ಕೃಷ್ಣಮ್ಮ ಕಲಿಪಿಂದಿ ಇದ್ದರನು ತಂಡದೊಂದಿಗೆ ನಿರ್ದೇಶಕ ಆರ್.ಚಂದ್ರು (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಚಂದ್ರು ಆಡಿಯೋಗೆ ಆಂಧ್ರ ರೆಡಿ

ನಿರ್ದೇಶಕ ಆರ್. ಚಂದ್ರು ತಮ್ಮ ಮೊದಲ ತೆಲುಗು ಚಿತ್ರದ ಆಡಿಯೋ ಬಿಡುಗಡೆಯನ್ನು ಅದ್ದೂರಿಯಾಗಿ ಮಾಡಲು ಸ್ಕೆಚ್ ಹಾಕಿದ್ದಾರೆ..

ನಿರ್ದೇಶಕ ಆರ್. ಚಂದ್ರು ತಮ್ಮ ರಾಜ್ಯಪ್ರಶಸ್ತಿ ವಿಜೇತ ಚಾರ್ ಮಿನಾರ್ ಚಿತ್ರವನ್ನು ತೆಲುಗಿಗೆ ರಿಮೇಕ್ ಮಾಡುತ್ತಿರೋದು ಎಲ್ಲರಿಗೂ ಗೊತ್ತೇ ಇದೆ. ಚಾರ್‍ಮಿನಾರ್ ಚಿತ್ರಕ್ಕೆ ಪ್ರಶಸ್ತಿ ಬಂದಿರುವ ಸಂತಸಕ್ಕೆ ಅವರು ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮಾಡುತ್ತಿರುವ ಹೊತ್ತಲ್ಲಿ ಇದು ಇನ್ನೊಂದು ಸುದ್ದಿ. ಅವರ "ಕೃಷ್ಣಮ್ಮ ಕಲಿಪಿಂದಿ ಇದ್ದರನು" ಚಿತ್ರದ ಆಡಿಯೋ ಬಿಡುಗಡೆ ಸಮಯ ಇದು.

ಹೌದು ತಮ್ಮ ಮೊದಲ ತೆಲುಗು ಚಿತ್ರದ ಆಡಿಯೋ ಬಿಡುಗಡೆಯನ್ನು ಅದ್ದೂರಿಯಾಗಿ ಮಾಡಲು ಆರ್ ಚಂದ್ರು ಸ್ಕೆಚ್ ಹಾಕಿದ್ದಾರೆ. ಇದೇ ತಿಂಗಳ 26ರಂದು ಅದಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ.

ತಮ್ಮ ಚಿತ್ರದ ಆಡಿಯೋ ಬಿಡುಗಡೆಗೆ ಚಂದ್ರು ಆರಿಸಿಕೊಂಡಿರುವುದು ಆಂಧ್ರದ ರಾಜಧಾನಿ ವಿಜಯವಾಡವನ್ನು. ವಿಶೇಷ ಎಂದರೆ ಅಲ್ಲಿನ ಪ್ರಮುಖ ಸೂಪರ್‍ಸ್ಟಾರ್ ಗಳು ಈ ಅದ್ದೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದು. ಈಗಾಗಲೇ ವಿಕ್ಟರಿ ವೆಂಕಟೇಶ್ ಈ ಕಾರ್ಯಕ್ರಮಕ್ಕೆ ಬರುವುದು ಕನ್ ಫರ್ಮ್ ಆಗಿದೆ. ಉಳಿದಂತೆ ಇನ್ಯಾರು ಬರುತ್ತಾರೆ ಎಂಬ ಕುತೂಹಲಕ್ಕೆ ಅಂದಿನ ಕಾರ್ಯಕ್ರಮದಲ್ಲೇ ಉತ್ತರ ಸಿಗಲಿದೆಯಂತೆ.

ಅಂತೂ ಒಬ್ಬ ನಿರ್ದೇಶಕರಾಗಿ ಕನ್ನಡ ನಾಡಿನ ಗಡಿ ದಾಡಿದ ಚಂದ್ರು ಇನ್ನೇನು ತಮ್ಮ ಚಿತ್ರದ ಬಿಡುಗಡೆಯ ಗಡಿಯಲ್ಲಿದ್ದಾರೆ. ಅದರ ಕೊನೆಯ ಅಂಗವಾಗಿ ಈ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದೆ. ಈಗಾಗಲೇ ಒಂದೇ ಸಿನಿಮಾಕ್ಕೆ ಆಂಧ್ರದಲ್ಲಿ ಫೆಮಿಲಿಯಿರ್ ಹೆಸರು ಎನಿಸಿಕೊಂಡಿರುವ ಆರ್. ಚಂದ್ರು ಅಲ್ಲಿ ಉತ್ತಮ ಭಾಂಧವ್ಯ ಹೊಂದಿದ್ದಾರೆ. ಈ ತೆಲುಗು ಚಿತ್ರದ ಬಿಡುಗಡೆಯ ನಂತರ ಚಿತ್ರ ಸೂಪರ್ ಹಿಟ್ ಆದರೆ ಅದು ಇನ್ನಷ್ಟು ಹೆಚ್ಚಾಗಿ ಚಂದ್ರು ಅಲ್ಲೇ ತಳವೂರಿದರೂ ಅಚ್ಚರಿ ಇಲ್ಲ.?


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆ

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!

SCROLL FOR NEXT