ಸುಮನಾ ಕಿತ್ತೂರು 
ಸಿನಿಮಾ ಸುದ್ದಿ

ಕಿರಗೂರಿನ ಗಯ್ಯಾಳಿಗಳಿಗೆ ಭರದ ಸಿದ್ಧತೆ

ಕನ್ನಡದ ಖ್ಯಾತ ಲೇಖಕ ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆ 'ಕಿರಗೂರಿನ ಗಯ್ಯಾಳಿಗಳು' ಆಧಾರಿತ ಸಿನೆಮಾ ಮಾಡಲು ನಿರ್ದೇಶಕಿ

ಬೆಂಗಳೂರು: ಕನ್ನಡದ ಖ್ಯಾತ ಲೇಖಕ ಕೆ ಪಿ ಪೂರ್ಣಚಂದ್ರ  ತೇಜಸ್ವಿ ಅವರ ಕಥೆ 'ಕಿರಗೂರಿನ ಗಯ್ಯಾಳಿಗಳು' ಆಧಾರಿತ ಸಿನೆಮಾ ಮಾಡಲು ನಿರ್ದೇಶಕಿ ಸುಮನಾ ಕಿತ್ತೂರು ಭರದ ಸಿದ್ಧತೆ ನಡೆಸಿದ್ದಾರೆ. ಪಾತ್ರವರ್ಗದ ಶೋಧನೆಯಲ್ಲಿರುವ ಸುಮನಾ ರಂಗಭೂಮಿ ನಟರ ಆಡಿಶನ್ ನಲ್ಲಿ ನಿರತರಾಗಿದ್ದಾರೆ.

"ಇದು ಗಂಭೀರವಾದ ಕಥೆ ಆಗಿರುವುದರಿಂದ ಹಾಗು ಇದನ್ನು ಸಾಕಷ್ಟು ಜನ ಓದಿರುವುದರಿಂದ ಪಾತ್ರ ವರ್ಗದ ಆಯ್ಕೆ ಅತಿ ಮುಖ್ಯ. ದಾನಮ್ಮನ ಪಾತ್ರ ಮಾಡಲು ಈಗಾಗಲೇ ಶ್ವೇತಾ ಶ್ರೀವಾತ್ಸವ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರ ಸುತ್ತ ಉಳಿದ ಪೋಷಕ ಪಾತ್ರವರ್ಗವನ್ನು ಕಟ್ಟಬೇಕಿದೆ" ಎನ್ನುತ್ತಾರೆ ನಿರ್ದೇಶಕಿ.

"ಕಿರಗೂರಿನ ಗಯ್ಯಾಳಿಗಳು ಕಥೆಯನ್ನು ಸಿನೆಮಾ ಮಾಡಬೇಕು ಎಂದುಕೊಡಾಕ್ಷಣ ನನ್ನ ಮನಸ್ಸಿನಲ್ಲಿದ್ದು ಶ್ವೇತಾ. ಅವರು ಹೆಚ್ಚು ಸಿನೆಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಆದುದರಿಂದ ಈ ಪಾತ್ರದಲ್ಲಿ ಅವರು ತಾಜಾವಾಗಿ ಕಾಣುತ್ತಾರೆ. ನಾನು ಅವರನ್ನು ತಲುಪಿದಾಗ ಅವರು ಕೇಳಿದ್ದು ನನಗೆ ದಾನಮ್ಮನ ಪಾತ್ರ ಕೊಡುತ್ತೀರಾ ಎಂದು" ಎನ್ನುತ್ತಾರೆ ಸುಮನಾ.

ಯೋಗೇಶ್ ಕೂಡ ಒಂದು ಪಾತ್ರ ನಿರ್ವಹಿಸಲಿದ್ದು, ಸ್ಕ್ರಿಪ್ಟ್ ಮತ್ತು ಸಂಭಾಷಣೆಯ ಸಹಾಯಕ್ಕಾಗಿ ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ಅವರ ಸಹಾಯ ಕೋರಿದ್ದೇನೆ ಎನ್ನುತ್ತಾರೆ ಸುಮನಾ.    

ಮನೋಹರ್ ಜೋಷಿ ಕ್ಯಾಮರಾ ಮ್ಯಾನ್ ಆಗಿ ಆಯ್ಕೆಯಾಗಿದ್ದು, ಸಂಗೀತಕಾರ ಪೂರ್ಣಚಂದ್ರ ತೇಜಸ್ವಿ ಹಾಡುಗಳನ್ನು ಕಂಪೋಸ್ ಮಾಡಲಿದ್ದಾರೆ. ಹಡಪ್ಪ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT