'ಅರ್ಜುನ' ಸಿನೆಮಾದ ಆಡಿಯೋ ಅನಾವರಣದಲ್ಲಿ ಪ್ರದರ್ಶನ ನೀಡಿದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ 
ಸಿನಿಮಾ ಸುದ್ದಿ

'ಅರ್ಜುನ'ನ ವಿಶಿಷ್ಟ ಆಡಿಯೋ ಬಿಡುಗಡೆ

ಪಿ ಸಿ ಶೇಖರ್ ಅವರ 'ಅರ್ಜುನ' ಸಿನೆಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮ ಸಾಮಾನ್ಯ ಕಾರ್ಯಕ್ರಮವಾಗಿರದೆ,...

ಬೆಂಗಳೂರು: ಪಿ ಸಿ ಶೇಖರ್ ಅವರ 'ಅರ್ಜುನ' ಸಿನೆಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮ ಸಾಮಾನ್ಯ ಕಾರ್ಯಕ್ರಮವಾಗಿರದೆ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ೧೪ ಸದಸ್ಯರೊಂದಿಗೆ ಆರ್ಚೆಸ್ಟ್ರಾ ನಡೆಸುವುದರೊಂದಿಗೆ ಮಂಗಳವಾರ ವಿಶೇಷತೆಯ ಮೆರುಗು ತಂದಿದ್ದರು.

ತಮ್ಮ ಸಿನೆಮಾದಲ್ಲಿ ಸಂಗೀತಕ್ಕೇ ವಿಶೇಷ ಪಾತ್ರವಿದೆ ಎನ್ನುವ ಶೇಖರ್ "ಸಂಗೀತ ತನ್ನಷ್ಟಕ್ಕೆ ಮಾತನಾಡಬೇಕು ಎಂದೆನಿಸಿತು ನಮಗೆ" ಎನ್ನುತ್ತಾರೆ. ಆದುದರಿಂದ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತಂತೆ.

ಈ ಪ್ರದರ್ಶನದಲ್ಲಿ 'ಸೋಲ್ ಆಫ್ ಅರ್ಜುನ' ಎಂಬ ಥೀಮ್ ಸಂಗೀತವನ್ನು ಅರ್ಜುನ್ ಜನ್ಯ ನುಡಿಸಿದ್ದಲ್ಲದೆ, ಸಿನೆಮಾದ ಇತರ ಹಾಡುಗಳನ್ನು ಕೂಡ ನೀಡುವುದರೊಂದಿಗೆ ನೆರೆದಿದ್ದವರನ್ನು ರಂಜಿಸಿದರು.

ಕಾರ್ತಿಕ್ ಹಾಡಿರುವ ಕವಿರಾಜ್ ಗೀತರಚನೆ ಮಾಡಿರುವ 'ಸಖಿಯೆ ಸಖಿಯೆ' ಹಾಡು ಕೇಳುಗರ ಗಮನ ಸೆಳೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT