ಸೆನ್ಸಾರ್ ಬೋರ್ಡ್ ಮುಖ್ಯಸ್ಥ ಪಹಲಾಜ್ ನಿಹಲಾನಿ 
ಸಿನಿಮಾ ಸುದ್ದಿ

ನಿರ್ಧಾರ ಸಮರ್ಥಿಸಿಕೊಂಡ ಪಹಲಾಜ್ ನಿಹಲಾನಿ

ಸಿನಿಮಾಗಳಲ್ಲಿ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪದಗಳ ಮಾರ್ಗಸೂಚಿ ನಿರ್ಬಂಧದಿಂದ ಯಾರಿಗಾದರೂ ಸಮಸ್ಯೆಯಿದ್ದರೆ...

ನವೆದೆಹಲಿ: ಸಿನಿಮಾಗಳಲ್ಲಿ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪದಗಳ ಮಾರ್ಗಸೂಚಿ ನಿರ್ಬಂಧದಿಂದ ಯಾರಿಗಾದರೂ ಸಮಸ್ಯೆಯಿದ್ದರೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಹೋಗಬಹುದು ಎಂದು ಸೆನ್ಸಾರ್ ಬೋರ್ಡ್ ಮುಖ್ಯಸ್ಥ ಪಹಲಾಜ್ ನಿಹಲಾನಿ ಹೇಳಿದ್ದಾರೆ.

ಇನ್ನು ಮುಂದೆ ನಿರ್ಮಾಣ ಮಾಡುವ ಸಿನಿಮಾಗಳಲ್ಲಿ ಡಬಲ್ ಮೀನಿಂಗ್ ಪದಗಳು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ, ರಕ್ತಪಾತಗಳನ್ನು ವೈಭವೀಕರಣ ಮಾಡುವಂತಿಲ್ಲ. ಒಂದು ವೇಳೆ ಮಂಡಳಿಯ ಮಾರ್ಗಸೂಚಿಯನ್ನು ಪಾಲಿಸದ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂಬ ಆದೇಶವನ್ನು ಪಹಲಾಜ್ ನಿಹಲಾನಿ ಹೊರಡಿಸಿದ್ದರು.

ಈ ಆದೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚಿತ್ರ ನಿರ್ಮಾಪಕ ಹಾಗೂ ಸೆನ್ಸಾರ್ ಬೋರ್ಡ್ ಸದಸ್ಯ ಅಶೋಕ್ ಪಂಡಿತ್, ನಿರ್ಧಾರ ಕೈಗೊಳ್ಳುವುದಕ್ಕೂ ಮೊದಲು ನಮ್ಮ ಸಲಹೆಯನ್ನೇ ಕೇಳಿರಲಿಲ್ಲ. ಆದರೆ ಮಾಧ್ಯಮಗಳಲ್ಲಿ ಸುದ್ದಿ ಬಹಿರಂಗವಾಗಿದೆ. ಸೆನ್ಸಾರ್ ಮಂಡಳಿಯ ನಿರ್ಧಾರದ ಪಟ್ಟಿಯಲ್ಲಿ ಸಾಮಾನ್ಯವಾಗಿ ಬಳಕೆಯಲ್ಲಿರುವ ಪದಗಳನ್ನೂ ನಿಷೇಧಿಸಲಾಗಿದೆ ಎಂದು ಆರೋಪಿಸಿದ್ದರು.

ಅಶೋಕ್ ಪಂಡಿತ್ ಅವರ ಈ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯೆ ನೀಡಿರುವ ಪಹಲಾಜ್ ನಿಹಲಾನಿ ಅವರು, ಪಟ್ಟಿ ತಯಾರು ಮಾಡಿರುವುದು ನಾನಲ್ಲ. ಪ್ರಸ್ತುತ ನಿಷೇಧಿಸಿರುವ ಪದಗಳ ಪಟ್ಟಿಯನ್ನು ಮಂಡಳಿ ಸದಸ್ಯರೇ ತಯಾರು ಮಾಡಿರುವಂತಹದ್ದು. ಪಟ್ಟಿ ತಯಾರಾದ ನಂತರ ಮಾಧ್ಯಮವನ್ನು ಹೊರತು ಪಡಿಸಿ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಕಚೇರಿಗಳಿಗಷ್ಟೇ ಪಟ್ಟಿಯ ಮಾಹಿತಿಯನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ.

ನನಗೆ ನೀಡಿರುವ ಮಾರ್ಗಸೂಚಿಯಂತೆ ನಾನು ನಡೆದುಕೊಳ್ಳುತ್ತಿದ್ದೇನೆ. ಮಂಡಳಿಯ ಸದಸ್ಯರೇ ಪಟ್ಟಿಯನ್ನು ತಯಾರಿಸಿದ್ದು, ನಾನು ವೈಯಕ್ತಿಕವಾಗಿ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ನಿರ್ಧಾರದಿಂದ ಚಿತ್ರೋದ್ಯಮ ಉದ್ಯೋಗಿಗಳಿಗೇನಾದರೂ ತೊಂದರೆಯಾಗಿದ್ದರೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಹೋಗಿ ಅವರ ಅಂಗೀಕಾರವನ್ನು ಪಡೆದುಕೊಂಡು ಬರಲಿ. ಸಚಿವಾಲಯದ ನಿರ್ಧಾರವನ್ನು ನಾನು ಪಾಲಿಸುತ್ತೇನೆ ಎಂದು ನಿಹಲಾನಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT