'ಜಗ್ಗು ದಾದ' ನಟ ದರ್ಶನ್ 
ಸಿನಿಮಾ ಸುದ್ದಿ

ಚೇತರಿಸಿಕೊಂಡು ಕೆಲಸಕ್ಕೆ ಮರಳಿದ ದರ್ಶನ್

ಪೆಟ್ಟಿನಿಂದ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ನಟ ದರ್ಶನ್ ಈಗ ಗುಣಮುಖರಾಗಿ ಮತ್ತೆ ಕೆಲಸಕ್ಕೆ ಹಿಂದಿರುಗಿರುವುದರಿಂದ 'ಜಗ್ಗು ದಾದ' ಚಿತ್ರತಂಡ ನಿಟ್ಟುಸಿರು ಬಿಟ್ಟಿದೆ. ಸದ್ಯಕ್ಕೆ ನಟ 'ವಿರಾಟ್'

ಬೆಂಗಳೂರು: ಪೆಟ್ಟಿನಿಂದ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ನಟ ದರ್ಶನ್ ಈಗ ಗುಣಮುಖರಾಗಿ ಮತ್ತೆ ಕೆಲಸಕ್ಕೆ ಹಿಂದಿರುಗಿರುವುದರಿಂದ 'ಜಗ್ಗು ದಾದ' ಚಿತ್ರತಂಡ ನಿಟ್ಟುಸಿರು ಬಿಟ್ಟಿದೆ. ಸದ್ಯಕ್ಕೆ ನಟ 'ವಿರಾಟ್' ಸಿನೆಮಾದ ಡಬ್ಬಿಂಗ್ ಕಾರ್ಯದಲ್ಲಿ ನಿರತರಾಗಿದ್ದು, ಮುಂದೂಡಲಾಗಿದ್ದ 'ಜಗ್ಗು ದಾದ' ಚಿತ್ರೀಕರಣಕ್ಕೆ ಮರಳಲಿದ್ದಾರೆ.

"ನಾನು 'ವಿರಾಟ್' ಸಿನೆಮಾದ ಮೊದಲಾರ್ಧದ ಡಬ್ಬಿಂಗ್ ಮಂಗಳವಾರ ಮುಗಿಸಲಿದ್ದೇನೆ. ಇನ್ನು ಕಾಯಲು ಸಾಧ್ಯವಿಲ್ಲ ಆದುದರಿಂದ ಜಗ್ಗು ದಾದ ತಂಡಕ್ಕೆ ಡಿಸೆಂಬರ್ ೧ ರಿಂದ ಶೂಟ್ ಮಾಡಲು ಸಿದ್ಧರಾಗಿರುವಂತೆ ಹೇಳಿದ್ದೇನೆ" ಎಂದು ದಶನ್ ಹೇಳಿದ್ದಾರೆ.

ವೈದ್ಯರು ಎಡಗೈಗೆ ಹೆಚ್ಚು ಒತ್ತಡ ಹೇರದಂತೆ ವಿಶ್ರಾಂತಿ ನೀಡಲು ಸಲಹೆ ನೀಡಿದ್ದರೂ ಹಾಸಿಗೆಯಲ್ಲಿ ಸದಾ ಮಲಗಿರಲು ಸಾಧ್ಯವಿಲ್ಲ ಎನ್ನುತ್ತಾರೆ ದರ್ಶನ್. "ನನಗೆ ಸಾಕಾಗಿ ಹೋಗಿದೆ. ನನ್ನ ಜೀವನಶೈಲಿಯಲ್ಲಿ ಯಾವಾಗಲು ಬ್ಯುಸಿಯಾಗಿರಲು ಬಯಸುತ್ತೇನೆ. ನಾನು ಸಾಮಾನ್ಯವಾಗಿ ಬೆಳಗ್ಗೆ ೫:೩೦ಕ್ಕೆ ಎದ್ದು ಜಿಮ್ಮಿಗೆ ಹೋಗಿ ನಂತರ ಚಿತ್ರೀಕರಣಕ್ಕೆ ತೆರಳುತ್ತೇನೆ. ಆದರೆ ಈ ಪೆಟ್ಟಿನಿಂದ ಸೋಮಾರಿಯಾಗುವುದರ ದುಷ್ಪರಿಣಾಮಗಳು ತಿಳಿಯಿತು" ಎನ್ನುತಾರೆ.

ಈ ವಿಶ್ರಾಂತಿಯಿಂದಾದ ಒಂದೇ ಒಳ್ಳೆಯ ಸಂಗತಿಯೆಂದರೆ ಗಡ್ಡ ಬೆಳೆಸಿದ್ದು ಎನ್ನುವ ದರ್ಶನ್ 'ಜಗ್ಗು ದಾದ' ಸಿನೆಮಾಗೆ ಈ ಲುಕ್ಸ್ ಬೇಕಾಗಿತ್ತು ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT