'ಮಾಸ್ಟರ್ ಪೀಸ್'ನಲ್ಲಿ ನಟ ಯಶ್ 
ಸಿನಿಮಾ ಸುದ್ದಿ

'ಮಾಸ್ಟರ್ ಪೀಸ್'ನಲ್ಲಿ ಖಳನಾಯಕನ ಛಾಯೆಯಲ್ಲಿ ಯಶ್

ಬಲ್ಲ ಮೂಲಗಳ ಪ್ರಕಾರ ಯಶ್ ಅವರ ಮುಂದಿನ ಸಿನೆಮಾದಲ್ಲಿ ವಿಶಿಷ್ಟ ಪಾತ್ರವನ್ನು ನಿರ್ವಹಿಸುವ ಮೂಲಕ, ನಾಯಕ ನಟ ಎಂಬ ಪಟ್ಟದ ಜೊತೆ ಜೂಜಾಡಿದ್ದಾರೆ

ಬೆಂಗಳೂರು: ಬಲ್ಲ ಮೂಲಗಳ ಪ್ರಕಾರ ಯಶ್ ಅವರ ಮುಂದಿನ ಸಿನೆಮಾದಲ್ಲಿ ವಿಶಿಷ್ಟ ಪಾತ್ರವನ್ನು ನಿರ್ವಹಿಸುವ ಮೂಲಕ, ನಾಯಕ ನಟ ಎಂಬ ಪಟ್ಟದ ಜೊತೆ ಜೂಜಾಡಿದ್ದಾರೆ ಎನ್ನಲಾಗುತ್ತಿದೆ. ಮಂಜು ಮಾಂಡವ್ಯ ಅವರ ನಿರ್ದೇಶನದ 'ಮಾಸ್ಟರ್ ಪೀಸ್' ಸಿನೆಮಾದಲ್ಲಿ ಖಳನಾಯಕದ ಛಾಯೆ ಇರುವ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳಲ್ಲಿದ್ದಾರಂತೆ. 'ಮಾಸ್ಟರ್ ಪೀಸ್'ನ ಕೆಲವು ಪೋಸ್ಟರ್ ಗಳಲ್ಲಿ ಯಶ್, ಭಗತ್ ಸಿಂಗ್ ವೇಷ ತೊಟ್ಟು ಕಾಣಿಸಿಕೊಂಡರೆ ಇನ್ನೂ ಕೆಲವು ಭಿತ್ತಿಚಿತ್ರಗಳಲ್ಲಿ ಕೋಪತಪ್ತ ಯುವಕನ ಛಾಯೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ನಾಯಕನಟನಾಗಿ ಬಹು ಪ್ರಖ್ಯಾತತೆ ಗಳಿಸುವ ನಟರು ಋಣಾತ್ಮಕ ಪಾತ್ರಗಳಲ್ಲಿ ನಟಿಸುವುದು ವಿರಳ.

ಚಿತ್ರತಂಡ ಯಾವುದೇ ಸುಳಿವು ನೀಡಲು ನಿರಾಕರಿಸಿರುವುದರಿಂದ ಯಶ್ ಪಾತ್ರದ ಬಗ್ಗೆ ಕುತೂಹಲ ಪ್ರೇಕ್ಷಕರಿಗೆ ದಿನದಿಂದ ದಿನಕ್ಕೆ ಏರುತ್ತಿದೆ.

ಈ ಹಿಂದೆ ಬಾಲಿವುಡ್ ನಟ ಶಾರುಕ್ ಖಾನ್ ಕೂಡ ನಟನೆಯ ಉತ್ತುಂಗದಲ್ಲಿದ್ದಾಗ ಬಾಜಿಗರ್ ಮತ್ತು ಡರ್ ಸಿನೆಮಾಗಲ್ಲಿ ಋಣಾತ್ಮಕ ಪಾತ್ರಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು. ಕನ್ನಡ ಚಿತ್ರೋದ್ಯಮದಲ್ಲೂ ಕೂಡ ಉಪೇಂದ್ರ ಮತ್ತು ಸುದೀಪ್ ಈ ಪ್ರಯೋಗ ಮಾಡಿ ಗೆದ್ದಿರುವವರೇ. ಸ್ವಲ್ಪ ಹಿಂದಕ್ಕೆ ಹೋದರೆ ದಾರಿತಪ್ಪಿದ ಮಗ ಸಿನೆಮಾದಲ್ಲಿ ಡಾ. ರಾಜಕುಮಾರ್ ಕೂಡ ಅಲ್ಲದೆ ವಿವಿಧ ಸಮಯಗಳಲ್ಲಿ ಅಂಬರೀಶ್ ಮತ್ತು ವಿಷ್ಣುವರ್ಧನ್ ಕೂಡ ಖಳನಾಯಕರ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ವಿಜಯ್ ಕಿರಗಂಡೂರ್ ನಿರ್ಮಿಸುತ್ತಿರುವ ಈ ಸಿನೆಮಾದಲ್ಲಿ ಶಾನ್ವಿ ಶ್ರೀವಾಸ್ತವ, ಸುಹಾಸಿನಿ ಮತ್ತು ಚಿಕ್ಕಣ್ಣ ಕೂಡ ಸಹ ಪಾತ್ರಧಾರಿಗಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ

ಇಸ್ಲಾಂ ಧರ್ಮವೇ ಶ್ರೇಷ್ಠ: ಸಿಎಂ ಡಿಕೆಶಿಯ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ' ರಾಯರೆಡ್ಡಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ!

'ಮಹಿಳೆಯರು ಚಿನ್ನವಿದ್ದಂತೆ, ಪೆಟ್ಟಿಗೆಯೊಳಗಿಟ್ಟು ಜೋಪಾನ ಮಾಡಿ': ಮನೆಯಿಂದ ಹೊರಗೆ ಕಾಲಿಡಲು ಬಿಟ್ಟರೆ 'ಭಾರಿ ವಿನಾಶ' ಎಂದ ಕೇರಳದ ಧರ್ಮಗುರು!