ನಿರ್ದೇಶಕ ರಾಮ್ ಗೋಪಾಲ್ ವರ್ಮಾ 
ಸಿನಿಮಾ ಸುದ್ದಿ

ಗೋದಾವರಿ ದುರಂತದ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ ಆರ್ ಜಿ ವಿ

ವಿವಾದಗಳು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಹೊಸತೇನಲ್ಲ. ಮುಂಬೈನಲ್ಲಿ ಭಯೋತ್ಪಾದಕ ಧಾಳಿ ನಡೆದ ಕೆಲವೇ ಘಂಟೆಗಳಲ್ಲಿ,

ವಿವಾದಗಳು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಹೊಸತೇನಲ್ಲ. ಮುಂಬೈನಲ್ಲಿ ಭಯೋತ್ಪಾದಕ ಧಾಳಿ ನಡೆದ ಕೆಲವೇ ಘಂಟೆಗಳಲ್ಲಿ, ಅಂದಿನ ಮುಖ್ಯಮಂತ್ರಿಯವರ ಪುತ್ರನ ಜೊತೆ ದಾಳಿಗೊಳಗಾದ ಹೋಟೆಲ್ ಆವರಣಕ್ಕೆ ಹೊಕ್ಕಿ ವಿವಾದಕ್ಕೀಡಾಗಿದ್ದರು.

ಈಗ ಸೃಷ್ಟಿಸಿಕೊಂಡಿರುವ ಹೊಸ ವಿವಾದದಲ್ಲಿ, ಗೋದಾವರಿ ಪುಷ್ಕರಂ ಸ್ನಾನದ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ೨೭ ಮಂದಿ ಮೃತಪಟ್ಟ ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ "ಈ ಬಡ ಭಕ್ತಾದಿಗಳನ್ನು ಸಾಯದಂತೆ ದೇವರು ಏಕೆ ನಿಲ್ಲಿಸಲಿಲ್ಲ. ಇವರು ಬದುಕುಳಿದವರಿಗಿಂತಲೂ ಕಡಿಮೆ ಪ್ರಾರ್ಥನೆ ಮಾಡಿದ್ದರು ಎಂತಲೇ?" ಎಂದು ಬರೆದಿದ್ದಾರೆ.


ಇನ್ನು ಒಂದು ಕೈ ಮುಂದೆ ಹೋಗಿ, ದೇವರೇ ತನ್ನ ಭಕ್ತಾದಿಗಳನ್ನು ಉಳಿಸಿಕೊಳ್ಳದೆ ಹೋದಾಗ ಆಂಧ್ರಪ್ರದೇಶದ ಬಡ ಸಿಎಂ ಎನ್ ಚಂದ್ರಬಾಬು ನಾಯ್ಡು ಕೂಡ ಹೆಚ್ಚೇನು ಮಾಡಲಾಗಿಲ್ಲ ಎಂದು ಕೂಡ ಬರೆದಿದ್ದಾರೆ.


೧೪೪ ವರ್ಷಕ್ಕೊಮ್ಮೆ ನಡೆಯುವ ಈ ಮಹಾಪುಶ್ಕರಂ ನಲ್ಲಿ ಭಾಗಿಯಾಗಲು ಗೋದಾವರಿ ನದಿಯ ದಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿಯಾಗಿದ್ದರು. ಇಂತಹ ಸಮಯದಲ್ಲಿ ನಡೆದ ಕಾಲ್ತುಳಿತದ ಅವಘಡದಿಂದ ೨೭ ಜನ ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ನಾಯ್ಡು ೧೦ ಲಕ್ಷ ಧನಸಹಾಯವನ್ನು ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT