ಸೆನ್ಸಾರ್ ಬೋರ್ಡ್ ಮುಖ್ಯಸ್ಥ ಪಹಲಾಜ್ ನಿಹಲಾನಿ 
ಸಿನಿಮಾ ಸುದ್ದಿ

ನಿರ್ಧಾರ ಸಮರ್ಥಿಸಿಕೊಂಡ ಪಹಲಾಜ್ ನಿಹಲಾನಿ

ಸಿನಿಮಾಗಳಲ್ಲಿ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪದಗಳ ಮಾರ್ಗಸೂಚಿ ನಿರ್ಬಂಧದಿಂದ ಯಾರಿಗಾದರೂ ಸಮಸ್ಯೆಯಿದ್ದರೆ...

ನವೆದೆಹಲಿ: ಸಿನಿಮಾಗಳಲ್ಲಿ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪದಗಳ ಮಾರ್ಗಸೂಚಿ ನಿರ್ಬಂಧದಿಂದ ಯಾರಿಗಾದರೂ ಸಮಸ್ಯೆಯಿದ್ದರೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಹೋಗಬಹುದು ಎಂದು ಸೆನ್ಸಾರ್ ಬೋರ್ಡ್ ಮುಖ್ಯಸ್ಥ ಪಹಲಾಜ್ ನಿಹಲಾನಿ ಹೇಳಿದ್ದಾರೆ.

ಇನ್ನು ಮುಂದೆ ನಿರ್ಮಾಣ ಮಾಡುವ ಸಿನಿಮಾಗಳಲ್ಲಿ ಡಬಲ್ ಮೀನಿಂಗ್ ಪದಗಳು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ, ರಕ್ತಪಾತಗಳನ್ನು ವೈಭವೀಕರಣ ಮಾಡುವಂತಿಲ್ಲ. ಒಂದು ವೇಳೆ ಮಂಡಳಿಯ ಮಾರ್ಗಸೂಚಿಯನ್ನು ಪಾಲಿಸದ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂಬ ಆದೇಶವನ್ನು ಪಹಲಾಜ್ ನಿಹಲಾನಿ ಹೊರಡಿಸಿದ್ದರು.

ಈ ಆದೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚಿತ್ರ ನಿರ್ಮಾಪಕ ಹಾಗೂ ಸೆನ್ಸಾರ್ ಬೋರ್ಡ್ ಸದಸ್ಯ ಅಶೋಕ್ ಪಂಡಿತ್, ನಿರ್ಧಾರ ಕೈಗೊಳ್ಳುವುದಕ್ಕೂ ಮೊದಲು ನಮ್ಮ ಸಲಹೆಯನ್ನೇ ಕೇಳಿರಲಿಲ್ಲ. ಆದರೆ ಮಾಧ್ಯಮಗಳಲ್ಲಿ ಸುದ್ದಿ ಬಹಿರಂಗವಾಗಿದೆ. ಸೆನ್ಸಾರ್ ಮಂಡಳಿಯ ನಿರ್ಧಾರದ ಪಟ್ಟಿಯಲ್ಲಿ ಸಾಮಾನ್ಯವಾಗಿ ಬಳಕೆಯಲ್ಲಿರುವ ಪದಗಳನ್ನೂ ನಿಷೇಧಿಸಲಾಗಿದೆ ಎಂದು ಆರೋಪಿಸಿದ್ದರು.

ಅಶೋಕ್ ಪಂಡಿತ್ ಅವರ ಈ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯೆ ನೀಡಿರುವ ಪಹಲಾಜ್ ನಿಹಲಾನಿ ಅವರು, ಪಟ್ಟಿ ತಯಾರು ಮಾಡಿರುವುದು ನಾನಲ್ಲ. ಪ್ರಸ್ತುತ ನಿಷೇಧಿಸಿರುವ ಪದಗಳ ಪಟ್ಟಿಯನ್ನು ಮಂಡಳಿ ಸದಸ್ಯರೇ ತಯಾರು ಮಾಡಿರುವಂತಹದ್ದು. ಪಟ್ಟಿ ತಯಾರಾದ ನಂತರ ಮಾಧ್ಯಮವನ್ನು ಹೊರತು ಪಡಿಸಿ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಕಚೇರಿಗಳಿಗಷ್ಟೇ ಪಟ್ಟಿಯ ಮಾಹಿತಿಯನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ.

ನನಗೆ ನೀಡಿರುವ ಮಾರ್ಗಸೂಚಿಯಂತೆ ನಾನು ನಡೆದುಕೊಳ್ಳುತ್ತಿದ್ದೇನೆ. ಮಂಡಳಿಯ ಸದಸ್ಯರೇ ಪಟ್ಟಿಯನ್ನು ತಯಾರಿಸಿದ್ದು, ನಾನು ವೈಯಕ್ತಿಕವಾಗಿ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ನಿರ್ಧಾರದಿಂದ ಚಿತ್ರೋದ್ಯಮ ಉದ್ಯೋಗಿಗಳಿಗೇನಾದರೂ ತೊಂದರೆಯಾಗಿದ್ದರೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಹೋಗಿ ಅವರ ಅಂಗೀಕಾರವನ್ನು ಪಡೆದುಕೊಂಡು ಬರಲಿ. ಸಚಿವಾಲಯದ ನಿರ್ಧಾರವನ್ನು ನಾನು ಪಾಲಿಸುತ್ತೇನೆ ಎಂದು ನಿಹಲಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT