ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸ್ಟುಡಿಯೋದಲ್ಲಿ ಮುಂಗಾರು ಮಳೆ-೨ ಚಿತ್ರತಂಡ 
ಸಿನಿಮಾ ಸುದ್ದಿ

ಮುಂಗಾರು ಮಳೆ -೨: ಆರು ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ

ಮುಂಗಾರು ಮಳೆ ಈಗಾಗಲೇ ಅಪ್ಪಳಿಸಿರುವುದರಿಂದ ಮುಂಗಾರು ಮಳೆ -೨ ಪ್ರಾರಂಭಿಸುವುದಕ್ಕೆ ಇದಕ್ಕಿಂತಲೂ ಉತ್ತಮ ಸಮಯವುಂಟೆ!

ಬೆಂಗಳೂರು: ಮುಂಗಾರು ಮಳೆ ಈಗಾಗಲೇ ಅಪ್ಪಳಿಸಿರುವುದರಿಂದ ಮುಂಗಾರು ಮಳೆ -೨ ಪ್ರಾರಂಭಿಸುವುದಕ್ಕೆ ಇದಕ್ಕಿಂತಲೂ ಉತ್ತಮ ಸಮಯವುಂಟೆ! ಚಲನಚಿತ್ರಕ್ಕೆ ಹಾಡುಗಳ ರೆಕಾರ್ಡ್ ಕಾರ್ಯಕ್ರಮದ ಮೂಲಕ ಶಶಾಂಕ್ ಚಲನಚಿತ್ರಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಚಲನಚಿತ್ರದ ಸಂಗೀತಕ್ಕೆ ಅರ್ಜುನ್ ಜನ್ಯ ಅವರನ್ನು ತಮ್ಮ ತಂಡಕ್ಕೆ ನಿರ್ದೇಶಕರು ಸೇರಿಸಿಕೊಂಡಿದ್ದಾರೆ. ನಿರ್ಮಾಪಕ ಜಿ ಗಂಗಾಧರ್, ನಟ ಗಣೇಶ್, ನಿರ್ದೇಶಕ ಮತ್ತಿತರು ಅರ್ಜುನ್ ಜನ್ಯ ಅವರ ಸ್ಟುಡಿಯೋದಲ್ಲಿ ಶುಕ್ರವಾರ ಬೆಳಗ್ಗೆ ಸಣ್ಣ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ. ನಿರ್ದೇಶಕರ ಪ್ರಕಾರ ಚಿತ್ರದಲ್ಲಿ ಆರು ಹಾಡುಗಳು ಇರುತ್ತವಂತೆ. ಹಿಂದಿನ ಮುಂಗಾರು ಮಳೆಯ ಯಶಸ್ಸಿಗೂ ಪ್ರಮುಖ ಕಾರಣ ಮನೋಮೂರ್ತಿ ನೀಡಿದ್ದ ಸಂಗೀತ. ಇದು ಮರುಕಳಿಸಲಿ ಎಂಬುದು ಹಾರೈಕೆ.

ಈ ಚಲನಚಿತ್ರದಲ್ಲಿ ಖ್ಯಾತ ನಟ ರವಿಚಂದ್ರನ್ ಕೂಡ ನಟಿಸುವ ಸಾಧ್ಯತೆ ಇದೆ ಎನ್ನುತ್ತಾರೆ ಶಶಾಂಕ್. ಮೂಲಗಳ ಪ್ರಕಾರ ಈ ಸಿನೆಮಾದಲ್ಲಿ ಅವರು ಗಣೇಶ್ ಅವರ ತಂದೆಯ ಪಾತ್ರವನ್ನು ನಿರ್ವಹಿಸಲಿದ್ದಾರೆ. "ನಾವು ಅವರ ಜೊತೆ ಮಾತುಕತೆ ನಡೆಸಿದ್ದೇವೆ. ಅವರು ನಮ್ಮ ಜೊತೆಗೆ ಬಂದರೆ ಬಹಳ ಸಂತೋಷವಾಗುತ್ತದೆ" ಎಂದಿದ್ದಾರೆ ಶಶಾಂಕ್. ಈ ಹಿಂದೆ ಮಾಣಿಕ್ಯ ಚಿತ್ರದಲ್ಲಿ ಸುದೀಪ್ ಅವರ ತಂದೆಯ ಪಾತ್ರವನ್ನು ರವಿಚಂದ್ರನ್ ನಿರ್ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT