ಬಾಜಿರಾವ್ ಮಸ್ತಾನಿ ಮತ್ತು ದಿಲ್ ವಾಲೆ ಚಿತ್ರಗಳ ಸುದ್ದಿಗೋಷ್ಠಿಯಲ್ಲಿ ಆಯಾ ಚಿತ್ರಗಳ ನಾಯಕ-ನಾಯಕಿ 
ಸಿನಿಮಾ ಸುದ್ದಿ

ಪಾಕ್ ನಲ್ಲಿ ಮಸ್ತಾನಿಗೆ ರೆಡ್ ಸಿಗ್ನಲ್ ,ದಿಲ್ ವಾಲೆಗೆ ಗ್ರೀನ್ ಸಿಗ್ನಲ್

ಬಾಲಿವುಡ್ ನ ಎರಡು ಬಹು ನಿರೀಕ್ಷಿತ ಚಿತ್ರಗಳಾದ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಬಾಜಿರಾವ್ ಮಸ್ತಾನಿ...

ನವದೆಹಲಿ: ಬಾಲಿವುಡ್ ನ ಎರಡು ಬಹು ನಿರೀಕ್ಷಿತ ಚಿತ್ರಗಳಾದ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಪಾಕಿಸ್ತಾನದಲ್ಲಿ ರೆಡ್ ಸಿಗ್ನಲ್ ಸಿಕ್ಕಿದರೆ, ರೋಹಿತ್ ಶೆಟ್ಟಿ ನಿರ್ದೇಶನದ ದಿಲ್ ವಾಲೆ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಬಾಜಿರಾವ್ ಸಿನಿಮಾದಲ್ಲಿ ಇಸ್ಲಾಂ ವಿರೋಧಿ ಅಂಶಗಳಿರುವುದರಿಂದ ಪಾಕಿಸ್ತಾನದಲ್ಲಿ ಬಿಡುಗಡೆಗೆ ನಿಷೇಧ ಹೇರಲಾಗಿದೆ ಎಂದು ಅಲ್ಲಿನ ಚಲನಚಿತ್ರ ಸೆನ್ಸಾರ್ ಮಂಡಳಿ ತಿಳಿಸಿದೆ. ಆದರೆ ಶಾರುಕ್ ಖಾನ್, ಕಾಜೋಲ್ ಅಭಿನಯದ ದಿಲ್ ವಾಲೆ ಬಿಡುಗಡೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ.

17ನೇ ಶತಮಾನದ ಮರಾಠ ಪೇಶ್ವೆಯ ಕಥೆಯನ್ನು ಆಧರಿಸಿರುವ ಚಿತ್ರ ಬಾಜಿರಾವ್ ಮಸ್ತಾನಿ. ಸಿನಿಮಾದ ಮುಖ್ಯ ಪಾತ್ರದಲ್ಲಿ  ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಇದ್ದಾರೆ. ಸಿನಿಮಾವು ಮೊದಲನೆಯದಾಗಿ ಹಿಂದಿ ಭಾಷೆಯಲ್ಲಿದೆ.ನಮ್ಮ ದೇಶದ ಕಾನೂನಿನಲ್ಲಿ ಹಿಂದಿ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ಅವಕಾಶವಿಲ್ಲ. ಎರಡನೆಯದಾಗಿ ಬಾಜಿರಾವ್ ಮಸ್ತಾನಿ ಐತಿಹಾಸಿಕ ನಾಟಕವಾಗಿದ್ದು, ಪರೋಕ್ಷವಾಗಿ ಇಸ್ಲಾಂ ಧರ್ಮಕ್ಕೆ ವಿರುದ್ಧವಾಗಿದೆ ಎಂದು ಸೆನ್ಸಾರ್ ಮಂಡಳಿ ಅಧ್ಯಕ್ಷ ಮೊಬಶೆರ್ ಹಸನ್ ತಿಳಿಸಿದ್ದಾರೆ.  ನಾಳೆ ಬಾಜಿರಾವ್ ಸಿನಿಮಾ ಪಾಕ್ ಹೊರತುಪಡಿಸಿ ದೇಶ,ವಿದೇಶಗಳಲ್ಲಿ ಬಿಡುಗಡೆಯಾಗಲಿದೆ.

ಶಾರುಕ್ ಖಾನ್, ಕಾಜೋಲ್ ಅಭಿನಯದ ದಿಲ್ ವಾಲೆ ಸಿನಿಮಾ ಕೂಡಾ ನಾಳೆ ದೇಶ, ವಿದೇಶಗಳಲ್ಲಿ ರಿಲೀಸ್ ಆಗುತ್ತಿದೆ. ಇದಕ್ಕೆ  ಪಾಕಿಸ್ತಾನ ಹಸಿರು ನಿಶಾನೆ ತೋರಿಸಿದೆ. ಇದೊಂದು ಉತ್ತಮ ಚಿತ್ರವಾಗಿರುವುದರಿಂದ ಬಿಡುಗಡೆಗೆ ಅನುಮತಿ ನೀಡಲಾಗಿದೆ ಎಂದು ಪಾಕ್ ಸೆನ್ಸಾರ್ ಮಂಡಳಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT