ಬಾಹುಬಲಿ ಚಿತ್ರದಲ್ಲಿ ಕಿಚ್ಚಾ ಸುದೀಪ್ ಅವತಾರ 
ಸಿನಿಮಾ ಸುದ್ದಿ

ಬಾಹುಬಲಿ ಚಿತ್ರದಲ್ಲಿನ ಕಿಚ್ಚ ಸುದೀಪ್‌ರ ಫಸ್ಟ್ ಲುಕ್ ರಿಲೀಸ್!

ತೆಲುಗಿನ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿಯಲ್ಲಿ ಕನ್ನಡದ ಕಿಚ್ಚ ಸುದೀಪ್ ಅಭಿನಯಿಸಿರುವುದು ಗೊತ್ತಿರುವ ವಿಚಾರವೇ...

ತೆಲುಗಿನ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿಯಲ್ಲಿ ಕನ್ನಡದ ಕಿಚ್ಚ ಸುದೀಪ್ ಅಭಿನಯಿಸಿರುವುದು ಗೊತ್ತಿರುವ ವಿಚಾರವೇ. ಇದೀಗ ಚಿತ್ರದಲ್ಲಿ ಸುದೀಪ್ ಯಾವ ಪಾತ್ರ ಪೋಷಣೆ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ರಾಜಮೌಳಿ ಟ್ವೀಟ್ ಮಾಡಿದ್ದಾರೆ.

ಬಾಹುಬಲಿ ಚಿತ್ರದಲ್ಲಿನ ಸುದೀಪ್ ಅವರ ಫಸ್ಟ ಲುಕ್ ರಿಲೀಸ್ ಆಗಿದ್ದು, ಚಿತ್ರದಲ್ಲಿ ಪರ್ಷಿಯಾದ ಯೋಧ ಅಸ್ಲಂ ಖಾನ್ ಪಾತ್ರವನ್ನು ಮಾಡುತ್ತಿದ್ದಾರೆ. ರಾಜಮೌಳಿ ರಿಲೀಸ್ ಮಾಡಿರುವ ಫಸ್ಟ್ ಲುಕ್ ನಲ್ಲಿ ಸುದೀಪ್ ಕೈಯಲ್ಲೊಂದು ದೊಡ್ಡ ಕತ್ತಿ ಹಿಡಿಯುತ್ತಾ, ಸಿಟ್ಟಿನಿಂದ ನೋಡುತ್ತಿರುವ ಚಿತ್ರ ಅಭಿಮಾನಿಗಳಲ್ಲಿ ಕಿಚ್ಚು ಹೆಚ್ಚಿಸಿದೆ.

ರಾಜಮೌಳಿ ನಿರ್ದೇಶನದ ಈಗ ಚಿತ್ರದಲ್ಲಿ ನಟಿಸಿದ್ದ ಸುದೀಪ್ ಮತ್ತೆ ಬಾಹುಬಲಿಯಲ್ಲಿ ನಟಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜಮೌಳಿ ಸುದೀಪ್ ಗೆ ಧನ್ಯವಾದ ಹೇಳಿದ್ದು, ನನ್ನ ಮನವಿ ಮೇರೆಗೆ ಸುದೀಪ್ ಅವರು ಬಾಹುಬಲಿಯಲ್ಲಿ ಚಿತ್ರದಲ್ಲಿ ಚಿಕ್ಕ ಪಾತ್ರವೊಂದನ್ನು ಪೋಷಿಸಿದ್ದಾರೆ ಎಂದಿದ್ದಾರೆ. ಇನ್ನೇನ್ನು ಚಿತ್ರ ಜುಲೈನಲ್ಲಿ ತೆರೆಗೆ ಅಪ್ಪಳಿಸಲಿದೆ.

ಕಿಚ್ಚ ಸುದೀಪರ ಮುಂದಿನ ಯೋಜನೆ
ಸುದೀಪ್ ನಟಿಸಿರುವ ಕನ್ನಡದ ಬಹುನಿರೀಕ್ಷಿತ ಚಿತ್ರ ರನ್ನ ಇನ್ನೇನು ತೆರೆಗೆ ಅಪ್ಪಳಿಸಬೇಕಿದೆ. ಸೆನ್ಸಾರ್ ಆದ ತಕ್ಷಣ ಚಿತ್ರದ ದಿನಾಂಕವನ್ನು ಘೋಷಿಸುವುದಾಗಿ ಸುದೀಪ್ ಹೇಳಿದ್ದಾರೆ. ಈ ನಡುವೆ ರನ್ನ ನಂತರ ಕಿಚ್ಚ ಸುದೀಪ್ ಎರಡು ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ. ಮೊದಲಿಗೆ ಬಹುಬಾಷಾ ನಿರ್ದೇಶಕ ಕೆ.ಎಸ್ ರವಿಕುಮಾರ್ ನಿರ್ದೇಶನದ ಚಿತ್ರವೊಂದರದಲ್ಲಿ ನಟಿಸಲಿದ್ದಾರೆ. ಇದರ ಜತೆಗೆ ಎಸ್ಆರ್ವಿ ಪ್ರೋಡೆಕ್ಷನ್ ನಲ್ಲಿ ನಟಿಸಲಿದ್ದಾರೆ. ಈ ಎರಡು ಚಿತ್ರಗಳು ಜೂನ್ ನಲ್ಲಿ ಸೆಟ್ಟೇರುವ ಸಾಧ್ಯತೆ ಇದೇ ಎಂದಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT