕೆ ಕಾಣುತ್ತಿದ್ದು ಎರಡು ವಾರಗಳಲ್ಲಿ ೧೦ ಕೋಟಿ ಗಳಿಸಿದೆ" ಎಂದಿದ್ದಾರೆ.

ಈಗ ಸದ್ಯಕ್ಕೆ ಶ್ರೀಮುರಳಿ ಅವರಿಗೆ ಹಲವಾರು ಅವಕಾಶಗಳು ಒದಗಿ ಬಂದಿದ್ದರೂ, ಎಚ್ಚರಿಕೆ ನಡೆ ಇಟ್ಟಿರುವ ನಟ ಮುಂದಿನ ಚಿತ್ರವನ್ನು ಜಯಣ್ಣ-ಭೋಗೇಂದ್ರ ಅವರ ನಿರ್ಮಾಣ ಸಂಸ್ಥೆಯಡಿ ಒಪ್ಪಿಕೊಂಡಿದ್ದು, ವಿವರಗಳು ಮುರಳಿ ಅವರ ಹುಟ್ಟು ಹಬ್ಬವಾದ ಡಿಸೆಂಬರ್ ೧೭ ರಂದು ಹೊರಬೀಳಲಿವೆ ಎನ್ನಲಾಗಿದೆ.

ಈ ಯೋಜನೆಯ ವಿಶೇಷವೆಂದರೆ, ಉಗ್ರಂ ಸಿನೆಮಾ ನೀಡಿದ ಪ್ರಶಾಂತ್ ನೀಲ್ ಜೊತೆಗೆ ಕೆಲಸ ಮಾಡುತ್ತಿದ್ದ ನಾರ್ಥನ್ ಈ ಸಿನೆಮಾ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕ ಟೋಪಿ ತೊಡಲಿದ್ದಾರೆ. ನಾರ್ಥನ್, ಯಶ್ ಅವರ 'ಮಾಸ್ಟರ್ ಪೀಸ್' ನಲ್ಲಿ ಗೀತರಚನೆ ಕೂಡ ಮಾಡಿದ್ದಾರೆ.

ನೂತನ ಚಿತ್ರದ ಒಂದು ಸಾಲಿನ ಕಥೆ ಸಿದ್ಧವಾಗಿದ್ದು "ಮುಂದಿನ ಎರಡು ತಿಂಗಳುಗಳಲ್ಲಿ ಕಥೆ ಸಿದ್ಧವಾಗುತ್ತದೆ. ಜೊತೆ ಜೊತೆಗೇ ಇತರ ತಾರಾಗಣದ ಆಯ್ಕೆಯೂ ನಡೆಯುತ್ತದೆ" ಎಂದು ತಿಳಿಸುತ್ತಾರೆ ಜಯಣ್ಣ.

ಸದ್ಯಕ್ಕೆ 'ರಥಾವರ' ಪ್ರಚಾರ ಕಾರ್ಯ ಕೈಗೊಂಡಿರುವ ಶ್ರೀಮುರಳಿ ತುಮಕೂರು ಚಿತ್ರದುರ್ಗ ಇತ್ಯಾದಿ ಪ್ರದೇಶಗಳಲ್ಲಿ ಪ್ರವಾಸ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT