ಹೃದಯಾಘಾತ(ಸಾಂಕೇತಿಕ ಚಿತ್ರ) 
ಸಿನಿಮಾ ಸುದ್ದಿ

ರಂಗಿತರಂಗ ಸಿನಿಮಾ ನೋಡುವಾಗ ಹೃದಯಾಘಾತ!

ರಂಗಿತರಂಗ ಸಿನಿಮಾ ವೀಕ್ಷಣೆ ವೇಳೆ ಚಿತ್ರ ಮಂದಿರದಲ್ಲಿ ಹೃದಯಾಘಾತವಾಗಿ ಸಾಫ್ಟ್ ವೇರ್ ಇಂಜಿನಿಯರ್ ಮೃತಪಟ್ಟಿದ್ದಾರೆ.

ಬೆಂಗಳೂರು: ಪರಭಾಷಾ ಚಿತ್ರಗಳ ಅಬ್ಬರದ ನಡುವೆ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿರುವ ರಂಗಿತರಂಗ ಸಿನಿಮಾ ವೀಕ್ಷಣೆ ವೇಳೆ ಚಿತ್ರ ಮಂದಿರದಲ್ಲಿ ಹೃದಯಾಘಾತವಾಗಿ ಸಾಫ್ಟ್ ವೇರ್ ಇಂಜಿನಿಯರ್ ಮೃತಪಟ್ಟಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ದಾವಣಗೆರೆ ಮೂಲದ ಸುಜಿತ್ ಹುಲಿಮನೆ ಮೃತರು. ಬನಶಂಕರಿ 3 ನೇ ಹಂತದಲ್ಲಿರುವ ಕಾಮಾಕ್ಯ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ ಜೆಪಿ ನಗರದಲ್ಲಿ ಪತ್ನಿ ಮೇಘನಾ ಜತೆ ವಾಸವಿದ್ದ ಸುಜಿತ್, ಪತ್ನಿ ಜತೆ ಕಾಮಾಕ್ಯ ಚಿತ್ರಮಂದಿರಕ್ಕೆ ರಂಗಿತರಂಗ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ನೋಡುತ್ತಿದ್ದಾಗಲೇ ಅವರು ಕುಳಿತ ಸ್ಥಿತಿಯಲ್ಲಿ ಯಾವುದೇ ಚಲನೆ ಇಲ್ಲದಿರುವುದನ್ನು ಗಮನಿಸಿದ ಪತ್ನಿ ಎಚ್ಚರಿಸಲು ಯತ್ನಿಸಿದ್ದಾರೆ. ಆದರೆ ಸುಜಿತ್ ರಿಂದ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಗಾಬರಿಗೊಂಡ ಅವರು ಚಿತ್ರಮಂದಿರದಲ್ಲಿದ್ದ ಇತರೆ ಪ್ರೇಕ್ಷಕರ ನೆರವಿನೊಂದಿಗೆ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ  ಸುಜಿತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಮರಣೋತ್ತರ ಪರೀಕ್ಷೆಗೆ ಶವವನ್ನು ರವಾನಿಸಿದ್ದು ತೀವ್ರ ಹೃದಯಾಘಾತದಿಂದ ಸುಜಿತ್ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT