ಪತ್ರಿಕಾಗೋಷ್ಠಿ ನಡೆಸಿದ ಡಿಎಸ್-ಮ್ಯಾಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಪಿ. ದಯಾನಂದ 
ಸಿನಿಮಾ ಸುದ್ದಿ

ಲೋಕನಾಥ್, ಸಿಹಿಕಹಿ ಚಂದ್ರುಗೆ ಡಿಎಸ್-ಮ್ಯಾಕ್ಸ್ ಕಲಾಶ್ರೀ ಸೌತ್ ಇಂಡಿಯಾ ಪ್ರಶಸ್ತಿ

ಡಿಎಸ್-ಮ್ಯಾಕ್ಸ್ ಕಲಾಶ್ರೀ ಸೌತ್ ಇಂಡಿಯಾ ಪ್ರಶಸ್ತಿಗೆ ಈ ಬಾರಿ ಹಿರಿಯ ಕಲಾವಿದರಾದ ಸಿ.ಎಚ್. ಲೋಕನಾಥ್, ಸಿಹಿ ಕಹಿ ಚಂದ್ರು ಸಹಿತ 16 ಮಂದಿ ಕಲಾವಿದರನ್ನು...

ಬೆಂಗಳೂರು: ಡಿಎಸ್-ಮ್ಯಾಕ್ಸ್ ಕಲಾಶ್ರೀ ಸೌತ್ ಇಂಡಿಯಾ ಪ್ರಶಸ್ತಿಗೆ ಈ ಬಾರಿ ಹಿರಿಯ ಕಲಾವಿದರಾದ ಸಿ.ಎಚ್. ಲೋಕನಾಥ್, ಸಿಹಿ ಕಹಿ ಚಂದ್ರು ಸಹಿತ 16 ಮಂದಿ ಕಲಾವಿದರನ್ನು ಆಯ್ಕೆಯಾಗಿದ್ದು, ಇದೇ 19ರಂದು ಪ್ರಶಸ್ತಿ ಪ್ರದಾನ ಸಮಾರಂಭ ಚೌಡಯ್ಯ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಪಿ. ದಯಾನಂದ ತಿಳಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿ ಪ್ರದಾನ ಸಮಾರಂಭ ಸಂಜೆ 4 ಗಂಟೆಗೆ ನಡೆಯುವ ಸಮಾರಂಭದಲ್ಲಿ ಯೋಗ ಗುರು ವಚನಾನಂದ ಸ್ವಾಮೀಜಿ, ಸುಬ್ರಹ್ಮಣ್ಯಶಾಸ್ತ್ರಿ ಸಾನ್ನಿಧ್ಯ ವಹಿಸಲಿದ್ದಾರೆ. ವಾರ್ತಾ ಸಚಿವ ರೋಷನ್ ಬೇಗ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಸಭೆಯ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಬಿಬಿಎಂಪಿ ಮಾಜಿ ಸದಸ್ಯ ಬಿ. ಗೋವಿಂದ ರಾಜು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಕಳೆದ 9 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದವರನ್ನು ಗುರುತಿಸಿ  ಡಿ.ಎಸ್. ಮ್ಯಾಕ್ಸ್ ಕಲಾಶ್ರೀ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಬಾರಿ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ರಾಜ್ಯಗಳಲ್ಲಿರುವ ಕಲಾ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಅದಕ್ಕಾಗಿ ಡಿ.ಎಸ್. ಮ್ಯಾಕ್ಸ್ ಕಲಾಶ್ರೀ ಸೌತ್ ಇಂಡಿಯಾ ಪ್ರಶಸ್ತಿ ಎಂದು ಹೆಸರು ಇಡಲಾಗಿದೆ ಎಂದು ತಿಳಿಸಿದರು.

ನಮ್ಮ ಸಂಸ್ಥೆ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿ ವರ್ಷ ಸಾವಿರಾರು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದೆ. ವಿಕಲಚೇತನರಿಗೆ, ಎಚ್ಐವಿ ಪೀಡಿತರಿಗೆ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಪ್ರತಿವರ್ಷ ಸಂಸ್ಥೆಯ ವತಿಯಿಂದ ಮುರುಘಾಮಠದಲ್ಲಿ ನೂರಾರು ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡುವ ಚಿಂತನೆಯೂ ಇದೆ ಎಂದು ತಿಳಿಸಿದರು.

ಪ್ರಶಸ್ತಿಗೆ ಆಯ್ಕೆಯಾದವರು
ಸಿ.ಎಚ್. ಲೋಕನಾಥ್, ಡಾ. ರಾಜೇಶ್, ಪ್ರತಿಮಾ ದೇವಿ, ಸಂಗೀತ ನಿರ್ದೇಶಕ ರಾಜನ್ ನಾಗೇಂದ್ರ, ನಿರ್ದೇಶಕರಾದ ಎಸ್. ಕೆ. ಭಗವಾನ್, ಸಾಯಿ ಪ್ರಕಾಶ್, ಸಿಹಿ ಕಹಿ ಚಂದ್ರು, ಬೆಂಗಳೂರು ನಾಗೇಶ್, ನಟಿ ರೇಖಾ ರಾವ್, ತಮಿಳು ಚಿತ್ರರಂಗದ ರಾಧಾ ರವಿ , ಅಂಬಿಕಾ, ತೆಲುಗು ಚಿತ್ರರಂಗದ ಸುಮನ್ ತಲವರ್ ,ಜಯಪ್ರಕಾಶ್ ರೆಡ್ಡಿ, ಸುರೇಶ್ ಕೊಂಡೇಟಿ, ಮಲಯಾಳ ಚಿತ್ರರಂಗದ ಎ. ರಾಘವನ್, ಸೀಮಾ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT