'ಕಥೆ ಚಿತ್ರಕಥೆ ನಿರ್ದೇಶನ ಪುಟ್ಟಣ್ಣ' ಸಿನೆಮಾದಲ್ಲಿ ಕೋಮಲ್ 
ಸಿನಿಮಾ ಸುದ್ದಿ

'ಕಥೆ ಚಿತ್ರಕಥೆ...', ತೆಲುಗು ರಿಮೇಕ್ ಅಲ್ಲ ಎಂದ ನಿರ್ದೇಶಕ

ತಮ್ಮ ನಿರ್ದೇಶನದ ಮೂರನೆ ಸಿನೆಮಾ 'ಕಥೆ ಚಿತ್ರಕಥೆ ನಿರ್ದೇಶನ ಪುಟ್ಟಣ್ಣ' ಹೊಸವರ್ಷಕ್ಕೆ ಬಿಡುಗಡೆಯಾಗುತ್ತಿರುವುದಕ್ಕೆ ನಿರ್ದೇಶಕ ಶ್ರೀನಿವಾಸ ರಾಜು ಅತೀವ

ಬೆಂಗಳೂರು: ತಮ್ಮ ನಿರ್ದೇಶನದ ಮೂರನೆ ಸಿನೆಮಾ 'ಕಥೆ ಚಿತ್ರಕಥೆ ನಿರ್ದೇಶನ ಪುಟ್ಟಣ್ಣ' ಹೊಸವರ್ಷಕ್ಕೆ ಬಿಡುಗಡೆಯಾಗುತ್ತಿರುವುದಕ್ಕೆ ನಿರ್ದೇಶಕ ಶ್ರೀನಿವಾಸ ರಾಜು ಅತೀವ ಸಂತಸರಾಗಿದ್ದಾರೆ.

ಇದು ತೆಲುಗು ಸಿನೆಮಾ 'ಗೀತಾಂಜಲಿ' ಸಿನೆಮಾದ ರಿಮೇಕ್ ಎಂದೇ ಹೇಳಲಾಗುತ್ತಿತ್ತು. ಆದರೆ ಇದಕ್ಕೆ ಸ್ಪಷ್ಟೀಕರಣ ನೀಡಿರುವ ಅವರು ಇದು ರಿಮೇಕ್ ಅಲ್ಲ ಎಂದಿದ್ದಾರೆ. "ತೆಲುಗು ಸಿನೆಮಾ ಆಗುವುದಕ್ಕೆ ಮುಂಚಿತವಾಗಲೇ ನಾನು ಕಥೆಗಾರನಿಂದ ಈ ಕಥೆ ಕೇಳಿದ್ದೆ. ಎನ್ನುವ ಅವರು ನಾನು 'ಶಿವಂ' ನಲ್ಲಿ ಬ್ಯುಸಿಯಾಗಿದ್ದರಿಂದ ಆ ಯೋಜನೆ ಕೈಗೆತ್ತಿಕೊಳ್ಳಲಾಗಲಿಲ್ಲ. ಕಿರಣ್ ಅವರ ತೆಲುಗಿನ ಚೊಚ್ಚಲ ಚಿತ್ರಕ್ಕೆ ಕಥೆ ಬರೆದವರು ಕೋಣ ವೆಂಕಟ್.

"ಆ ಕಥೆಗಾರ ಕಾಯಲು ಸಿದ್ಧವಿರಲಿಲ್ಲ ಆದುದರಿಂದ ಅವರನ್ನು ನನ್ನ ಗೆಳೆಯನಿಗೆ ಪರಿಚಯಿಸಿದೆ. ಆಗ 'ಗೀತಾಂಜಲಿ' ಹೊರಬಂತು. ನಂತರ ನಾನು ಎಲ್ಲಿಂದ ಬಿಟ್ಟಿದ್ದೆನೋ ಅಲ್ಲಿಂದಲೇ ಕನ್ನಡ ಸಿನೆಮಾ ನಿರ್ದೇಶನಕ್ಕೆ ಇಳಿದಿದ್ದೇನೆ. ನನಗೆ ಗೀತಾಂಜಲಿ ರಿಮೇಕ್ ಮಾಡುವ ಯಾವುದೇ ಇಚ್ಛೆಯಿಲ್ಲ" ಎನ್ನುತ್ತಾರೆ.

ರಾಜು ಅವರು 'ಶಿವಂ'ಗಿಂತಲೂ ಮುಂಚಿತವಾಗಿ 'ದಂಡುಪಾಳ್ಯ' ನಿರ್ದೇಶಿಸಿದ್ದರು. ಪೂಜಾ ಗಾಂಧಿ ಬಿಗ್ ಬಾಸ್ ನಿಂದ ಹೊರಬಂದ ಮೇಲೆ ದಂಡು ಪಾಳ್ಯ ಎರಡನೆ ಭಾಗ ನಿರ್ದೇಶಿಸುವುದಕ್ಕೂ ರಾಜು ಸಿದ್ದರಾಗಿದ್ದಾರೆ.

ನಾಳೆ ಬಿಡುಗಡೆಯಾಗಲಿರುವ 'ಕಥೆ ಚಿತ್ರಕಥೆ ನಿರ್ದೇಶನ ಪುಟ್ಟಣ್ಣ'ದಲ್ಲಿ ಕೋಮಲ್ ಮತ್ತು ಪ್ರಿಯಾಮಣಿ ಮುಖ್ಯನಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT