ಲಿಂಗಾ ಸಿನೆಮಾ ಸ್ಟಿಲ್ 
ಸಿನಿಮಾ ಸುದ್ದಿ

ಬಗೆಹರಿಯದ 'ಲಿಂಗಾ' ವಿವಾದ, ೩೪ ಕೋಟಿ ಪರಿಹಾರ ಕೇಳಿದ ವಿತರಕರು

ಸೂಪರ್ ಸ್ಟಾರ್ ರಜನೀಕಾಂತ್ ಅವರ ಲಿಂಗಾ ಸಿನೆಮಾ ವಿವಾದ ಬಗೆ ಹರಿದಿದೆ ಎಂದುಕೊಳ್ಳುತ್ತಿರುವಾಗಲೇ ಮತ್ತೆ ವಿತರಕರು ಒಗ್ಗೂಡಿದ್ದಾರೆ.

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅವರ ಲಿಂಗಾ ಸಿನೆಮಾ ವಿವಾದ ಬಗೆ ಹರಿದಿದೆ ಎಂದುಕೊಳ್ಳುತ್ತಿರುವಾಗಲೇ ಮತ್ತೆ ವಿತರಕರು ಒಗ್ಗೂಡಿದ್ದಾರೆ. ಈ ಹಿಂದೆ ಪರಿಹಾರ ಕೋರಿದ್ದ ವಿತರಕರು ಹಾಗೂ ಚಲನಚಿತ್ರಮಂದಿರ ಮಾಲಿಕರು ಭಾನುವಾರ ಮತ್ತೆ ಸಭೆ ಸೇರುತ್ತಿದ್ದು ನಟ ರಜನಿಕಾಂತ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮೇಲೆ ಹೊಸದಾಗಿ ಒತ್ತಡ ತರುವ ಬಗ್ಗೆ ಚಿಂತಿಸಲಿದ್ದಾರೆ.

ರಜನಿಕಾಂತ್ ಮತ್ತು ಸೋನಾಕ್ಷಿ ಸಿನ್ಹಾ ಅಭಿನಯದ ಲಿಂಗಾ ಚಲನಚಿತ್ರವನ್ನು ಕೆ ಎಸ್ ರವಿಕುಮಾರ್ ನಿರ್ದೇಶಿಸಿದ್ದರು. ಇದು ಡಿಸೆಂಬರ್ ೧೨ ರಂದು ಚಲನಚಿತ್ರಮಂದಿರಗಳಲ್ಲಿ ಬಿಡುಗಡೆ ಕಂಡಿತ್ತು. ವಿತರಕರಿಗೆ ಭಾರಿ ಮೊತ್ತಕ್ಕೆ ಈ ಸಿನೆಮಾ ಮಾರಾಟವಾಗಿತ್ತು. ಆದ ಚಲನಚಿತ್ರ ನಿರೀಕ್ಷಿತ ಗಳಿಕೆ ಕಾಣದೆ ಹೋದದ್ದರಿಂದ ವಿತರಕರು ಹಣ ಹಿಂದಿರುಗಿಸುವಂತೆ ರಜನಿಕಾಂತ್ ಅವರನ್ನು ಒತ್ತಾಯಿಸಿದ್ದರು.

ಸದ್ಯಕ್ಕೆ ನಿರ್ಮಾಪಕ ಒಪ್ಪಿಕೊಂಡಿರುವ ಪರಿಹಾರ ಅತಿ ಕಡಿಮೆ ಎಂದಿರುವ ವಿತರಕನೊಬ್ಬ, "ರಜನಿಕಾಂತ್ ಅವರ ಹತ್ತಿರದವರೇ ಆದ ತಿರ್ಪೂರ್ ಸುಬ್ರಮಣಿಯನ್ ಅವರು ನಮಗಾದ ನಷ್ಟದ ಬಗ್ಗೆ ವಿವರವಾಗಿ ಲೆಕ್ಕ ಮಾಡಿದ್ದಾರೆ. ಹೀಗಿದ್ದರೂ ಅವರು ನಮ್ಮ ನಷ್ಟವನ್ನು ಭರಿಸಿಕೊಡಲು ಒಪ್ಪುತ್ತಿಲ್ಲ ಆದುದರಿಂದ ಅವರು ಏರೋಸ್ ಇಂಟರ್ನ್ಯಾಶನಲ್ ನಿಂದ ಎಷ್ಟು ಹಣ ಪಡೆದಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ಮುಂದಾಗಿದ್ದೇವೆ" ಎನ್ನುತ್ತಾರೆ.

ನಮಗಾಗಿರುವ ನಷ್ಟ ಭರಿಸಿಕೊಡಲು ನಾವು ಕೇಳುತ್ತಿರುವ ಪರಿಹಾರ ಧನ ಕೇವಲ ೩೩.೮೫ ಕೋಟಿ. ನಾವು ಅವರ ಲಾಭದ ಮಾರ್ಜಿನ್ ಕಡಿಮೆ ಮಾಡಿಕೊಳ್ಳಿ ಎಂದಷ್ಟೇ ಕೇಳುತ್ತಿರುವುದು. ಅವರು ಏರೋಸ್ ಇಂಟರ್ನ್ಯಾಶನಲ್ ನಿಂದ ೧೫೭ ಕೋಟಿ ಪಡೆದಿದ್ದಾರೆ ಎಂದು ಕೂಡ ವಿತರಕರು ತಿಳಿಸಿದ್ದಾರೆ. ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ವಿತರಕರು ಅನುಭವಿಸಿದ್ದಾರೆ ಎನ್ನಲಾದ ನಷ್ಟದ ೧೦% ಮೊತ್ತವನ್ನು ಭರಿಸಿಕೊಡಲು ಒಪ್ಪಿಕೊಂಡಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT