ಪಿಕೆ 
ಸಿನಿಮಾ ಸುದ್ದಿ

ಪಿಕೆ: ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕೆ ಕ್ಷಮೆಯಾಚಿಸಿದ ಅಮೀರ್

ಪಿಕೆ ಸಿನೆಮಾದ ನಿರ್ದೇಶಕ ನಿರ್ಮಾಪಕ ನಟ ಯಾರಿಗೂ ಯಾರ ಭಾವನೆಯನ್ನು ನೋಯಿಸುವ ಉದ್ದೇಶ ಇರಲಿಲ್ಲ ಎಂದು ಬಾಲಿವುಡ್ ನಟ ಅಮೀರ್ ಖಾನ್

ಪಿಕೆ ಸಿನೆಮಾದ ನಿರ್ದೇಶಕ ನಿರ್ಮಾಪಕ ನಟ ಯಾರಿಗೂ ಯಾರ ಭಾವನೆಯನ್ನು ನೋಯಿಸುವ ಉದ್ದೇಶ ಇರಲಿಲ್ಲ ಎಂದು ಬಾಲಿವುಡ್ ನಟ ಅಮೀರ್ ಖಾನ್ ನೆನ್ನೆ ಕ್ಷಮೆಯಾಚಿಸಿದ್ದಾರೆ.

ಪಿಕೆ ಸಿನೆಮಾದ ಡಿವಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಮೀರ್ "ಸಿನೆಮಾವನ್ನು ಬಹುತೇಕ ಮಂದಿ ಇಷ್ಟಪಟ್ಟಿದ್ದಾರೆ. ಈ ಸಿನೆಮಾ ಇಂದ ಒಬ್ಬನಿಗೆ ನೋವಾಗಿದ್ದರೆ ಕೂಡ ಅದಕ್ಕೆ ನನಗೆ ಬೇಸರವಿದೆ. ಏಕೆಂದರೆ ಅದು ನಮ್ಮ ಉದ್ದೇಶವಾಗಿರಲಿಲ್ಲ. ಇದು ಪ್ರಮುಖ ವಿಷಯ ಆದುದರಿಂದ ಹೇಳುತ್ತಿದ್ದೇನೆ. ಜನರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ" ಎಂದಿದ್ದಾರೆ.

ಬೇರೆ ಗ್ರಹದಿಂದ ಅನ್ಯಜೀವಿಯಾಗಿ ಬರುವ ಅಮೀರ್ ಖಾನ್, ದೇವರನ್ನು ಹುಡುಕುವ ನೆಪದಲ್ಲಿ ಹಲವು ಧರ್ಮಗಳ ರೀತಿ ರಿವಾಜುಗಳನ್ನು ಮತ್ತು ದೇವಮಾನವರನ್ನು ಸಿನೆಮಾದಲ್ಲಿ ಕುಚೋದ್ಯ ಮಾಡುತ್ತಾರೆ. ಇದರಿಂದ ಕುಪಿತಗೊಂಡಿದ್ದ ಹಲವಾರು ಹಿಂದು ಸಂಘಟನೆಗಳು ಪ್ರತಿಭಟಿಸಿದ್ದಲ್ಲದೆ, ಸಿನೆಮಾದ ನಿಷೇಧಕ್ಕೆ ಆಗ್ರಹಿಸಿದ್ದರು. ಹೀಗಿದ್ದು ಸಿನೆಮಾ ಗಲ್ಲಾಪೆಟ್ಟಿಯಲ್ಲಿ ಹಣ ದೋಚಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT