ಸಿನೆಮಾ ಸ್ಟಿಲ್ 
ಸಿನಿಮಾ ಸುದ್ದಿ

ರಕ್ಷಣೆ ಕೋರಿದ 'ಯಾರಿವನು' ಸಿನೆಮಾ ನಿರ್ದೇಶಕ

ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ವಿವಾದಗಳ ಕುರಿತ ಸಿನೆಮಾ ಎನ್ನಲಾದ "ಯಾರಿವನು" ಚಲನಚಿತ್ರದ

ಚೆನ್ನೈ: ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ವಿವಾದಗಳ ಕುರಿತ ಸಿನೆಮಾ ಎನ್ನಲಾದ "ಯಾರಿವನು" ಚಲನಚಿತ್ರದ ನಿರ್ದೇಶಕ ಮದನ್ ಪಟೇಲ್ ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಕನ್ನಡ ಚಲನಚಿತ್ರದ ತಮಿಳು ಡಬ್ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ಅವರಿಗೆ ೨೦೦ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ ಎಂದು ಅವರು ಆಪಾದಿಸಿದ್ದಾರೆ. ಕನ್ನಡದಲ್ಲಿ ಮತ್ತು ತೆಲುಗಿನಲ್ಲಿ 'ಸತ್ಯಾನಂದ' ಹೆಸರಿನಲ್ಲಿ ಈ ಸಿನೆಮಾ ಬಿಡುಗಡೆಯಾಗಿದ್ದಾಗಲೂ ವಿವಾದ ಭುಗಿಲೆದಿತ್ತು.

"ಆ ಎರಡು ರಾಜ್ಯಗಳಲ್ಲೂ ನಿತ್ಯಾನಂದ ಮತ್ತು ಅವರ ಶಿಷ್ಯರು ನನಗೆ ವಿಪರೀತ ತೊಂದರೆ ಕೊಟ್ಟರು ಹಾಗೂ ತಡೆಯಾಜ್ಞೆ ತಂದಿದ್ದರು. ನಾನು ಸೆನ್ಸಾರ್ ಸರ್ಟಿಫಿಕೇಟ್ ತರಲು ಮುಂಬೈ ಗೆ ಹೋಗಬೇಕಾಯಿತು ಹಾಗೂ ನನ್ನ ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ಗೆ ಕೇಳಿಕೊಳ್ಳಬೇಕಾಯಿತು" ಎಂದಿದ್ದಾರೆ ಮದನ್ ಪಟೇಲ್.

ಕನ್ನಡ ಮತ್ತು ತೆಲುಗಿನಲ್ಲಿ ಸಾಧಾರಣ ಯಶಸ್ಸು ಕಂಡ ಬಳಿಕ ಸಿ ಎನ್ ಎನ್ ಪಿಕ್ಚರ್ಸ್ ಸಂಸ್ಥೆಗೆ ತಮಿಳು ಹಕ್ಕುಗಳನ್ನು ಮಾರಲಾಗಿತ್ತು ಹಾಗೂ ಆರು ತಿಂಗಳ ಮುಂಚೆಯೆ ಎಲ್ಲ ಕೆಲಸಗಳು ಮುಗಿದಿವೆ. ಆದರೂ ಸಿನೆಮಾ ಬಿಡುಗಡೆಯ ಯಾವ ಲಕ್ಷಣಗಳು ಕಾಣುತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT