ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಟ ಪುನೀತ್ 
ಸಿನಿಮಾ ಸುದ್ದಿ

'ಮೈತ್ರಿ' ನೋಡಲು ಆಸಕ್ತಿ ತೋರಿದ ಮುಖ್ಯಮಂತ್ರಿ

ಬಿಡುಗಡೆಯಾಗಿ ೪೦ ದಿನ ಕಳೆದರೂ ನಟ ಪುನೀತ್ ರಾಜಕುಮಾರ್ ಮತ್ತು ಮೋಹನ್ ಲಾಲ್ ಅಭಿನಯದ 'ಮೈತ್ರಿ' ಚಲನಚಿತ್ರ ಇನ್ನೂ ಚಾಲ್ತಿಯಲ್ಲಿದೆ.

ಬೆಂಗಳೂರು: ಬಿಡುಗಡೆಯಾಗಿ ೪೦ ದಿನ ಕಳೆದರೂ ನಟ ಪುನೀತ್ ರಾಜಕುಮಾರ್ ಮತ್ತು ಮೋಹನ್ ಲಾಲ್ ಅಭಿನಯದ 'ಮೈತ್ರಿ' ಚಲನಚಿತ್ರ ಇನ್ನೂ ಚಾಲ್ತಿಯಲ್ಲಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಿನೆಮಾ ನೋಡುವ ಆಸಕ್ತಿ ವ್ಯಕ್ತಪಡಿಸಿದ್ದಾರೆ.

ಅತ್ಯುತ್ತಮ ಸಿನೆಮಾಗಳನ್ನು ನೋಡುವ ಹವ್ಯಾಸ ಇಟ್ಟುಕೊಂಡಿರುವ ಮುಖ್ಯಮಂತ್ರಿ ಅವರಿಗೆ 'ಮೈತ್ರಿ' ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಲ್ಲಿರುವ ಸಂದೇಶದ ಬಗ್ಗೆ ಸಿದ್ದರಾಮಯ್ಯನವರಿಗೆ ತಿಳಿಸಿದ್ದಾರೆ. ಕುಣಿಗಲ್ ನಲ್ಲಿ ನಡೆದ ಒಂದು ಸಮಾರಂಭದಲ್ಲಿ ಪುನೀತ್ ರಾಜಕುಮಾರ್ ಜೊತೆ ವೇದಿಕೆಯಲ್ಲಿದ್ದ ಸಿದ್ದರಾಮಯ್ಯ 'ಮೈತ್ರಿ' ಸಿನೆಮಾ ನೋಡುವ ಆಸಕ್ತಿಯನ್ನು ನಿರ್ಮಾಪಕ ರಾಜಕುಮಾರ್ ಅವರಿಗೆ ಹೇಳಿಕೊಂಡಿದ್ದಾರೆ.

"ಹಲವಾರು ಅಧಿಕಾರಿಗಳು ಸಿನೆಮಾ ನೋಡಿ ಇಷ್ಟ ಪಟ್ಟಿದ್ದಾರೆ. ಕೆಂಪಯ್ಯ ಐಪಿಸ್ ಅವರು ಈ ಸಿನೆಮಾ ನೋಡಿ ಸಂತಸಪಟ್ಟು ಮುಖ್ಯಮಂತ್ರಿಗಳು ಈ ಸಿನೆಮಾ ನೋಡಲೇಬೇಕು ಎಂದಿದ್ದರು. ಅವರು ಮೈತ್ರಿಯ ವಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ, ಶೀಘ್ರದಲ್ಲೇ ನಾವು ಮುಖ್ಯಮಂತ್ರಿ ಯಾವಾಗ ಸಿನೆಮಾ ನೋಡಲು ಬಿಡುವಾಗಿರುತ್ತಾರೆ " ಎಂಬುದನ್ನು ತಿಳಿದುಕೊಳ್ಳುತ್ತೇವೆ ಎಂಇದ್ದಾರೆ ರಾಜಕುಮಾರ್.

ಈ ಮಧ್ಯೆ ಮೈತ್ರಿ ಸಿನೆಮಾ ನೋಡಿ ಮೆಚ್ಚಿರುವ ಶಿಕ್ಷಣ ಮಂತ್ರಿ ಕಿಮ್ಮನೆ ರತ್ನಾಕರ್ ಶಾಲೆಗಳಿಗೆ ಪತ್ರ ಬರೆದು ಈ ಸಿನೆಮಾವನ್ನು ಮಕ್ಕಳಿಗೆ ತೋರಿಸುವಂತೆ ಸೂಚಿಸಿದ್ದಾರೆ. "ಈಗ ಬೇಸಿಗೆ ರಜೆ ಪ್ರಾರಂಭವಾಗಿದ್ದು, ಮಕ್ಕಳಿಗಾಗಿ ಪ್ರದರ್ಶನಗಳನ್ನು ಏರ್ಪಡಿಸಲಿದ್ದೇವೆ" ಎನ್ನುತ್ತಾರೆ ರಾಜಕುಮಾರ್.

ಕನ್ನಡ 'ಮೈತ್ರಿ' ನಿರ್ದೇಶಿಸಿದ ಬಿ ಎಂ ಗಿರಿರಾಜ್ ಅವರೇ ಮಲಯಾಳಮ್ ನಲ್ಲೂ  ಚಿತ್ರೀಕರಣ ಮುಗಿಸಿದ್ದಾರೆ. ಈಗ ಸಿನೆಮಾ ಸೆನ್ಸಾರ್ ಮಂಡಲಿ ಮುಂದಿದ್ದು, "ಏಪ್ರಿಲ್ ಮೂರನೆ ವಾರದಲ್ಲಿ ಮಲಯಾಳಮ್ ಅವತರಿಣಿಕೆ ಬಿಡುಗಡೆ ಮಾಡಲಿದ್ದೇವೆ. ತೆಲುಗು ರಿಮೇಕ್ ನಲ್ಲಿ ನಾಗಾರ್ಜುನ ಅವರೊಂದಿಗೆ ಕೂಡ ಕೆಲಸ ಮಾಡುವ ಭರವಸೆ ಇದೆ ಎನ್ನುತ್ತಾರೆ" ನಿರ್ಮಾಪಕ ರಾಜಕುಮಾರ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT