ಖ್ಯಾತ ನಟ, ವಸತಿ ಸಚಿವ ಅಂಬರೀಶ್ 
ಸಿನಿಮಾ ಸುದ್ದಿ

ಅಂಬಿ ಆಸ್ಪತ್ರೆಗೆ ದಾಖಲು

ಖ್ಯಾತ ನಟ, ವಸತಿ ಸಚಿವ ಅಂಬರೀಶ್ ಇಂದು ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಿಲ್ಲ...

ಬೆಂಗಳೂರು: ಖ್ಯಾತ ನಟ, ವಸತಿ ಸಚಿವ ಅಂಬರೀಶ್ ಇಂದು ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಆದರೆ ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಅವರು ಮನೆಗೆ ತೆರಳಲಿದ್ದಾರೆ ಎಂದು ಕೂಡ ಮೂಲಗಳು ತಿಳಿಸಿವೆ.

ಇತ್ತೀಚೆಗೆ ವಾಣಿಜ್ಯ ಮಂಡಳಿಯಲ್ಲಿ ನಿರ್ಮಾಪಕರ ಧರಣಿಯನ್ನು ಅಂಬರೀಶ್ ಅವರು ಬಗೆಹರಿಸಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ 'ಭಿಕ್ಷುಕರಿಗೆ ಆಯ್ಕೆಯಿಲ್ಲ' ಎಂದು ವರದಿಗಾರರಿಗೆ ನೀಡಿದ್ದ ಹೇಳಿಕೆ ಭಾರಿ ವಿವಾದವನ್ನು ಸೃಷ್ಟಿಸಿ, ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸಬೇಕು ಎಂದು ನಿರ್ಮಾಪಕರು ನಿನ್ನೆ ಪಟ್ಟು ಹಿಡಿದಿದ್ದರು.

ಕಳೆದ ವರ್ಷದ ಫೆಬ್ರವರಿಯಲ್ಲಿ ಅಂಬರೀಶ್ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಅವರ ಅಪಾರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ ಸಚಿವರು ಸಂಪೂರ್ಣ ಗುಣಮುಖರಾಗಿ  ಹೊರಬಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT