ದಕ್ಷಿಣ ಭಾರತದ ನಟಿ ನಿತ್ಯಾ ಮೆನನ್ 
ಸಿನಿಮಾ ಸುದ್ದಿ

ದ್ವಿಭಾಷಾ ಚಲನಚಿತ್ರದಲ್ಲಿ ಸುದೀಪ್ ಒಟ್ಟಿಗೆ ನಿತ್ಯಾ ಮೆನನ್

ತಮಿಳು ನಿರ್ದೇಶಕ ಕೆ ಎಸ್ ರವಿಕುಮಾರ್ ಅವರ ಹೆಸರಿಡದ ಮುಂದಿನ ಚಿತ್ರಕ್ಕೆ ದಕ್ಷಿಣ ಭಾರತದ ನಟಿ ನಿತ್ಯಾ ಮೆನನ್ ಆಯ್ಕೆಯಾಗಿದ್ದಾರೆ. ನಾಯಕ ನಟನಾಗಿ ಸುದೀಪ್

ತಮಿಳು ನಿರ್ದೇಶಕ ಕೆ ಎಸ್ ರವಿಕುಮಾರ್ ಅವರ ಹೆಸರಿಡದ ಮುಂದಿನ ಚಿತ್ರಕ್ಕೆ ದಕ್ಷಿಣ ಭಾರತದ ನಟಿ ನಿತ್ಯಾ ಮೆನನ್ ಆಯ್ಕೆಯಾಗಿದ್ದಾರೆ. ನಾಯಕ ನಟನಾಗಿ ಸುದೀಪ್ ಅಭಿನಯಿಸಲಿದ್ದಾರೆ.

ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಸಿನೆಮಾದ ಬಗ್ಗೆ ಅಧಿಕೃತ ಹೇಳಿಕೆ ಇನ್ನೂ ಹೊರಬೀಳಬೇಕಿದೆ. ಮಲಯಾಳಮ್, ತೆಲುಗು, ತಮಿಳು ಮತ್ತು ಕನ್ನಡ ಭಾಷೆಯ ಪ್ರೇಕ್ಷಕರಿಗೆ ನಿತ್ಯಾ ಪರಿಚಿತ ನಟಿಯೇ!

ನಿತ್ಯಾ ಅವರ ಹಿಂದಿನ ಚಿತ್ರ 'ಓ ಕಾದ್ಹಲ್ ಕಣ್ಮಣಿ' ಯಶಸ್ಸು ಕಂಡ ಚಿತ್ರ. ಈಗ ಅವರು ತೆಲುಗು ಚಿತ್ರ 'ರುದ್ರಮಾದೇವಿ'ಯಲ್ಲಿ ಅನುಷ್ಕಾ ಶೆಟ್ಟಿ ಅವರೊಂದಿಗೆ ನಟಿಸಿದ್ದಾರೆ.

ಸುದೀಪ್ ಅವರು 'ಬಾಹುಬಲಿ' ಸಿನೆಮಾದಲ್ಲಿ ಅತಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡರೂ, ಎರಡನೇ ಭಾಗದಲ್ಲಿ ದೊಡ್ಡ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ರಾಜಮೌಳಿ ಅವರು ತಿಳಿಸಿದ್ದರು. 'ರನ್ನ' ತೆಲುಗು ರಿಮೇಕ್ ಕೂಡ ಸಾಧಾರಣ ಯಶಸ್ಸು ಕಂಡ ಸಿನೆಮಾ. ವಿಜಯ್ ಅವರ ತಮಿಳು ಸಿನೆಮಾ 'ಪುಲಿ'ಯಲ್ಲಿ ಕೂಡ ಸುದೀಪ್ ನಟಿಸಿದ್ದಾರೆ.

ಕನ್ನಡ ಮತ್ತು ಇತರ ಭಾಷೆಗಳಲ್ಲೂ ಅಪಾರ ಬೇಡಿಕೆಯಲ್ಲಿರುವ ಒಬ್ಬನೇ ಕನ್ನಡದ ನಟ ಸುದೀಪ್. ಸೂರಪ್ಪ ಬಾಬು ನಿರ್ಮಿಸುತ್ತಿರುವ ಈ ನೂತನ ಸಿನೆಮಾ ತಂಡವನ್ನು ಸುದೀಪ್ ಸೇರಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT