ನಟ ಶಿವರಾಜ ಕುಮಾರ್ 
ಸಿನಿಮಾ ಸುದ್ದಿ

ಮಹದೇಶ್ವರ ಬೆಟ್ಟಕ್ಕೆ ಹೊರಟ ರಾಮಗೋಪಾಲ ವರ್ಮ

ತಮ್ಮ ಮುಂದಿನ ಮಹತ್ವಾಕಾಂಕ್ಷೆಯ ಯೋಜನೆ 'ಕಿಲ್ಲಿಂಗ್ ವೀರಪ್ಪನ್' ಸಿನೆಮಾಗೆ ನಿರ್ದೇಶಕ ರಾಮ ಗೋಪಾಲ್ ವರ್ಮಾ ಬೆವರು ಸುರಿಸುತ್ತಿದ್ದಾರೆ.

ಬೆಂಗಳೂರು: ತಮ್ಮ ಮುಂದಿನ ಮಹತ್ವಾಕಾಂಕ್ಷೆಯ ಯೋಜನೆ 'ಕಿಲ್ಲಿಂಗ್ ವೀರಪ್ಪನ್' ಸಿನೆಮಾಗೆ ನಿರ್ದೇಶಕ ರಾಮ ಗೋಪಾಲ್ ವರ್ಮಾ ಬೆವರು ಸುರಿಸುತ್ತಿದ್ದಾರೆ. ಸಂಶೋಧನೆಗೆ ಹೆಸರುವಾಸಿಯಾದ ಕೆಲವೇ ನಿರ್ದೇಶಕರಲ್ಲೊಬ್ಬರಾದ ವರ್ಮಾ ಮಹತ್ತ್ವದ ಸಿನೆಮಾವೊಂದನ್ನು ನಿರ್ದೇಶಿಸಲಿದ್ದಾರೆ ಎಂಬ ಭರವಸೆಯಂತೂ ಇದೆ.

ಜೂನ್ ೯ ರಿಂದ ಸಿನೆಮಾದ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದಿದ್ದಾರೆ ನಿರ್ದೇಶಕರು. ಕನ್ನಡ, ಹಿಂದಿ, ತಲಗು ಮತ್ತು ತಮಿಳು ಭಾಷೆಗಳಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಈ ಸಿನೆಮಾಗೆ ಅಂತಿಮ ಪಾತ್ರವರ್ಗದ ಶೋಧನೆಯಲ್ಲಿದ್ದಾರೆ ವರ್ಮ. ಈಗಾಗಲೇ ಚಿತ್ರೀಕರಣದ ಪ್ರದೇಶಗಳನ್ನು ಗುರುತಿಸಿದ್ದು, ಸಂಗಿತದ ಪರಿಕಲ್ಪನೆಯೂ ಮುಗಿದಿದೆ.

ಮುಖ್ಯಪಾತ್ರವೊಂದರಲ್ಲಿ ನಟಿಸುತ್ತಿರುವ ನಟ ಶಿವರಾಜ ಕುಮಾರ್ ತಂಡವನ್ನು ಜೂನ್ ೨೩ಕ್ಕೆ ಸೇರಿಕೊಳ್ಳಲಿದ್ದಾರೆ. "ರಾಷ್ಟ್ರೀಯ ನಾಟಕ ಶಾಲೆಯ ಹಲವು ವಿದ್ಯಾರ್ಥಿಗಳನ್ನು ನಟನೆಗೆ ವರ್ಮಾ ಆಯ್ಕೆ ಮಾಡಿದ್ದು, ಕನ್ನಡ ಚಲನಚಿತ್ರೋದ್ಯಮ ಕೆಲವೇ ನಟರು ಈ ಸಿನೆಮಾದಲ್ಲಿ ಜಾಗ ಪಡೆದಿದ್ದಾರೆ" ಎಂದು ಮೂಲಗಳು ತಿಳಿಸಿವೆ.

ವೀರಪ್ಪನ್ ನ ವಾಸಸ್ಥಾನಗಳಲ್ಲಿ ಒಂದಾಗಿದ್ದ ಮಲೆ ಮಹದೇಶ್ವರ ಬೆಟ್ಟದಲ್ಲಿ ವರ್ಮಾ ಚಿತ್ರೀಕರಣ ನಡೆಸಲಿದ್ದಾರೆ. ಸ್ಟಂಟ್ ಗಳ ನಿರ್ದೇಶನಕ್ಕೆ ಧೂಮ್-೩ ಸಿನೆಮಾದ ಸ್ಟಂಟ್ ಮಾಸ್ಟರ್ ಅವರನ್ನು ಕೆರೆತಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT