ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ 
ಸಿನಿಮಾ ಸುದ್ದಿ

ತಮ್ಮ ಸಂಗೀತ ದುರ್ಬಳಕೆಯಾಗದಂತೆ ತಡೆಯಲು ಪೊಲೀಸರಿಗೆ ಇಳಯರಾಜ ಮನವಿ

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಮದ್ರಾಸ್ ಹೈಕೋರ್ಟ್ ಸೂಚಿಸಿರುವಂತೆ ತಾವು ನಿರ್ದೇಶಿಸಿದ ಸಂಗೀತವನ್ನು ಒಪ್ಪಿಗೆ ಇಲ್ಲದೆ ಬಳಸುತ್ತಿರುವವರ ವಿರುದ್ಧ ಕ್ರಮ

ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಮದ್ರಾಸ್ ಹೈಕೋರ್ಟ್ ಸೂಚಿಸಿರುವಂತೆ ತಾವು ನಿರ್ದೇಶಿಸಿದ ಸಂಗೀತವನ್ನು ಒಪ್ಪಿಗೆ ಇಲ್ಲದೆ ಬಳಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

ಶನಿವಾರ ಅವರು ನೀಡಿದ ಪತ್ರಿಕಾ ಹೇಳಿಕೆಯಲ್ಲಿ ಜನಪ್ರಿಯ ಎಫ್ ಎಂ ರೇಡಿಯೋ ಮಿರ್ಚಿಯ ಜನಪ್ರಿಯ ತಡರಾತ್ರಿ ಕಾರ್ಯಕ್ರಮ 'ನೀಂಗಾ, ನಾ, ರಾಜಾ ಸರ್' ನಿಲ್ಲಿಸುವಂತೆಯೂ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

"ನಾನು ಸಂಗೀತ ನೀಡಿರುವ ಹಾಡುಗಳನ್ನು ನನ್ನ ಅನುಮತಿ ಇಲ್ಲದೆ ನಕಲು ಮಾಡಿ ದುಡ್ಡು ಮಾಡುತ್ತಿರುವುದನ್ನು ಅಭಿಮಾನಿಗಳು ನನ್ನ ಗಮನಕ್ಕೆ ತಂಇದಿದ್ದಾರೆ. ಆದುರಿಂದ ಈ ವರ್ಷ ಮಾರ್ಚ್ ನಲ್ಲಿ ಮದ್ರಾಸ್ ಹೈಕೋರ್ಟ್ ಸೂಚಿಸಿರುವಂತೆ ತಾವು ನಿರ್ದೇಶಿಸಿದ ಸಂಗೀತವನ್ನು ಒಪ್ಪಿಗೆ ಇಲ್ಲದೆ ಬಳಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾ ನಿರ್ದೇಶಕ, ಚೆನ್ನೈ ಪೊಲೀಸ್ ಕಮಿಷನರ್, ಮತ್ತು ಪೊಲೀಸ್ ಸುಪರಿಂಟೆಂಡೆಂಟ್ ಅವರುಗಳಿಗೆ ಅರ್ಜಿ ಸಲ್ಲಿಸಿದ್ದೇನೆ" ಎಂದು ಕೂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಮ್ಮ ಬರವಣಿಗೆಯಲ್ಲಿ ಅನುಮತಿ ಪಡೆಯದೆ ಯಾವುದೇ ಲಾಭಕ್ಕೆ ಅವರ ಹೆಸರು ಅಥವಾ ಫೋಟೊ ಕೂಡ ಬಳಸಬಾರದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್