ರಜನಿಕಾಂತ್ 
ಸಿನಿಮಾ ಸುದ್ದಿ

ಎರಡು ದೃಶ್ಯಗಳಿಂದಾಗಿ 'ದೃಶ್ಯಂ' ತಮಿಳು ರಿಮೇಕ್ ತಿರಿಸ್ಕರಿಸಿದ ರಜನಿ

ಎರಡು ನಿರ್ಧಿಷ್ಟ ದೃಶ್ಯಗಳ ಕಾರಣದಿಂದಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಲೆಯಾಳಂ ಬ್ಲಾಕ್‌ಬಸ್ಟರ್ ಮೂವಿ 'ದೃಶ್ಯ'ದಲ್ಲಿ ಅಭಿನಯಿಸಲು...

ಚೆನ್ನೈ: ಎರಡು ನಿರ್ದಿಷ್ಟ ದೃಶ್ಯಗಳ ಕಾರಣದಿಂದಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಲೆಯಾಳಂ ಬ್ಲಾಕ್‌ಬಸ್ಟರ್ ಮೂವಿ 'ದೃಶ್ಯ'ದಲ್ಲಿ ಅಭಿನಯಿಸಲು ನಿರಾಕರಿಸಿದ್ದಾರೆ.

ಮೂಲಗಳ ಪ್ರಕಾರ, ದೃಶ್ಯಂ ತಮಿಳು ರಿಮೇಕ್ ಚಿತ್ರದಲ್ಲಿ ರಜನಿಕಾಂತ್ ಅವರೊಂದಿಗೆ ಕೆಲಸ ಮಾಡಲು ನಿರ್ದೇಶಕ ಜೀತು ಜೋಸೆಫ್ ಅವರು ಸಹ ಒಪ್ಪಿಕೊಂಡಿದ್ದರು. ಆದರೆ ಆ ಚಿತ್ರದಲ್ಲಿನ ಎರಡು ದೃಶ್ಯಗಳಿಂದ ತಮ್ಮ ಅಭಿಮಾನಿಗಳಿಗೆ ಬೇಸರವಾಗಬುಹುದು ಎಂಬ ಕಾರಣದಿಂದ ರಜನಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

'ರಜನಿಕಾಂತ್ ಸರ್ ಅವರು ಕಥೆಯನ್ನು ತುಂಬಾ ಇಷ್ಟಪಟ್ಟಿದ್ದರು. ಆದರೆ ಆ ಚಿತ್ರದಲ್ಲಿನ ಎರಡು ದೃಶ್ಯಗಳು ಅವರಿಗೆ ಇಷ್ಟವಾಗಲಿಲ್ಲ ಎಂದು ಜೀತು ಹೇಳಿರುವುದಾಗಿ' ಮೂಲಗಳು ತಿಳಿಸಿವೆ.

'ರಜನಿಗೆ ಇಷ್ಟವಾಗದ ಮೊದಲ ದೃಶ್ಯ ಎಂದರೆ, ಪೊಲೀಸರು ನಾಯಕನನ್ನು ಹಿಗ್ಗಾಮುಗ್ಗಾ ಥಳಿಸುವುದು. ಮತ್ತೊಂದು ಚಿತ್ರದ ಕ್ಲೈಮ್ಯಾಕ್ಸ್. ರಜನಿ ಅವರನ್ನು ಥಳಿಸುವ ದೃಶ್ಯವನ್ನು ಅವರ ಅಭಿಮಾನಿಗಳು ಇಷ್ಟಪಡುತ್ತಾರೆ ಎಂಬ ನಂಬಿಕೆ ಅವರಿಗೆ ಇರಲಿಲ್ಲ. ಹೀಗಾಗಿ ಅವರು ಚಿತ್ರವನ್ನು ಒಪ್ಪಿಕೊಂಡಿಲ್ಲ' ಎಂದು ಮೂಲಗಳು ತಿಳಿಸಿವೆ.

ರಜನಿ ನಿರಾಕರಿಸಿದ ಬಳಿಕ, ದೃಶ್ಯಂ ತಮಿಳು ರಿಮೇಕ್ 'ಪಾಪನಾಸಂ' ಚಿತ್ರದಲ್ಲಿ ಕಮಲ್ ಹಾಸನ್ ಅಭಿನಯಿಸಿದ್ದು, ಚಿತ್ರ ಈಗ ತಮಿಳುನಾಡಿನಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

IPL 2026: ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ Virat Kohli; ಮತ್ತೆ ನಂಬರ್ 1 ಪಟ್ಟ!

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSGಗೆ ಭರ್ಜರಿ ಜಯ, ಮೈದಾನದಲ್ಲೇ ನಾಯಕ Rishabh Pant ಬಿಗಿದಪ್ಪಿದ Sanjiv Goenka

IPL 2026: ಕೊನೆಗೂ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ ಲಖನೌ, ಕಣ್ಣೀರು ಹಾಕಿದ ಸಂಜೀವ್ ಗೋಯೆಂಕಾ, Video!

SCROLL FOR NEXT