ನಟ ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ ಜೊತೆ ಸಿನೆಮಾ ಮಾಡಲಿರುವ ಬಿ ಎಂ ಗಿರಿರಾಜ್

ಮೈತ್ರಿ ಗೆಲುವಿನ ಖುಷಿಯಲ್ಲಿರುವ ಬಿ ಎಂ ಗಿರಿರಾಜ್ ಅವರಿಗೆ ಮತ್ತೊಂದು ಸಂತಸದ ಸುದ್ದಿ. 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಚಲನಚಿತ್ರದ ಮುಕ್ತಾಯದ

ಬೆಂಗಳೂರು: ಮೈತ್ರಿ ಗೆಲುವಿನ ಖುಷಿಯಲ್ಲಿರುವ ಬಿ ಎಂ ಗಿರಿರಾಜ್ ಅವರಿಗೆ ಮತ್ತೊಂದು ಸಂತಸದ ಸುದ್ದಿ. 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಚಲನಚಿತ್ರದ ಮುಕ್ತಾಯದ ನಂತರ ನಟ ರಕ್ಷಿತ್ ಶೆಟ್ಟಿ ನಿರ್ದೇಶಕ ಬಿ ಎಂ ಗಿರಿರಾಜ್ ಅವರ ಚಲನಚಿತ್ರದಲ್ಲಿ ನಟಿಸಲಿದ್ದಾರೆ.

ಮೇನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿರುವ ಸಿನೆಮಾ ಬಗ್ಗೆ ಮಾತನಾಡಿದ ನಟ "ಈ ಚಲನಚಿತ್ರವನ್ನು ನಿರ್ಮಿಸುತ್ತಿರುವ ಕೆ ಮಂಜು ಅವರಿಗೆ ನಾನು ಭರವಸೆ ನೀಡಿದ್ದೆ. ಅಲ್ಲದೆ ಇದರಲ್ಲಿ ಗಹನವಾದ ವಿಷಯವಿದೆ ಮತ್ತು ಪ್ರತಿ ಸಿನೆಮಾಗೂ ನ್ಯಾಯ ಒದಗಿಸುವ ಗಿರಿರಾಜ್ ಮೇಲೆ ವಿಶ್ವಾಸವಿದೆ. ಸಿನೆಮಾದ ವಿಷಯ ಗೊತ್ತಾಗಿದೆ ಇನ್ನು ನಾಲ್ಕೈದು ದಿನಗಳಲ್ಲಿ ಸಿನೆಮಾದ ಸಂಪೂರ್ಣ ಸಂಪೂರ್ಣ ಕಥೆ ಕೇಳಿಸಿಕೊಳ್ಳಲಿದ್ದೇನೆ" ಎನ್ನುತ್ತಾರೆ ರಕ್ಷಿತ್ ಶೆಟ್ಟಿ.

ಸದ್ಯಕ್ಕೆ ಮಲಯಾಳಮ್ ಭಾಷೆಯಲ್ಲಿ ಮೈತ್ರಿ ಚಿತ್ರೀಕರಣದಲ್ಲಿ ನಿರತರಾಗಿರುವ ಗಿರಿರಾಜ್, ಜೊತೆಜೊತೆಗೆ ರಕ್ಷಿತ್ ಶೆಟ್ಟಿ ಅವರ ಈ ಸಿನೆಮಾ ಸ್ಕ್ರಿಪ್ಟ್ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. "'ಡೆಡ್ ಆರ್ ಅಲೈವ್' ಎಂಬ ತಾತ್ಕಾಲಿಕ ಶೀರ್ಷಿಕೆ ನೀಡಿದ್ದೇವೆ. ಮಲಯಾಳಂ ಮೈತ್ರಿ ಚಿತ್ರೀಕರಣ ಮುಗಿದ ನಂತರ, ಈ ಹೊಸ ಸ್ಕ್ರಿಪ್ಟ್ ಹಿಡಿದು ಉಳಿದ ತಾರಾಗಣವನ್ನು ಅಂತಿಮಗೊಳಿಸುತ್ತೇನೆ" ಎನ್ನುತ್ತಾರೆ ಗಿರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT