ನಟ ಸುದೀಪ್ 
ಸಿನಿಮಾ ಸುದ್ದಿ

ಹೆಬ್ಬುಲಿ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭ

ಸುದೀಪ್ ನಟಿಸಲಿರುವ 'ಹೆಬ್ಬುಲಿ' ಕೊನೆಗೂ ಚಿತ್ರೀಕರಣಕ್ಕೆ ಸಜ್ಜಾಗಿದೆ. ನಿಟ್ಟುಸಿರು ಬಿಟ್ಟಿರುವ ನಿರ್ದೇಶಕ ಎಸ್ ಕೃಷ್ಣ, ತಾರಾ ಬಳಗ ಮಾತು ತಾಂತ್ರಿಕ ಬಳಗದ ಆಯ್ಕೆಯಲ್ಲಿ

ಬೆಂಗಳೂರು: ಸುದೀಪ್ ನಟಿಸಲಿರುವ 'ಹೆಬ್ಬುಲಿ' ಕೊನೆಗೂ ಚಿತ್ರೀಕರಣಕ್ಕೆ ಸಜ್ಜಾಗಿದೆ. ನಿಟ್ಟುಸಿರು ಬಿಟ್ಟಿರುವ ನಿರ್ದೇಶಕ ಎಸ್ ಕೃಷ್ಣ, ತಾರಾ ಬಳಗ ಮಾತು ತಾಂತ್ರಿಕ ಬಳಗದ ಆಯ್ಕೆಯಲ್ಲಿ ನಿರತರಾಗಿದ್ದಾರೆ.

ಫೆಬ್ರವರಿ ಮಧ್ಯದಿಂದ ಚಿತ್ರೀಕರಣ ಪ್ರಾಂಭವಾಗಲಿದ್ದು, ಈಗಾಗಲೇ ಖಳ ನಾಯಕ ರವಿಶಂಕರ್ ನಟಿಸಲು ಒಪ್ಪಿಕೊಂಡಿದ್ದಾರೆ. ತಾಂತ್ರಿಕ ವರ್ಗದಲ್ಲಿ ಅರ್ಜುನ್ ಜನ್ಯ ಸಂಗೀತ ನಿರ್ದೇಶನಕ್ಕೆ ಒಪ್ಪಿಕೊಂಡಿದ್ದರೆ, ಎ ಕರುಣಾಕರ್ ಸಿನೆಮ್ಯಾಟೋಗ್ರಾಫರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಮೊದಲ ಹಂತದ ಚಿತ್ರೀಕರಣ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿದ್ದು ನಂತರ ಜಮ್ಮು ಕಾಶ್ಮೀರದ ಸೇನಾ ಶಿಬಿರಗಳಲ್ಲಿ ಚಿತ್ರೀಕರಣ ಮುಂದುವರೆಯಲಿದೆಯಂತೆ.

ಸುದೀಪ್ ಅವರು ಮಿಲಿಟರಿ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಅದಕ್ಕಾಗಿ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಅವರು ಕೋಟಿಗೊಬ್ಬ-೨ ಸಿನೆಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ ಮತ್ತು ಜನವರಿಯಲ್ಲಿ 'ಓ ಮೈ ಗಾಡ್' ಹಿಂದಿ ಸಿನೆಮಾದ ಕನ್ನಡ ಅವತರಿಣಿಕೆಯ ಚಿತ್ರೀಕರಣದಲ್ಲಿ ಕೂಡ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನ್ನ ಸ್ನೇಹಿತ ಪುಟಿನ್‌ರನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ: ಪ್ರಧಾನಿ ಮೋದಿ

ಸ್ನೇಹ, ನಂಬಿಕೆ: ಮೋದಿ ಜೊತೆ ಸಾಮಾನ್ಯ Fortuner ಕಾರಿನಲ್ಲಿ Putin ಪ್ರಯಾಣ! Video

Video: ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್; ಖುದ್ದು ಪಾಲಂ ಏರ್​​ಪೋರ್ಟ್​​ಗೆ ತೆರಳಿ ಸ್ವಾಗತಿಸಿದ ಪ್ರಧಾನಿ ಮೋದಿ

'ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ.. ಸಮಸ್ಯೆ ಬಗೆಹರಿಸಲು ಪ್ರಯತ್ನ': IndiGo ಸಿಇಒ ವಿಷಾದ

ದ್ವೇಷ ಭಾಷಣ, ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ

SCROLL FOR NEXT