ವಿನಯ್ ರಾಜಕುಮಾರ್ 
ಸಿನಿಮಾ ಸುದ್ದಿ

ವಿನಯ್ ರಾಜಕುಮಾರ್ ಮುಂದಿನ ಚಿತ್ರ 'ರನ್ ಆಂಟನಿ'

ತಮ್ಮ ಚೊಚ್ಚಲ ಪ್ರಯತ್ನದಲ್ಲಿ ನಿರೀಕ್ಷಿತ ಯಶಸ್ಸೇನು ದೊರಕದಿದ್ದರಿಂದ ವರನಟ ರಾಜಕುಮಾರ್ ಅವರ ಮೊಮ್ಮಗ ವಿನಯ್ ರಾಜಕುಮಾರ್ ಈ ಬಾರಿ ಹೆಚ್ಚು ಚಿಂತನ ಮಂಥನ

ಬೆಂಗಳೂರು: ತಮ್ಮ ಚೊಚ್ಚಲ ಚಲನಚಿತ್ರ ಸಿದ್ಧಾರ್ಥದಿಂದ ನಿರೀಕ್ಷಿತ ಯಶಸ್ಸೇನು ದೊರಕದಿದ್ದರಿಂದ ವರನಟ ರಾಜಕುಮಾರ್ ಅವರ ಮೊಮ್ಮಗ ವಿನಯ್ ರಾಜಕುಮಾರ್ ಈ ಬಾರಿ ಹೆಚ್ಚು ಚಿಂತನ ಮಂಥನ ನಡೆಸಿದ್ದಾರಂತೆ. ತಮ್ಮ ತಂದೆ ರಾಘವೇಂದ್ರ ರಾಜಕುಮಾರ್ ಅವರೊಂದಿಗೆ ಸುಮಾರು ೩೦ ಸ್ಕ್ರಿಪ್ಟ್ ಗಳನ್ನು ಪರಿಶೀಲಿಸಿ ಕೊನೆಗೆ 'ರನ್ ಆಂಟನಿ' ಅಂತಿಮಗೊಳಿಸಿದ್ದಾರೆ.

ಸಿನೆಮಾವನ್ನು ಚೊಚ್ಚಲ ನಿರ್ದೇಶಕ ರಘು ಶಾಸ್ತ್ರಿ ನಿರ್ದೇಶಿಸಲಿದ್ದು, ಸ್ವಂತ ನಿರ್ಮಾಣ ಸಂಸ್ಥೆ ವಜ್ರೇಶ್ವರಿ ಕಂಬೈನ್ಸ್ ಚಿತ್ರ ನಿರ್ಮಿಸಲಿದೆ.  ಇದಕ್ಕೂ ಮೊದಲು ನಿರ್ದೇಶಕ ಪ್ರೇಮ್ ಸಿನೆಮಾದಲ್ಲಿ ವಿನಯ್ ನಟಿಸಲಿದ್ದಾರೆ ಎಂಬ ಸುದ್ದಿ ಇದ್ದರೂ ಆ ಯೋಜನೆ ರದ್ದಾಗಿದೆ ಎಂದು ತಿಳಿದುಬಂದಿ.

ಇನ್ನೂ ಅಧಿಕೃತ ದಿನಾಂಕ ನಿಗದಿ ಪಡಿಸಬೇಕಾಗಿದೆ ಎನ್ನುವ ರಾಘವೇಂದ್ರ ರಾಜಕುಮಾರ್ "ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶಕ. ಯುವ ತಂತ್ರಜ್ಞರನ್ನು ಆಯ್ಕೆ ಮಾಡಲು ನಿರ್ದೇಶಕನಿಗೆ ಮುಕ್ತ ಅವಕಾಶ ನೀಡಿದ್ದೇವೆ. ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ" ಎಂದು ತಿಳಿಸಿದ್ದಾರೆ.

ನವೆಂಬರ್ ಅಂತ್ಯಕ್ಕೆ ಅಥವಾ ಡಿಸೆಂಬರ್ ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು, ಏಪ್ರಿಲ್ ನಲ್ಲಿ ಸಿನೆಮಾ ತೆರೆ ಕಾಣಲಿದೆ ಎನ್ನಲಾಗಿದೆ.

ವಿನಯ್ ಅವರೇ ಈ ಸ್ಕ್ರಿಪ್ಟ್ ಅಂತಿಮಗೊಳಿಸಿದ್ದು ಎನ್ನುವ ರಾಘವೇಂದ್ರ "ಅವನಿಗೆ ಸ್ಕ್ರಿಪ್ಟ್ ಇಷ್ಟವಾಯಿತು ಆದುದರಿಂದ ನಿರ್ದೇಶಕರ ಜೊತೆ ಮಾತನಾಡಲು ತಿಳಿಸಿದ. ಸ್ಕ್ರಿಪ್ಟ್ ಅವನಿಗೆ ಬಹಳ ಹಿಡಿಸುತ್ತದೆ ಹಾಗೆಯೇ ಶೀರ್ಷಿಕೆ ಕೂಡ" ಎನ್ನುತ್ತಾರೆ.

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರೊಂದಿಗೆ ಕೆಲಸ ಮಾಡಿರುವ ರಘು ಶಾಸ್ತ್ರಿ ಅವರಿಗೆ ಚೊಚ್ಚಲ ಸಿನೆಮಾವನ್ನು ಕನ್ನಡದಲ್ಲಿ ಮಾಡುತ್ತಿರುವುದಕ್ಕೆ ಸಂತಸ ತಂದಿದೆಯಂತೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT