ನಾಟಿ ಕೋಳಿ ಚಿತ್ರದ ನಟಿ ರಾಗಿಣಿ ದ್ವಿವೇದಿ 
ಸಿನಿಮಾ ಸುದ್ದಿ

'ನಾಟಿ ಕೋಳಿ' ಸೆಟ್ಟಿನಲ್ಲಿ ಗಲಾಟೆ; ಚಿತ್ರೀಕರಣ ಮುಂದೂಡಿಕೆ

ಶ್ರೀನಿವಾಸ ರಾಜು ನಿರ್ದೇಶನದ 'ನಾಟಿ ಕೋಳಿ' ಚಲನಚಿತ್ರದ ಫೋಟೋಶೂಟ್ ವೇಳೆ ನಡೆದ ಗಲಾಟೆಯಿಂದ ಚಲನಚಿತ್ರದ ಚಿತ್ರೀಕರಣ

ಬೆಂಗಳೂರು: ಶ್ರೀನಿವಾಸ ರಾಜು ನಿರ್ದೇಶನದ 'ನಾಟಿ ಕೋಳಿ' ಚಲನಚಿತ್ರದ ಫೋಟೋಶೂಟ್ ವೇಳೆ ನಡೆದ ಗಲಾಟೆಯಿಂದ ಚಲನಚಿತ್ರದ ಚಿತ್ರೀಕರಣ ಮುಂದೂಡಲಾಗಿದೆ. ವಿಲ್ಸನ್ ಗಾರ್ಡನ್ನಿನ ಶೀತಲ್ ಜೈನ್ ಅವರ ಸ್ಟುಡಿಯೋಗೆ ಏಕಾಏಕಿ ನುಗ್ಗಿದ ಹುಲಿ ನಿರ್ಮಾಪಕ ಶಿವಪ್ರಕಾಶ್, ನಿರ್ಮಾಪಕ ವೆಂಕಟ್ ಮತ್ತು ಶ್ರೀನಿವಾಸ ರಾಜು ಅವರ ಮೇಲೆ ಹಲ್ಲೆ ಮಾಡಿದರು ಎಂದು ರಾಜು ಆರೋಪಿಸಿದ್ದಾರೆ.

ರಾಗಿಣಿ ಅವರ ಪ್ರಿಯತಮ ಎಂದು ಹೇಳಿಕೊಂಡು ಸ್ಟುಡಿಯೋ ಒಳಗೆ ನುಗ್ಗಿದ ಶಿವಪ್ರಕಾಶ್ ಹಲ್ಲೆ ನಡೆಸಿದ್ದಾರೆ ಎಂದು ರಾಜು ಆರೋಪಿಸಿದ್ದಾರೆ. ಈ ಘಟನೆ ನಡೆದಾಗ ರಾಗಿಣಿ ಅವರು ವಸ್ತ್ರಕೋಣೆಯಲ್ಲಿದ್ದರು ಎಂದು ತಿಳಿದುಬಂದಿದೆ. "ನನ್ನನು ಬೆದರಿಸಿದ ಶಿವಪ್ರಕಾಶ್ ಕೊಲೆ ಬೆದರಿಕೆಯನ್ನು ಹಾಕಿದರು. ವೆಂಕಟ್ ಮಧ್ಯ ಬಂದಾಗ ಅವರ ಮೇಲೂ ಹಲ್ಲೆ ನಡೆಸಿದರು. ಫೋಟೋ ಶೂಟ್ ಅನ್ನು ಮಧ್ಯದಲ್ಲೇ ನಿಲ್ಲಿಸಬೇಕಾಗಿ ಬಂತು" ಎಂದು ರಾಜು ತಿಳಿಸಿದ್ದಾರೆ. ಇದರಿಂದು ಸುಮಾರು ೫ ಲಕ್ಷ ನಷ್ಟವಾಗಿದೆ ಎಂದಿದ್ದಾರೆ ರಾಜು. ಶಿವಪ್ರಕಾಶ್ ಯಾರು ಎಂದೇ ನನಗೆ ತಿಳಿದಿಲ್ಲ ಎಂದಿದ್ದಾರೆ ರಾಗಿಣಿ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿಯಲ್ಲಿ ನಾಟಿ ಕೋಳಿ ಚಿತ್ರದ ನಿರ್ಮಾಪಕ ವೆಂಕಟ್ ದೂರು ಸಲ್ಲಿಸಿದ್ದಾರೆ ಎಂದು ರಾಜು ತಿಳಿಸಿದ್ದಾರೆ. "ಈ ಮೊದಲು ವೆಂಕಟ್ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲು ನಿಶ್ಚಯಿಸಿದ್ದರು. ಆದರೆ ಅದು ಅವರ ಸಮಯವನ್ನು ಹಾಳುಮಾಡುವುದರಿಂದ ನಾನೇ ಅವರಿಗೆ ತಡೆದು ಸಲಹೆ ನಿಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿ ಸೋಮವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ" ಎಂದು ರಾಜು ತಿಳಿಸಿದ್ದಾರೆ.

ಚಲನಚಿತ್ರದ ಚಿತ್ರೀಕರಣವನ್ನು ಒಂದು ವಾರದವರೆಗೆ ಮೂಂದೂಡಲಾಗಿದೆ. ಈ ಪ್ರಕರಣದಲ್ಲಿ ನನ್ನದೇನು ಪಾತ್ರವಿಲ್ಲ. ನನ್ನನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ರಾಗಿಣಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT