ಜನನಾಥನ್ 
ಸಿನಿಮಾ ಸುದ್ದಿ

ಚಿತ್ರವೊಂದರಲ್ಲಿ ನಟಿಸಲಿದ್ದಾರೆ ರಾಜೀವ್ ಗಾಂಧಿ ಕೊಲೆ ಅಪರಾಧಿ

ಅಂದುಕೊಂಡಂತೆ ಆದರೆ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕ ಎಜಿ ಪೆರಾರಿವಾಲನ್ ಅಲಿಯಾಸ್ ಅರಿವು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ...

ವೆಲ್ಲೂರು: ಅಂದುಕೊಂಡಂತೆ ಆದರೆ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕ ಎಜಿ ಪೆರಾರಿವಾಲನ್ ಅಲಿಯಾಸ್ ಅರಿವು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಎಸ್ ಪಿ ಜನನಾಥನ್ ತಮ್ಮ ಮುಂದಿನ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸಲಿದ್ದಾರೆ.

ತಮಿಳಿನ ಪೊರಂಪೊಕು ಎಂಗಿರ ಪೊತುವುದಮೈ ಖ್ಯಾತಿಯ ನಿರ್ದೇಶಕ ಜನನಾಥನ್ ಹಾಗೂ ಅರಿವು ಅವರ ತಾಯಿ ಅರ್ಪುತಮ್ಮಲ್ ಇಬ್ಬರು ವೆಲ್ಲೂರ್ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಶಿಕ್ಷೆ ಅನುಭವಿಸುತ್ತಿರುವ ಅರಿವುರನ್ನು ಮಾತನಾಡಿಸಿದ್ದು, ಅವರು ಒಪ್ಪಿಕೊಂಡರೆ ಚಿತ್ರ ನಿರ್ದೇಶನಕ್ಕೆ ಕೈ ಹಾಕುವುದಾಗಿ ಹೇಳಿದ್ದಾರೆ.

ತಮಿಳಿನ ಆರ್ಯ ಮತ್ತು ವಿಜಯ್ ಸೆತ್ತುಪಟ್ಟಿ ನಟನೆಯ ಪೊರಂಪೊಕು ಎಂಗಿರ ಪೊತುವುದಮೈ ಚಿತ್ರ ಮರಣದಂಡನೆಗೆ ಸಂಬಂಧಿಸಿದಾಗಿದ್ದು, ಚಿತ್ರವನ್ನು ಒಂದು ಬಾರಿಯು ವೀಕ್ಷಿಸದ ಅರಿವು ಚಿತ್ರದ ಕತೆ ಹಾಗೂ ಮಾಧ್ಯಮಗಳ ವಿಮರ್ಶೆಗಳನ್ನು ನೋಡಿ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ ಎಂದು ನಿರ್ದೇಶಕರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT