ಗಿರೀಶ್ ಕಾಸರವಳ್ಳಿ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಜು.25 ರಿಂದ ಭಾರತೀಯ ವಿದ್ಯಾಭವನದದಲ್ಲಿ ಗಿರೀಶ್ ಕಾಸರವಳ್ಳಿ ಚಿತ್ರಗಳ ಚಿತ್ರೋತ್ಸವ

ಗಿರೀಶ್ ಕಾಸರವಳ್ಳಿ ಅವರ ಚಿತ್ರೋತ್ಸವವನ್ನು ಜು. 25 ರಿಂದ 29 ರವರೆಗೆ ಭಾರತೀಯ ವಿದ್ಯಾಭವನದ ಖಿಂಚಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಬೆಂಗಳೂರು: ಗಿರೀಶ್ ಕಾಸರವಳ್ಳಿ ಅವರ 10 ಚಿತ್ರಗಳ ಚಿತ್ರೋತ್ಸವವನ್ನು ಜು. 25 ರಿಂದ 29 ರವರೆಗೆ ಭಾರತೀಯ ವಿದ್ಯಾಭವನದ ಖಿಂಚಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಚಿತ್ರೋತ್ಸವ ಉದ್ಘಾಟನೆ ದಿನ ಬೆಳಿಗ್ಗೆ 10 :30 ರಿಂದ ರಾತ್ರಿ 8 ಗಂಟೆ ವರೆಗೆ ಗಿರೀಶ್ ಕಾಸರವಳ್ಳಿ ನಿರ್ದೇಶನದ ಗುಲಾಬಿ ಟಾಕೀಸ್ ನಾಯಿ ನೆರಳು, ಮತ್ತು ಕ್ರೌರ್ಯ ಚಲನಚಿತ್ರ ಪ್ರದರ್ಶನಗೊಳ್ಳಲಿದೆ. ಜು.26 ರ ಬೆಳಿಗ್ಗೆ 10 :30 ರಿಂದ ರಾತ್ರಿ 8ರವರೆಗೆ ತಾಯಿ ಸಾಹೇಬ, ಘಟಶ್ರಾದ್ಧ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಅಂತೆಯೇ ಜು.27 ರ ಮಧ್ಯಾಹ್ನ 3.30 ರಿಂದ ರಾತ್ರಿ 8ರವರೆಗೆ ತಬರನ ಕಥೆ ಮತ್ತು ದ್ವೀಪ ಚಲನಚಿತ್ರ, ಜು.28 ರಂದು ಕನಸೆಂಬ ಕುದುರೆಯನೇರಿ, ಹಸೀನಾ ಹಾಗೂ ಜು.29 ರಂದು ಅದೂರು ಗೋಪಾಲಕೃಷ್ಣ ಚಲನಚಿತ್ರಗಳು ಪ್ರದರ್ಶನವಾಗಲಿವೆ. ಇದರೊಂದಿಗೆ ಪ್ರತಿದಿನ ಚಲನಚಿತ್ರ ತಜ್ಞರು ಮತ್ತು ವಿಮರ್ಶಕರು ಒಳಗೊಂಡಂತೆ ಚರ್ಚೆ ಸಂವಾದ ನಡೆಯಲಿದೆ.

ಚಲನಚಿತ್ರ ಪ್ರದರ್ಶನದೊಂದಿಗೆ ಪ್ರತಿದಿನ ಚಲನಚಿತ್ರ ತಜ್ಞರು ಮತ್ತು ವಿಮರ್ಶಕರು ಪಾಲ್ಗೊಳ್ಳುವ ಚರ್ಚೆ-ಸಂವಾದ ನಡೆಯುತ್ತವೆ. ಕನ್ನಡ ಚಿತ್ರರಂಗದ ಪ್ರತಿಭಾವಂತರ ಚಿತ್ರೋತ್ಸವ ಏರ್ಪಡಿಸುವ ನಡೆಯನ್ನು ಭಾರತೀಯ ವಿದ್ಯಾಭವನ ಕಳೆದವರ್ಷ ಟಿ.ಎಸ್. ನಾಗಾಭರಣರ 14 ವೈವಿಧ್ಯಮಯ ಚಿತ್ರಗಳ ಚಿತ್ರೋತ್ಸವದೊಂದಿಗೆ ಪ್ರಾರಂಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT