ಕಲ್ಪನಾ-೨ ಸಿನೆಮಾದಲ್ಲಿ ಉಪೇಂದ್ರ 
ಸಿನಿಮಾ ಸುದ್ದಿ

'ಕಲ್ಪಾನ'ಗೆ ಹುರಿಗೊಳ್ಳುತ್ತಿರುವ ಉಪೇಂದ್ರ

ರಾಘವ ಲಾರೆನ್ಸ್ ಅವರ ಕಾಂಚನ ಸಿನೆಮಾ ಸರಣಿ ತಮಿಳು ಚಿತ್ರರಂಗದಲ್ಲಿ ಪ್ರೇಕ್ಷಕರಿಗೆ ಮೋಡಿ ಮಾಡಿ ಮನಗೆದ್ದಿದ್ದು ಈಗ ಇತಿಹಾಸ. ಇದರಿಂದ ಸ್ಫೂರ್ತಿಗೊಂಡು ಕನ್ನಡ ನಟ ಉಪೇಂದ್ರ

ಬೆಂಗಳೂರು: ರಾಘವ ಲಾರೆನ್ಸ್ ಅವರ ಕಾಂಚನ ಸಿನೆಮಾ ಸರಣಿ ತಮಿಳು ಚಿತ್ರರಂಗದಲ್ಲಿ ಪ್ರೇಕ್ಷಕರಿಗೆ ಮೋಡಿ ಮಾಡಿ ಮನಗೆದ್ದಿದ್ದು ಈಗ ಇತಿಹಾಸ. ಇದರಿಂದ ಸ್ಫೂರ್ತಿಗೊಂಡು ಕನ್ನಡ ನಟ ಉಪೇಂದ್ರ ಅದಕ್ಕೆ ತಮ್ಮದೇ ಆದ ಹೊಳಹುಗಳನ್ನು ಸೇರಿಸುತ್ತಿದ್ದಾರೆ.

ಕಲ್ಪನಾ -೨ ತಮಿಳಿನ ಕಾಂಚನ೨ ರಿಮೇಕ್. ಲಾರೆನ್ಸ್ ಅವರ ಮೂಲಕ್ಕಿಂತಲೂ ವಿಭಿನ್ನವಾಗಿ ಮಾಡುವುದು ನಿರ್ದೇಶಕ ಆರ್ ಅನಂತ ರಾಜು ಅವರಿಗೆ ಸವಾಲಂತೆ. "ಲಾರೆನ್ಸ್ ಅವರಿಗೆ ದೊಡ್ಡ ನಟರನ್ನು ನಿಭಾಯಿಸುವ ಕಷ್ಟವಿರಲಿಲ್ಲ. ಅವರು ಪಾತ್ರದ ಜೊತೆ ಸಾಮಾನ್ಯವಾಗಿ ಆಟವಾಡಿದರು. ಇಲ್ಲಿ ಉಪೇಂದ್ರ ಇರುವುದರಿಂದ ಸನ್ನಿವೇಶ ಬದಲಾಗಿದೆ" ಎನ್ನುತ್ತಾರೆ.

ಉಪೇಂದ್ರ ಅವರ ಇಮೇಜ್ ಮತ್ತು ಪಾತ್ರವನ್ನು ಸರಿದೂಗಿಸುವುದು ಪ್ರಮುಖ ಸವಾಲು ಎನ್ನುವ ನಿರ್ದೇಶಕ "ಉಳಿತ ಪಾತ್ರವರ್ಗದ ಪರಿಕಲ್ಪನೆ ಅದೇ ಆಗಿರುತ್ತದೆ" ಎನ್ನುತ್ತಾರೆ. ದ್ವಿತೀಯಾರ್ಧದ ಕಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸುವ ಅನಂತ "ಮೂಲದಲ್ಲಿ ಒಂದೇ ದಿನದಲ್ಲಿ ನಡೆಯುವ ಹಲವಾರು ಘಟನೆಗಳನ್ನು ತೋರಿಸಿದ್ದಾರೆ. ಇಲ್ಲಿ ನಮ್ಮ ಪ್ರೇಕ್ಷಕರಿಗೆ ಅದು ಕರಗತವಾಗುವುದು ಸ್ವಲ ಕಷ್ಟ. ಇಲ್ಲಿ ಕ್ರಮಬದ್ಧವಾಗಿ ಸ್ಪಷ್ಟತೆಯನ್ನು ಕೋರುತ್ತಾರೆ. ಹಾಗೆಯೇ ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದೇನೆ" ಎನ್ನುತ್ತಾರೆ.

ಪ್ರಿಯಾಮಣಿ ನಾಯಕನಟಿಯಾಗಿದ್ದು ಉಪೇಂದ್ರ ಎದುರು ಇದೇ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ಪ್ರಕಾಶ್ ಹೆಬ್ಗೋಡು ಖಳನಾಯಕ. ಪೆಟ್ರೋಲ್ ಪ್ರಸನ್ನ ಮತ್ತು ವಿಕ್ಟರಿ ವಾಸು ತಾರಾಗಣದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT