'ಮಾಸ್ಟರ್ ಪೀಸ್'ನಲ್ಲಿ ನಟ ಯಶ್ 
ಸಿನಿಮಾ ಸುದ್ದಿ

'ಮಾಸ್ಟರ್ ಪೀಸ್'ನಲ್ಲಿ ಖಳನಾಯಕನ ಛಾಯೆಯಲ್ಲಿ ಯಶ್

ಬಲ್ಲ ಮೂಲಗಳ ಪ್ರಕಾರ ಯಶ್ ಅವರ ಮುಂದಿನ ಸಿನೆಮಾದಲ್ಲಿ ವಿಶಿಷ್ಟ ಪಾತ್ರವನ್ನು ನಿರ್ವಹಿಸುವ ಮೂಲಕ, ನಾಯಕ ನಟ ಎಂಬ ಪಟ್ಟದ ಜೊತೆ ಜೂಜಾಡಿದ್ದಾರೆ

ಬೆಂಗಳೂರು: ಬಲ್ಲ ಮೂಲಗಳ ಪ್ರಕಾರ ಯಶ್ ಅವರ ಮುಂದಿನ ಸಿನೆಮಾದಲ್ಲಿ ವಿಶಿಷ್ಟ ಪಾತ್ರವನ್ನು ನಿರ್ವಹಿಸುವ ಮೂಲಕ, ನಾಯಕ ನಟ ಎಂಬ ಪಟ್ಟದ ಜೊತೆ ಜೂಜಾಡಿದ್ದಾರೆ ಎನ್ನಲಾಗುತ್ತಿದೆ. ಮಂಜು ಮಾಂಡವ್ಯ ಅವರ ನಿರ್ದೇಶನದ 'ಮಾಸ್ಟರ್ ಪೀಸ್' ಸಿನೆಮಾದಲ್ಲಿ ಖಳನಾಯಕದ ಛಾಯೆ ಇರುವ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳಲ್ಲಿದ್ದಾರಂತೆ. 'ಮಾಸ್ಟರ್ ಪೀಸ್'ನ ಕೆಲವು ಪೋಸ್ಟರ್ ಗಳಲ್ಲಿ ಯಶ್, ಭಗತ್ ಸಿಂಗ್ ವೇಷ ತೊಟ್ಟು ಕಾಣಿಸಿಕೊಂಡರೆ ಇನ್ನೂ ಕೆಲವು ಭಿತ್ತಿಚಿತ್ರಗಳಲ್ಲಿ ಕೋಪತಪ್ತ ಯುವಕನ ಛಾಯೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ನಾಯಕನಟನಾಗಿ ಬಹು ಪ್ರಖ್ಯಾತತೆ ಗಳಿಸುವ ನಟರು ಋಣಾತ್ಮಕ ಪಾತ್ರಗಳಲ್ಲಿ ನಟಿಸುವುದು ವಿರಳ.

ಚಿತ್ರತಂಡ ಯಾವುದೇ ಸುಳಿವು ನೀಡಲು ನಿರಾಕರಿಸಿರುವುದರಿಂದ ಯಶ್ ಪಾತ್ರದ ಬಗ್ಗೆ ಕುತೂಹಲ ಪ್ರೇಕ್ಷಕರಿಗೆ ದಿನದಿಂದ ದಿನಕ್ಕೆ ಏರುತ್ತಿದೆ.

ಈ ಹಿಂದೆ ಬಾಲಿವುಡ್ ನಟ ಶಾರುಕ್ ಖಾನ್ ಕೂಡ ನಟನೆಯ ಉತ್ತುಂಗದಲ್ಲಿದ್ದಾಗ ಬಾಜಿಗರ್ ಮತ್ತು ಡರ್ ಸಿನೆಮಾಗಲ್ಲಿ ಋಣಾತ್ಮಕ ಪಾತ್ರಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು. ಕನ್ನಡ ಚಿತ್ರೋದ್ಯಮದಲ್ಲೂ ಕೂಡ ಉಪೇಂದ್ರ ಮತ್ತು ಸುದೀಪ್ ಈ ಪ್ರಯೋಗ ಮಾಡಿ ಗೆದ್ದಿರುವವರೇ. ಸ್ವಲ್ಪ ಹಿಂದಕ್ಕೆ ಹೋದರೆ ದಾರಿತಪ್ಪಿದ ಮಗ ಸಿನೆಮಾದಲ್ಲಿ ಡಾ. ರಾಜಕುಮಾರ್ ಕೂಡ ಅಲ್ಲದೆ ವಿವಿಧ ಸಮಯಗಳಲ್ಲಿ ಅಂಬರೀಶ್ ಮತ್ತು ವಿಷ್ಣುವರ್ಧನ್ ಕೂಡ ಖಳನಾಯಕರ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ವಿಜಯ್ ಕಿರಗಂಡೂರ್ ನಿರ್ಮಿಸುತ್ತಿರುವ ಈ ಸಿನೆಮಾದಲ್ಲಿ ಶಾನ್ವಿ ಶ್ರೀವಾಸ್ತವ, ಸುಹಾಸಿನಿ ಮತ್ತು ಚಿಕ್ಕಣ್ಣ ಕೂಡ ಸಹ ಪಾತ್ರಧಾರಿಗಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT